AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡ್ಜಸ್ಟ್​​ಮೆಂಟ್ ಅಶೋಕ್, ಬಜರಂಗದಳದ ಪ್ರತಿರೋಧ ಎದುರಿಸಲು ಸಿದ್ಧರಾಗಿ: ವಿಪಕ್ಷ ನಾಯಕನಿಗೆ ಪುನೀತ್ ಅತ್ತಾವರ ಎಚ್ಚರಿಕೆ

ಅಧಿವೇಶನದಲ್ಲಿ ಆರ್.ಅಶೋಕ್ ಅವರು ಭಜರಂಗದಳ ಕಾರ್ಯಕರ್ತರ ಬಗ್ಗೆ ನೀಡಿದ ಹೇಳಿಕೆ ಮಂಗಳೂರು ಭಜರಂಗದಳ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಮಂಗಳೂರಿನ ಬಜರಂಗದಳದ ಕಾರ್ಯಕರ್ತರ ಪ್ರತಿರೋಧ ಎದುರಿಸಲು ಸಿದ್ಧರಾಗಿ ಎಂದು ಭಜರಂಗದಳ ಮಂಗಳೂರು ವಿಭಾಗ ಸಹಸಂಯೋಜಕ ಪುನೀತ್ ಅತ್ತಾವರ ಅವರು ಆರ್.ಅಶೋಕ್​ಗೆ ಎಚ್ಚರಿಕೆ ನೀಡಿದ್ದಾರೆ.

ಅಡ್ಜಸ್ಟ್​​ಮೆಂಟ್ ಅಶೋಕ್, ಬಜರಂಗದಳದ ಪ್ರತಿರೋಧ ಎದುರಿಸಲು ಸಿದ್ಧರಾಗಿ: ವಿಪಕ್ಷ ನಾಯಕನಿಗೆ ಪುನೀತ್ ಅತ್ತಾವರ ಎಚ್ಚರಿಕೆ
ಆರ್.ಅಶೋಕ್, ಪುನೀತ್ ಅತ್ತಾವರ
ಅಶೋಕ್​ ಪೂಜಾರಿ, ಮಂಗಳೂರು
| Updated By: ಆಯೇಷಾ ಬಾನು|

Updated on:Feb 21, 2024 | 10:29 AM

Share

ಮಂಗಳೂರು,ಫೆ.21: ನಾನು ಗೃಹ ಸಚಿವನಾಗಿದ್ದಾಗ ಭಜರಂಗದಳದವರ (Bajrang Dal) ಮೇಲೆಯೇ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಅಧಿವೇಶನದಲ್ಲಿ ಹೇಳಿಕೊಂಡ ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R.Ashok) ವಿರುದ್ದ ಭಜರಂಗದಳ ಕಿಡಿಕಾರಿದೆ. ಅಶೋಕ್ ಹೇಳಿಕೆ ವಿರುದ್ದ ಮಂಗಳೂರು ಭಜರಂಗದಳ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದು ಮಂಗಳೂರಿನ ಬಜರಂಗದಳದ ಕಾರ್ಯಕರ್ತರ ಪ್ರತಿರೋಧ ಎದುರಿಸಲು ಸಿದ್ಧರಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ವಿಪಕ್ಷ ನಾಯಕ ಆರ್‌‌.ಅಶೋಕ್​ಗೆ ಭಜರಂಗದಳ ಮಂಗಳೂರು ವಿಭಾಗ ಸಹಸಂಯೋಜಕ ಪುನೀತ್ ಅತ್ತಾವರ ಅವರು ತನ್ನ ಫೇಸ್ ಬುಕ್ ಖಾತೆಯಲ್ಲಿ ಬಹಿರಂಗ ಎಚ್ಚರಿಕೆ ನೀಡಿದ್ದಾರೆ.

‘ನೀವು ಆರ್ ಅಶೋಕ್ ಅಲ್ಲ..ನಿಮ್ಮ ಹೆಸರನ್ನು ಎ ಅಶೋಕ್ ಅಂತ ಬದಲಾಯಿಸಿ ಬಿಡಿ ಅಡ್ಜಸ್ಟ್ ಮೆಂಟ್ ಅಶೋಕ್ ಅವರೇ.. ನಿಮ್ಮ ನಾಲಗೆಯನ್ನು ನಾಲಗೆ ರೀತಿಯಲ್ಲಿ ಬಳಸಿ, ಎಕ್ಕಡದ ರೀತಿ ಬಳಸಿಕೊಳ್ಳಬೇಡಿ. ಅಡ್ಜಸ್ಟ್ ಮೆಂಟ್ ರಾಜಕಾರಣ ಎಂಬ ಕೊಚ್ಚೆಯಲ್ಲಿ ಹೊರಳಾಡುತ್ತಿರುವ ನಿಮಗೆ ಬಜರಂಗದಳದ ಕಾರ್ಯಕರ್ತರ ಹೆಸರು ಎತ್ತಲೂ ಯೋಗ್ಯತೆಯಿಲ್ಲ. ಪ್ರತಿಪಕ್ಷನಾಯಕನಾಗಿರುವ ನೀವು ಒಂದಲ್ಲ ಒಂದು ದಿನ ಮಂಗಳೂರಿಗೆ ಬಂದೇ ಬರುತ್ತೀರಿ. ಹಿಂದೂ ವಿರೋಧಿ ಕೃತ್ಯಕ್ಕೆ ಪ್ರತಿರೋಧ ಒಡ್ಡಿ ಹೋರಾಡುವ ನಮಗೆ ನೀವೊಬ್ಬರು ಹೆಚ್ಚಾಗುವುದಿಲ್ಲ. ಬಜರಂಗದಳದ ಕಾರ್ಯಕರ್ತರ ಬಗ್ಗೆ ಆಡಿದ ಮಾತುಗಳನ್ನು ಹಿಂದೆ ಪಡೆಯಿರಿ. ಇಲ್ಲದಿದ್ದರೆ ಬಜರಂಗದಳದ ಕಾರ್ಯಕರ್ತರ ಪ್ರತಿರೋಧವನ್ನು ಎದುರಿಸಲು ಸಿದ್ಧರಾಗಿ ಎಂದು ಭಜರಂಗದಳ ಮುಖಂಡ ಪುನೀತ್ ಫೇಸ್​ಬುಕ್ ಮೂಲಕ ಆರ್.ಅಶೋಕ್​ಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಫಲಾನುಭವಿಗಳಿಗೆ ತಲುಪದ ಮಾಸಾಶನ: ಪಿಂಚಣಿ ನೀಡಲೂ ಹಣವಿಲ್ಲದ ಶೋಚನೀಯ ಪರಿಸ್ಥಿತಿಯಲ್ಲಿದೆ ಸರ್ಕಾರ; ಆರ್​ ಅಶೋಕ್​

ಅಧಿವೇಶನದಲ್ಲಿ ಆರ್.ಅಶೋಕ್ ಹೇಳಿದ್ದೇನು?

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ನಿನ್ನೆ ನಡೆದ ಅಧಿವೇಶನದಲ್ಲಿ ಮಂಗಳೂರು ಹಬ್ ದಾಳಿ ಬಗ್ಗೆ ಮಾತನಾಡಿದರು. ಪಬ್ ದಾಳಿ ವೇಳೆ ನಾನು ರಾಜ್ಯದ ಗೃಹ ಸಚಿವನಾಗಿದ್ದೆ. ಅವತ್ತು ಭಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ. ನಾನು ಯಾವುದೇ ಒತ್ತಡಕ್ಕೆ ಮಣಿಯದೇ ಪಬ್ ದಾಳಿ ಮಾಡಿದ್ದ ಭಜರಂಗದಳದವರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಅಧಿವೇಶನದಲ್ಲಿ ಹೇಳಿಕೆ ನೀಡಿದ್ದರು. ಈಗಿನ ಗೃಹ ಸಚಿವ ಪರಮೇಶ್ವರ್​ಗೆ ಬುದ್ದಿ ಹೇಳೋ ಭರದಲ್ಲಿ ಆರ್.ಅಶೋಕ್ ಮಾತನಾಡಿದ್ದರು. ಸದ್ಯ ಅಶೋಕ್​ ಅವರ ಈ ಹೇಳಿಕೆಗೆ ಆಕ್ರೋಶ ಭುಗಿಲೆದ್ದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:54 am, Wed, 21 February 24

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್