AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಕದ್ರಿ ಜೋಗಿ ಮಠದ ಮತ್ಸ್ಯೇಂದ್ರನಾಥ ಗುಡಿ ಆವರಣದಲ್ಲಿ ಕ್ರಿ.ಶ 1423 ಕಾಲದ ಶಾಸನ ಪತ್ತೆ

ವಿಜಯನಗರ ಅರಸ ವಿಜಯ ಭೂಪತಿರಾಯರ ಕಾಲದ ಶಾಸನವೊಂದು ಕದ್ರಿ ಜೋಗಿ ಮಠದ ಮತ್ಸ್ಯೇಂದ್ರನಾಥ ಗುಡಿಯ ಆವರಣದಲ್ಲಿ ಪತ್ತೆಯಾಗಿದೆ.

ಮಂಗಳೂರು: ಕದ್ರಿ ಜೋಗಿ ಮಠದ ಮತ್ಸ್ಯೇಂದ್ರನಾಥ ಗುಡಿ ಆವರಣದಲ್ಲಿ ಕ್ರಿ.ಶ 1423 ಕಾಲದ ಶಾಸನ ಪತ್ತೆ
ಕದ್ರಿ ಜೋಗಿ ಮಠ (ಎಡಚಿತ್ರ) ಶಾಸನ (ಬಲಚಿತ್ರ)
ವಿವೇಕ ಬಿರಾದಾರ
|

Updated on: Mar 29, 2023 | 9:25 AM

Share

ಮಂಗಳೂರು: ವಿಜಯನಗರ (Vijaynagar) ಅರಸ ವಿಜಯ ಭೂಪತಿರಾಯರ ಕಾಲದ ಶಾಸನವೊಂದು ಕದ್ರಿ ಜೋಗಿ ಮಠದ ಮತ್ಸ್ಯೇಂದ್ರನಾಥ ಗುಡಿಯ ಆವರಣದಲ್ಲಿ ಪತ್ತೆಯಾಗಿದೆ. ಈ ಶಸನವನ್ನು ಪ್ಲೀಚ್ ಇಂಡಿಯಾ ಫೌಂಡೇಶನ್‌- ಹೈದರಾಬಾದ್​​ನ ಇತಿಹಾಸ ಮತ್ತು ಪರಾತತ್ವ ಸಂಶೋಧಕ ಸಂಶೋಧಕ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆಯವರು ಪತ್ತೆ ಹಚ್ಚಿದ್ದಾರೆ. ಇತ್ತೀಚೆಗೆ ದೇವಾಲಯದ ಜೀರ್ಣೋದ್ಧಾರ ಸಂದರ್ಭದಲ್ಲಿ ಈ ಶಾಸನವನ್ನು ಸಿಕ್ಕಿದೆ. ಗ್ರಾನೈಟ್ ಕಲ್ಲಿನ ಮೇಲೆ ಕನ್ನಡ ಭಾಷೆಯಲ್ಲಿ “ಸ್ವಸ್ತಿಶ್ರೀ” ಎಂಬ ಮಂಗಳಕರ ಪದ ಮತ್ತು ಗಣೇಶನಿಗೆ ಅರ್ಪಿತವಾದ ಸ್ತೋತ್ರವನ್ನು ಕೆತ್ತಲಾಗಿದೆ ಎಂದು ಶ್ರುತೇಶ್ ಆಚಾರ್ಯರು ತಿಳಿಸಿದ್ದಾರೆ.

ಶಾಸನದ ಮೇಲ್ಭಾಗ ಮಾತ್ರ ದೊರೆತ್ತಿದ್ದು, ಕೆಳಭಾಗ ಮಣ್ಣಿನಲ್ಲಿ ಹುದುಗಿದೆ. ಮೇಲ್ಭಾಗದಲ್ಲಿ ದಕ್ಷಿಣ ಭಾರತೀಯ ಶಾಸನ ಸಂಪುಟ-7, ಶಾಸನ ಸಂಖ್ಯೆ:192ರ ಮೊದಲ 10 ಸಾಲುಗಳನ್ನು ಬರೆಯಲಾಗಿದೆ. ಶಾಸನ 32 ಸಾಲುಗಳನ್ನು ಹೊಂದಿದ್ದು, ಸಮಗ್ರ ಅಧ್ಯಯನ ನಡೆಸಿ ಹೆಚ್ಚಿನ ವಿವರಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಕದ್ರಿ ದೇವಸ್ಥಾನದ ಪ್ರಧಾನ ಗುಮಾಸ್ತ ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.

ಶಾಸನದ ಮೇಲ್ಭಾಗದಲ್ಲಿ, ಶಿವಲಿಂಗ, ಸೂರ್ಯ ಮತ್ತು ಚಂದ್ರ, ನಂದಿ ಮತ್ತು ನಂದಾದೀಪ (ದೀರ್ಘಕಾಲದ ವಚನ ದೀಪ) ಚಿತ್ರಗಳನ್ನು ಕಾಣಬಹುದು. ಈ ಶಾಸನವನ್ನು ಕ್ರಿ.ಶ. 1423 ಮಂಗಳೂರಿನ ದೊರೆ ನಾಗಣ್ಣ ಹೊರಡಿಸಿದ್ದಾರೆ. ದೂರ ವಿಜಯ ಭೂಪತಿರಾಯನ ಆಯುಷ್ಯಾಭಿವೃದ್ಧಿಗಾಗಿ ಶಕವರುಷ 1345ನೆಯ ಶೋಭಕೃತ ಸಂವತ್ಸರದ ಚೈತ್ರ ಶುದ್ಧ ಆದಿತ್ಯವಾರ (ಸಾ.ಶ. 21/02/1423) ದಂದು ಶ್ರೀ ತಿಮಿರೇಶ್ವರ ದೇವರಲ್ಲಿ ಶಾಲಂಕಾಯನ ಗೋತ್ರದ ರುಕ್ ಶಾಖೆಯ ನರಹರಿ ಭಟ್ಟರ ಪುತ್ರ ಕೃಷ್ಣ ಭಟ್ಟರು ಮತ್ತು ಆತ್ರೇಯ ಗೋತ್ರದ ಯರ್ಜು ಶಾಖೆಯ ಅನಂತ ಭಟ್ಟರ ಪುತ್ರ ಮಾಯಿ ಭಟ್ಟರಿಂದ ದುರ್ಗಾದೇವಿಯ ಜಪವ ಮಾಡಿಸುತ್ತಾನೆ.

ಇದನ್ನೂ ಓದಿ: ಉಡುಪಿಯಲ್ಲಿ 400 ವರ್ಷಗಳಷ್ಟು ಹಳೆಯದಾದ ‘ಲಿಂಗ ಮುದ್ರೆ’ ಕಲ್ಲು ಪತ್ತೆ!

ಈ ವೇಳೆ ಇಬ್ಬರು ಬ್ರಾಹ್ಮಣ ಕೃಷ್ಣ ಭಟ್ಟ ಮತ್ತು ಮಹಿ ಭಟ್ಟರಿಗೆ 120 ಮೂಡೆ ಭತ್ತ ಬೆಳೆಯುವ ಭೂಮಿಯನ್ನು ದಾನವಾಗಿ ನೀಡಿದನ್ನು ಕೆತ್ತಲಾಗಿದೆ. ಈ ದಾನದ ಸಮಯದಲ್ಲಿ ಮಂಗಳೂರಿನ ವಿಜಯನಗರ ಸಾಮ್ರಾಜ್ಯದ ಆಗಿನ ಪ್ರತಿನಿಧಿಯಾಗಿದ್ದ ಬೈಚೆ ದಂಡನಾಯಕ ಉಪಸ್ಥಿತನಿದ್ದನು. ಶಾಸನವು ಮಂಜುನಾಥ ಮತ್ತು ಚಕ್ರಪಾಣಿ ಗೋಪಿನಾಥ ದೇವಸ್ಥಾನಗಳ ಬಗ್ಗೆ ತಿಳಿಸುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?