AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರ ಮೇಲೆ ತಾಲಿಬಾನಿಗಳ ದೌರ್ಜನ್ಯ ಎಂಥದ್ದು? ಮಂಗಳೂರು ವಿವಿಯ ಆಫ್ಘನ್ ವಿದ್ಯಾರ್ಥಿ ಬಿಚ್ಚಿಟ್ಟ ವಿಚಾರ ಇದು

Afghanistan: ಅಫ್ಘಾನಿಸ್ತಾನದ ಪರಿಸ್ಥಿತಿ, ಆಡಳಿತ, ಅವರ ಕಾನೂನು, ಹಿಂಸಾಚಾರ, ಭಯೋತ್ಪಾದನೆ, ಆರ್ಥಿಕತೆ, ವಿದೇಶ ನೀತಿ ಇತ್ಯಾದಿಗಳು ಒಂದು ಕಡೆ ಆದರೆ ಮತ್ತೊಂದು ಕಡೆ ಅಷ್ಟೇ ಮುಖ್ಯವಾಗಿ ಮತ್ತು ಘನವಾಗಿ ಚರ್ಚೆ ಆಗುತ್ತಿರುವುದು ಅಲ್ಲಿನ ಮಹಿಳೆಯರ ಸ್ಥಿತಿಗತಿ.

ಮಹಿಳೆಯರ ಮೇಲೆ ತಾಲಿಬಾನಿಗಳ ದೌರ್ಜನ್ಯ ಎಂಥದ್ದು? ಮಂಗಳೂರು ವಿವಿಯ ಆಫ್ಘನ್ ವಿದ್ಯಾರ್ಥಿ ಬಿಚ್ಚಿಟ್ಟ ವಿಚಾರ ಇದು
ಮಂಗಳೂರಿನಲ್ಲಿ ಕಲಿಯುತ್ತಿರುವ ಅಫ್ಘಾನಿಸ್ತಾನದ ವಿದ್ಯಾರ್ಥಿನಿ
TV9 Web
| Edited By: |

Updated on: Aug 21, 2021 | 5:35 PM

Share

ಮಂಗಳೂರು: ಅಫ್ಘಾನಿಸ್ತಾನದಲ್ಲಿ ಮಹಿಳೆಯರು, ಮಕ್ಕಳ ಮೇಲೆ ದೌರ್ಜನ್ಯ ಎಂಥದ್ದು ಎಂದು ಕಳೆದ ಕೆಲವು ದಿನಗಳಿಂದ ಚರ್ಚೆ ಆಗುತ್ತಲೇ ಇದೆ. ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಂಡಿದ್ದಾರೆ. ಅಲ್ಲಿನ ಆಡಳಿತವನ್ನು ತಾವೇ ನೋಡಿಕೊಳ್ಳುವುದಾಗಿ ಹಾಗೂ ಮಹಿಳೆಯರಿಗೂ ಉತ್ತಮ ಜೀವನ ನಡೆಸುವ ಆಯ್ಕೆ ನೀಡುವುದಾಗಿ ತಾಲಿಬಾನ್ ನಾಯಕರು ಹೇಳಿದ್ದಾರೆ. ಆದರೆ, ಹೀಗೆ ಹೇಳಿದ ಬಳಿಕವೂ ಮಹಿಳೆಯರ ಮೇಲಿನ ಅನೇಕ ದೌರ್ಜನ್ಯ, ವಿಕೃತಿ, ಹಿಂಸಾಚಾರದ ದೃಶ್ಯಗಳನ್ನು ನಾವು ನೋಡುತ್ತಲೇ ಇದ್ದೇವೆ. ವಿಮಾನದ ಮೇಲ್ಮೈಯಲ್ಲಾದರೂ ಸರಿ ಬೇರೆ ಕಡೆ ಹೋಗಿ ಬದುಕೋಣ ಎಂಬ ಜನರ ಭಾವವೇ ಅಲ್ಲಿನ ಭಯವನ್ನು ತೋರಿಸುತ್ತಿದೆ ಎಂದು ಹೇಳಲಾಗುತ್ತಿದೆ. ಈ ಮಧ್ಯೆ, ಅಲ್ಲಿಂದ ಹೊರ ಹೋಗುತ್ತಿರುವವರಲ್ಲಿ ಕೇವಲ ಪುರುಷರೇ ಕಾಣಿಸುತ್ತಿದ್ದಾರೆ. ಮಹಿಳೆಯರು ಎಲ್ಲಿದ್ದಾರೆ? ಅವರ ಮೇಲಿನ ದೌರ್ಜನ್ಯ ಅಥವಾ ಹಿಂಸಾಚಾರ ಎಂಥದ್ದು ಎಂದು ಹಲವರು ಪ್ರಶ್ನೆ ಮಾಡುತ್ತಿದ್ದಾರೆ.

ಅಫ್ಘಾನಿಸ್ತಾನದ ಪರಿಸ್ಥಿತಿ, ಆಡಳಿತ, ಅವರ ಕಾನೂನು, ಹಿಂಸಾಚಾರ, ಭಯೋತ್ಪಾದನೆ, ಆರ್ಥಿಕತೆ, ವಿದೇಶ ನೀತಿ ಇತ್ಯಾದಿಗಳು ಒಂದು ಕಡೆ ಆದರೆ ಮತ್ತೊಂದು ಕಡೆ ಅಷ್ಟೇ ಮುಖ್ಯವಾಗಿ ಮತ್ತು ಘನವಾಗಿ ಚರ್ಚೆ ಆಗುತ್ತಿರುವುದು ಅಲ್ಲಿನ ಮಹಿಳೆಯರ ಸ್ಥಿತಿಗತಿ. ಮಕ್ಕಳ ಜೀವನ. ಮಾನವ ಹಕ್ಕುಗಳು ಇತ್ಯಾದಿ. ಈ ಬಗ್ಗೆ ಸ್ವತಃ ಅಫ್ಘಾನಿಸ್ತಾನದ ಮತ್ತು ಈಗ ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ ಕ್ರಿಸ್ಮಾ ರಸೂಲಿ ಟಿವಿ9 ಜೊತೆಗೆ ಮಾಹಿತಿ ಹಂಚಿಕೊಂಡಿದ್ದಾರೆ.

ತಾಲಿಬಾನಿಗಳ ಈ ಹಿಂಸಾಚಾರವನ್ನು ಯಾವತ್ತೂ ಕ್ಷಮಿಸಲ್ಲ. ತಾಲಿಬಾನಿಗಳಿಂದ ಆಫ್ಘನ್‌ ಮಹಿಳೆಯರಿಗೆ ಭಾರಿ ರಣಹಿಂಸೆ ನೀಡಲಾಗುತ್ತದೆ. ಬುರ್ಖಾ ಧರಿಸಿಯೇ ಮನೆಯಿಂದ ಹೊರಬರುವಂತೆ ಹಿಂಸೆ ನೀಡುತ್ತಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಕ್ರೌರ್ಯಕ್ಕೆ ಭಯ ಆಗ್ತಿದೆ. ಆಫ್ಘನ್‌ನ ಶಿಕ್ಷಿತ ಸಮುದಾಯಕ್ಕೆ ಭವಿಷ್ಯದ ಬಗ್ಗೆ ದಿಗಿಲು ಇದ್ದೇ ಇದೆ. ಅವರು ಮನೆ ಬಿಟ್ಟು ಹೊರಗೆ ಬಾರದಂತೆ ಮಹಿಳೆಯರಿಗೆ ದಿಗ್ಬಂಧನ ಹೇರುತ್ತಾರೆ. ತಾಲಿಬಾನಿ ರಕ್ಕಸ ರೂಪಕ್ಕೆ ಏರ್‌ಪೋರ್ಟ್‌ ದೃಶ್ಯಗಳೇ ಸಾಕ್ಷಿ ಎಂದು ಮಾಹಿತಿ ನೀಡಿದ್ದಾರೆ. ಅಲ್ಲಿನ ದೈಹಿಕ ಹಿಂಸೆಗಿಂತ ಮಾನಸಿಕ ಭಯ, ಆತಂಕ, ದೌರ್ಜನ್ಯವನ್ನು ಸಹಿಸಿರುವುದು ಕಷ್ಟ. ಆ ಜೀವನ ಯಾರಿಗೂ ಬೇಡ ಎಂದು ಅನಿಸುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ತಿರುಗಿಬಿದ್ದ ಸ್ಥಳೀಯರು, ಅಫ್ಘಾನಿಸ್ತಾನದ 3 ಜಿಲ್ಲೆಗಳು ತಾಲಿಬಾನಿಗಳಿಂದ ಮುಕ್ತ; ಅಚ್ಚರಿಯ ಬೆಳವಣಿಗೆ

ಅಫ್ಘಾನಿಸ್ತಾನಕ್ಕೆ ಹಣ ನೀಡದಿರಲು ಐಎಂಎಫ್ ನಿರ್ಧಾರ; ಆರ್ಥಿಕ ಬಲ ಇಲ್ಲದೆ ತಾಲಿಬಾನಿಗಳು ಕಂಗಾಲು

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್