AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರ ಮೇಲೆ ತಾಲಿಬಾನಿಗಳ ದೌರ್ಜನ್ಯ ಎಂಥದ್ದು? ಮಂಗಳೂರು ವಿವಿಯ ಆಫ್ಘನ್ ವಿದ್ಯಾರ್ಥಿ ಬಿಚ್ಚಿಟ್ಟ ವಿಚಾರ ಇದು

Afghanistan: ಅಫ್ಘಾನಿಸ್ತಾನದ ಪರಿಸ್ಥಿತಿ, ಆಡಳಿತ, ಅವರ ಕಾನೂನು, ಹಿಂಸಾಚಾರ, ಭಯೋತ್ಪಾದನೆ, ಆರ್ಥಿಕತೆ, ವಿದೇಶ ನೀತಿ ಇತ್ಯಾದಿಗಳು ಒಂದು ಕಡೆ ಆದರೆ ಮತ್ತೊಂದು ಕಡೆ ಅಷ್ಟೇ ಮುಖ್ಯವಾಗಿ ಮತ್ತು ಘನವಾಗಿ ಚರ್ಚೆ ಆಗುತ್ತಿರುವುದು ಅಲ್ಲಿನ ಮಹಿಳೆಯರ ಸ್ಥಿತಿಗತಿ.

ಮಹಿಳೆಯರ ಮೇಲೆ ತಾಲಿಬಾನಿಗಳ ದೌರ್ಜನ್ಯ ಎಂಥದ್ದು? ಮಂಗಳೂರು ವಿವಿಯ ಆಫ್ಘನ್ ವಿದ್ಯಾರ್ಥಿ ಬಿಚ್ಚಿಟ್ಟ ವಿಚಾರ ಇದು
ಮಂಗಳೂರಿನಲ್ಲಿ ಕಲಿಯುತ್ತಿರುವ ಅಫ್ಘಾನಿಸ್ತಾನದ ವಿದ್ಯಾರ್ಥಿನಿ
TV9 Web
| Updated By: ganapathi bhat|

Updated on: Aug 21, 2021 | 5:35 PM

Share

ಮಂಗಳೂರು: ಅಫ್ಘಾನಿಸ್ತಾನದಲ್ಲಿ ಮಹಿಳೆಯರು, ಮಕ್ಕಳ ಮೇಲೆ ದೌರ್ಜನ್ಯ ಎಂಥದ್ದು ಎಂದು ಕಳೆದ ಕೆಲವು ದಿನಗಳಿಂದ ಚರ್ಚೆ ಆಗುತ್ತಲೇ ಇದೆ. ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಂಡಿದ್ದಾರೆ. ಅಲ್ಲಿನ ಆಡಳಿತವನ್ನು ತಾವೇ ನೋಡಿಕೊಳ್ಳುವುದಾಗಿ ಹಾಗೂ ಮಹಿಳೆಯರಿಗೂ ಉತ್ತಮ ಜೀವನ ನಡೆಸುವ ಆಯ್ಕೆ ನೀಡುವುದಾಗಿ ತಾಲಿಬಾನ್ ನಾಯಕರು ಹೇಳಿದ್ದಾರೆ. ಆದರೆ, ಹೀಗೆ ಹೇಳಿದ ಬಳಿಕವೂ ಮಹಿಳೆಯರ ಮೇಲಿನ ಅನೇಕ ದೌರ್ಜನ್ಯ, ವಿಕೃತಿ, ಹಿಂಸಾಚಾರದ ದೃಶ್ಯಗಳನ್ನು ನಾವು ನೋಡುತ್ತಲೇ ಇದ್ದೇವೆ. ವಿಮಾನದ ಮೇಲ್ಮೈಯಲ್ಲಾದರೂ ಸರಿ ಬೇರೆ ಕಡೆ ಹೋಗಿ ಬದುಕೋಣ ಎಂಬ ಜನರ ಭಾವವೇ ಅಲ್ಲಿನ ಭಯವನ್ನು ತೋರಿಸುತ್ತಿದೆ ಎಂದು ಹೇಳಲಾಗುತ್ತಿದೆ. ಈ ಮಧ್ಯೆ, ಅಲ್ಲಿಂದ ಹೊರ ಹೋಗುತ್ತಿರುವವರಲ್ಲಿ ಕೇವಲ ಪುರುಷರೇ ಕಾಣಿಸುತ್ತಿದ್ದಾರೆ. ಮಹಿಳೆಯರು ಎಲ್ಲಿದ್ದಾರೆ? ಅವರ ಮೇಲಿನ ದೌರ್ಜನ್ಯ ಅಥವಾ ಹಿಂಸಾಚಾರ ಎಂಥದ್ದು ಎಂದು ಹಲವರು ಪ್ರಶ್ನೆ ಮಾಡುತ್ತಿದ್ದಾರೆ.

ಅಫ್ಘಾನಿಸ್ತಾನದ ಪರಿಸ್ಥಿತಿ, ಆಡಳಿತ, ಅವರ ಕಾನೂನು, ಹಿಂಸಾಚಾರ, ಭಯೋತ್ಪಾದನೆ, ಆರ್ಥಿಕತೆ, ವಿದೇಶ ನೀತಿ ಇತ್ಯಾದಿಗಳು ಒಂದು ಕಡೆ ಆದರೆ ಮತ್ತೊಂದು ಕಡೆ ಅಷ್ಟೇ ಮುಖ್ಯವಾಗಿ ಮತ್ತು ಘನವಾಗಿ ಚರ್ಚೆ ಆಗುತ್ತಿರುವುದು ಅಲ್ಲಿನ ಮಹಿಳೆಯರ ಸ್ಥಿತಿಗತಿ. ಮಕ್ಕಳ ಜೀವನ. ಮಾನವ ಹಕ್ಕುಗಳು ಇತ್ಯಾದಿ. ಈ ಬಗ್ಗೆ ಸ್ವತಃ ಅಫ್ಘಾನಿಸ್ತಾನದ ಮತ್ತು ಈಗ ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ ಕ್ರಿಸ್ಮಾ ರಸೂಲಿ ಟಿವಿ9 ಜೊತೆಗೆ ಮಾಹಿತಿ ಹಂಚಿಕೊಂಡಿದ್ದಾರೆ.

ತಾಲಿಬಾನಿಗಳ ಈ ಹಿಂಸಾಚಾರವನ್ನು ಯಾವತ್ತೂ ಕ್ಷಮಿಸಲ್ಲ. ತಾಲಿಬಾನಿಗಳಿಂದ ಆಫ್ಘನ್‌ ಮಹಿಳೆಯರಿಗೆ ಭಾರಿ ರಣಹಿಂಸೆ ನೀಡಲಾಗುತ್ತದೆ. ಬುರ್ಖಾ ಧರಿಸಿಯೇ ಮನೆಯಿಂದ ಹೊರಬರುವಂತೆ ಹಿಂಸೆ ನೀಡುತ್ತಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಕ್ರೌರ್ಯಕ್ಕೆ ಭಯ ಆಗ್ತಿದೆ. ಆಫ್ಘನ್‌ನ ಶಿಕ್ಷಿತ ಸಮುದಾಯಕ್ಕೆ ಭವಿಷ್ಯದ ಬಗ್ಗೆ ದಿಗಿಲು ಇದ್ದೇ ಇದೆ. ಅವರು ಮನೆ ಬಿಟ್ಟು ಹೊರಗೆ ಬಾರದಂತೆ ಮಹಿಳೆಯರಿಗೆ ದಿಗ್ಬಂಧನ ಹೇರುತ್ತಾರೆ. ತಾಲಿಬಾನಿ ರಕ್ಕಸ ರೂಪಕ್ಕೆ ಏರ್‌ಪೋರ್ಟ್‌ ದೃಶ್ಯಗಳೇ ಸಾಕ್ಷಿ ಎಂದು ಮಾಹಿತಿ ನೀಡಿದ್ದಾರೆ. ಅಲ್ಲಿನ ದೈಹಿಕ ಹಿಂಸೆಗಿಂತ ಮಾನಸಿಕ ಭಯ, ಆತಂಕ, ದೌರ್ಜನ್ಯವನ್ನು ಸಹಿಸಿರುವುದು ಕಷ್ಟ. ಆ ಜೀವನ ಯಾರಿಗೂ ಬೇಡ ಎಂದು ಅನಿಸುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ತಿರುಗಿಬಿದ್ದ ಸ್ಥಳೀಯರು, ಅಫ್ಘಾನಿಸ್ತಾನದ 3 ಜಿಲ್ಲೆಗಳು ತಾಲಿಬಾನಿಗಳಿಂದ ಮುಕ್ತ; ಅಚ್ಚರಿಯ ಬೆಳವಣಿಗೆ

ಅಫ್ಘಾನಿಸ್ತಾನಕ್ಕೆ ಹಣ ನೀಡದಿರಲು ಐಎಂಎಫ್ ನಿರ್ಧಾರ; ಆರ್ಥಿಕ ಬಲ ಇಲ್ಲದೆ ತಾಲಿಬಾನಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!