AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀನಾಕ್ಷಿ ಲೇಖಿ ಕೈತಪ್ಪಿದ ಬಿಜೆಪಿ ಟಿಕೆಟ್; ಮಂಗಳೂರಿನಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮ ಮುಂದೂಡಿಕೆ

ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಬಿಜೆಪಿ ಅಳೆದು ತೂಗಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನಿನ್ನೆ ಬಿಡುಗಡೆ ಮಾಡಿದೆ. ಅದರಂತೆ 33 ಹಾಲಿ ಸಂಸದರನ್ನು ಕೈಬಿಡಲಾಗಿದೆ. ಈ ಪೈಕಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಕೂಡ ಒಬ್ಬರು. ಇವರ ಬದಲು ದೆಹಲಿ ಟಿಕೆಟ್ ಅನ್ನು ಸುಷ್ಮ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್ ಅವರಿಗೆ ನೀಡಲಾಗಿದೆ. ಇತ್ತ, ಟಿಕೆಟ್ ಕೈತಪ್ಪುತ್ತಿದ್ದಂತೆ ಮಂಗಳೂರಿನಲ್ಲಿ ಮೀನಾಕ್ಷಿ ಲೇಖಿ ಅವರು ಭಾಗಿಯಾಗಬೇಕಿದ್ದ ಕಾರ್ಯಕ್ರಮವನ್ನು ಬಿಜೆಪಿ ಮುಂದೂಡಿದೆ.

ಮೀನಾಕ್ಷಿ ಲೇಖಿ ಕೈತಪ್ಪಿದ ಬಿಜೆಪಿ ಟಿಕೆಟ್; ಮಂಗಳೂರಿನಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮ ಮುಂದೂಡಿಕೆ
ಮೀನಾಕ್ಷಿ ಲೇಖಿ ಕೈತಪ್ಪಿದ ಬಿಜೆಪಿ ಟಿಕೆಟ್; ಮಂಗಳೂರಿನಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮ ಮುಂದೂಡಿಕೆ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Mar 03, 2024 | 3:37 PM

Share

ಮಂಗಳೂರು, ಮಾ.3: ಲೋಕಸಭಾ ಚುನಾವಣೆಗೆ (Lok Sabha Eelctions) ಭರ್ಜರಿ ತಯಾರಿ ನಡೆಸುತ್ತಿರುವ ಬಿಜೆಪಿ ಅಳೆದು ತೂಗಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನಿನ್ನೆ ಬಿಡುಗಡೆ ಮಾಡಿದೆ. ಅದರಂತೆ 33 ಹಾಲಿ ಸಂಸದರನ್ನು ಕೈಬಿಡಲಾಗಿದೆ. ಈ ಪೈಕಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ (Meenakshi Lekhi) ಕೂಡ ಒಬ್ಬರು. ಇವರ ಬದಲು ದೆಹಲಿ ಟಿಕೆಟ್ ಅನ್ನು ಸುಷ್ಮ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್ (Bansuri Swaraj) ಅವರಿಗೆ ನೀಡಲಾಗಿದೆ. ಇತ್ತ, ಟಿಕೆಟ್ ಕೈತಪ್ಪುತ್ತಿದ್ದಂತೆ ಮಂಗಳೂರಿನಲ್ಲಿ (Mangaluru) ಮೀನಾಕ್ಷಿ ಲೇಖಿ ಅವರು ಭಾಗಿಯಾಗಬೇಕಿದ್ದ ಕಾರ್ಯಕ್ರಮವನ್ನು ಬಿಜೆಪಿ ಮುಂದೂಡಿದೆ.

ನಾಳೆ (ಫೆಬ್ರವರಿ 4) ಮಂಗಳೂರಿನ ಸಂಘನಿಕೇತನದಲ್ಲಿ ಬೂತ್ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸಲಾಗಿತ್ತು. ಈ ಸಮಾವೇಶಕ್ಕೆ ಕೇಂದ್ರ ವಿದೇಶಾಂಗ ವ್ಯವಹಾರಗಳು ಮತ್ತು ಸಂಸ್ಕೃತಿ ಇಲಾಖೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಅವರನ್ನು ಆಹ್ವಾನಿಸಲಾಗಿತ್ತು. ಅವರು ಭಾಗಿಯಾಗುವುದು ಖಚಿತವಾಗಿತ್ತು. ಆದರೆ, ಇವರಿಗೆ ಟಿಕೆಟ್ ಕೈತಪ್ಪುತ್ತಿದ್ದಂತೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಈಬಗ್ಗೆ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ವಕ್ತಾರ ಅರುಣ್ ಜಿ. ಶೇಟ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Bansuri Swaraj: ಲೋಕಸಭಾ ಚುನಾವಣಾ ಕಣದಲ್ಲಿ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್; ನವದೆಹಲಿಯಿಂದ ಸ್ಪರ್ಧೆ

ನಿನ್ನೆ ದೇಶದ 195 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ನವದೆಹಲಿ ಸಂಸದೆ ಮೀನಾಕ್ಷಿ ಲೇಖಿಗೆ ಟಿಕೆಟ್ ಮಿಸ್ ಆಗಿದ್ದು, ಮಾಜಿ ಕೇಂದ್ರ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್‌ ಅವರಿಗೆ ಕ್ಷೇತ್ರದಲ್ಲಿ ಮಣೆ ಹಾಕಲಾಗಿದೆ.

ರಾಜದೀಪ್ ರಾಯ್, ಹೋರೆನ್ ಸಿಂಗ್ ಬೇ, ಪಲ್ಲಬ್ ಲೋಚನ್ ದಾಸ್, ರಾಮೇಶ್ವರ್ ತೇಲಿ, ಗುಹರಾಮ್ ಅಜ್ಗಲ್ಲಿ, ಸುನಿಲ್ ಕುಮಾರ್ ಸೋನಿ, ಚುನ್ನಿ ಲಾಲ್ ಸಾಹು, ಮೋಹನ್ ಮಾಂಡವಿ, ಮಾಜಿ ಕೇಂದ್ರ ಸಚಿವ ಹರ್ಷವರ್ಧನ್, ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ, ಮೀನಾಕ್ಷಿ ಲೇಖಿ, ರಮೇಶ್ ಬಿಧುರಿ ಸೇರಿದಂತೆ ಒಟ್ಟು 33 ಹಾಲಿ ಸಂಸದರಿಗೆ 2024ರ ಲೋಕಸಭಾ ಚುನಾವಣೆಯ ಬಿಜೆಪಿ ಟಿಕೆಟ್ ಕೈತಪ್ಪಿದೆ. ಹರ್ಷವರ್ಧನ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್