AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ತೂರು: ಸಿಸೇರಿಯನ್ ಬಳಿಕ ಸರ್ಜಿಕಲ್ ಬಟ್ಟೆ ಹೊಟ್ಟೆಯೊಳಗಿಟ್ಟು ಹೊಲಿಗೆ ಹಾಕಿದ ವೈದ್ಯರು! ಆಮೇಲೇನಾಯ್ತು?

ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಿಸೇರಿಯನ್ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ರೋಗಿಯ ಹೊಟ್ಟೆಯಲ್ಲಿ ಶಸ್ತ್ರಚಿಕಿತ್ಸಾ ಬಟ್ಟೆಯನ್ನು ಬಿಟ್ಟುಬಿಟ್ಟ ಘಟನೆ ನಡೆದಿದೆ. ಇದರಿಂದ ಬಾಣಂತಿ ಸುಮಾರು 20 ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಡಿದ್ದಾರೆ. ನಂತರ ಮತ್ತೊಂದು ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿ ಬಟ್ಟೆಯನ್ನು ತೆಗೆಯಲಾಗಿದೆ. ಸದ್ಯ, ಬಾಣಂತಿಯ ಪತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಪುತ್ತೂರು: ಸಿಸೇರಿಯನ್ ಬಳಿಕ ಸರ್ಜಿಕಲ್ ಬಟ್ಟೆ ಹೊಟ್ಟೆಯೊಳಗಿಟ್ಟು ಹೊಲಿಗೆ ಹಾಕಿದ ವೈದ್ಯರು! ಆಮೇಲೇನಾಯ್ತು?
ಪುತ್ತೂರಿನ ಖಾಸಗಿ ಆಸ್ಪತ್ರೆ (ಶಸ್ತ್ರಚಿಕಿತ್ಸೆ ನಂತರ ಹೊಟ್ಟೆಯ ಒಳಬಿಟ್ಟಿದ್ದ ಸರ್ಜಿಕಲ್ ಬಟ್ಟೆ ಒಳಚಿತ್ರದಲ್ಲಿದೆ)
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: Ganapathi Sharma

Updated on:Feb 24, 2025 | 12:36 PM

ಮಂಗಳೂರು, ಫೆಬ್ರವರಿ 24: ಹೆರಿಗೆ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಸುಮಾರು 20ಕ್ಕೂ ಹೆಚ್ಚು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ಮಾಡುವಂತಾಗಿತ್ತು. ಕೊನೆಗೂ ಬಾಣಂತಿಯ ಅಸ್ವಸ್ಥತೆಗೆ ನಿಜ ಕಾರಣ ಬಯಲಾಗಿದ್ದು, ಖಾಸಗಿ ಆಸ್ಪತ್ರೆಯ ವಿರುದ್ಧ ಬಾಣಂತಿಯ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಪೊಲೀಸರಿಗೆ ದೂರನ್ನೂ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಘಟನೆ ಸಂಭವಿಸಿದೆ.

ಸರ್ಜಿಕಲ್ ಬಟ್ಟೆ ಹೊಟ್ಟೆಯಲ್ಲಿ ಬಿಟ್ಟ ವೈದ್ಯ!

2024ರ ನವೆಂಬರ್ 27ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ, ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಬಂಗಾರಡ್ಕದ ಶರಣ್ಯ ಲಕ್ಷ್ಮೀ ಎಂಬವರು ಹೆರಿಗೆಗಾಗಿ ದಾಖಲಾಗಿದ್ದರು. ಅವರಿಗೆ ಸಿಸೇರಿಯನ್ ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿ, ಡಿಸೆಂಬರ್ 2 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು.

ಡಿಸ್ಚಾರ್ಜ್ ಆದ ಬಳಿಕ ಕಾಡಿತ್ತು ಪದೇ ಪದೇ ಆರೋಗ್ಯ ಸಮಸ್ಯೆ

ಡಿಸ್ಚಾರ್ಜ್ ಆದ ಬಳಿಕ ಮಹಿಳೆಗ ವಿಪರೀತ ಜ್ವರದಿಂದ ಬಳಲಿದ್ದರು. ಈ ಬಗ್ಗೆ ಮಹಿಳೆಯ ಕುಟುಂಬದವರು ಹೆರಿಗೆ ಮಾಡಿಸಿದ ವೈದ್ಯ ಡಾ ಅನಿಲ್ ಬಳಿ ವಿಚಾರಿಸಿದ್ದರು. ಜ್ವರದ ಔಷಧಿ ನೀಡುವಂತೆ ವೈದ್ಯರು ಸೂಚಿಸಿದ್ದರು. ಅಷ್ಟಾಗಿಯೂ ಜ್ವರ ಕಡಿಮೆ ಆಗದಿದ್ದಾಗ ಮನೆಯವರು ಮತ್ತೆ ವೈದ್ಯರನ್ನು ಸಂಪರ್ಕಿಸಿದ್ದಾರೆ. ಈ ವೇಳೆ, ಹೆಮಟೋಮ್ ಆಗಿರಬಹುದು ಎಂದು ಹೇಳಿದ ವೈದ್ಯರು, ಹೆಚ್ಚು ಚಿಂತೆ ಮಾಡುವ ಅಗತ್ಯವಿಲ್ಲ ಕಡಿಮೆಯಾಗುತ್ತದೆ ಎಂದು ಭರವಸೆ ನೀಡಿದ್ದರು.

Police Complaint

ಸಂತ್ರಸ್ತೆಯ ಪತಿ ಪೊಲೀಸರಿಗೆ ನೀಡಿದ ದೂರಿನ ಪ್ರತಿ

ಅದಾದ ನಂತರ ಬಾಣಂತಿಯ ಸಮಸ್ಯೆ ಕಡಿಮೆಯೇ ಆಗದಿರುವುದರಿಂದ ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಮಾಡಿಸಲಾಗಿದೆ. ಇದೇ ವೇಳೆ ಹತ್ತು ಸೆಂಟಿಮೀಟರ್ ಮಾಫ್ ಫಾರ್ಮೇಶನ್ ಆಗಿರುವುದು ಪತ್ತೆಯಾಗಿದೆ. ಬಳಿಕ ಬೇರೆ ಔಷಧಿ ನೀಡಿದ ನಂತರ ಜ್ವರ ಕಡಿಮೆಯಾಗಿತ್ತು. ಆದರೆ ನಂತರ ಸಂಧಿ ನೋವು ಕಾಡಿತ್ತು. ಇದಕ್ಕೆ ಆರ್ಥೋ ಸಮಸ್ಯೆ ಇರಬಹುದು ಎಂದು ವೈದ್ಯ ಅನಿಲ್ ಹೇಳಿದ್ದರು.

ಮಂಗಳೂರಿನ ನುರಿತ ವೈದ್ಯರ ಬಳಿ ಹೋದಾಗ ಗೊತ್ತಾಯ್ತು ಸತ್ಯ

ನಂತರ ಬಾಣಂತಿಯ ಕುಟುಂಬದವರು ಮಂಗಳೂರಿನ ವೈದ್ಯರನ್ನು ಸಂಪರ್ಕಿಸಿದ್ದರು. ಅಲ್ಲಿ ಸ್ಕ್ಯಾನಿಂಗ್ ರಿಪೋರ್ಟ್ ನೋಡಿದ ವೈದ್ಯರಿಗೆ, ಮಾರ್ಚ್ ಫಾರ್ಮೇಶನ್ ಆಗಿರುವುದು ಕಂಡುಬಂದಿದ್ದು, ಪುತ್ತೂರಿನ ವೈದ್ಯರ ಬಳಿ ಪ್ರಶ್ನಿಸಿದ್ದರು. ನಂತರ ಸಿಟಿ ಸ್ಕ್ಯಾನ್ ಮಾಡಿದಾಗ ವರದಿಯಲ್ಲಿ ಹೊಟ್ಟೆ ಒಳಗಡೆ ಸರ್ಜಿಕಲ್ ಬಟ್ಟೆ ಬಿಟ್ಟಿರುವ ವಿಚಾರ ತಿಳಿದುಬಂದಿದೆ. ಅಷ್ಟರಲ್ಲಾಗಲೇ ಸಿಸೇರಿಯನ್ನಾಗಿ ಒಂದುವರೆ ತಿಂಗಳಾಗಿದ್ದರಿಂದ ಬಾಣಂತಿ ಆರೋಗ್ಯ ಸಮಸ್ಯೆ ತೀರಾ ಹದಗೆಟ್ಟಿದ್ದು, ಅಪಾಯದ ಸ್ಥಿತಿ ತಲುಪಿತ್ತು. ನಂತರ ಪುತ್ತೂರಿನ ಇನ್ನೊಂದು ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನೆರವೇರಿಸಿ ಸರ್ಜಿಕಲ್ ಬಟ್ಟೆಯ ಮುದ್ದೆಯನ್ನು ವೈದ್ಯರು ಹೊರತೆಗೆದಿದ್ದಾರೆ.

ಇದನ್ನೂ ಓದಿ: ಸ್ನೇಹಮಯಿ ಕೃಷ್ಣ ವಿರುದ್ಧ ಬೆಂಗಳೂರಿನ ಸ್ಮಶಾನದಲ್ಲಿ ವಾಮಾಚಾರ: ಪೊಲೀಸ್​

ಸದ್ಯ ಡಾ ಅನಿಲ್ ವಿರುದ್ಧ ಬಾಣಂತಿಯ ಪತಿ ಗಗನ್ ದೀಪ್ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಘಟನೆಯಿಂದಾಗಿ ಪತ್ನಿ ಮೂರು ತಿಂಗಳಿನಿಂದ ಮಾನಸಿಕ ಯಾತನೆಯಲ್ಲಿ ದಿನ ಕಳೆದಿದ್ದಾರೆ. ವೈದ್ಯರ ನಿರ್ಲಕ್ಷದಿಂದ ಭಾರಿ ಅನಾಹುತ ಆಗಿದೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:22 am, Mon, 24 February 25