AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೊಮೆಟೊ ಆಯ್ತು, ಈಗ ಈರುಳ್ಳಿ ಸರದಿ; ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಬೆಲೆ ಏರಿಕೆ

Onion Price Hike; ಮಂಗಳೂರಿನಲ್ಲಿ ಕಳೆದ ಎರಡು ವಾರಗಳಿಂದ ಈರುಳ್ಳಿ ಬೆಲೆ ನಿರಂತರವಾಗಿ ಏರಿಕೆಯಾಗಿದೆ. ಕಳೆದ ವಾರ ಕ್ವಿಂಟಲ್‌ಗೆ 2000 ರೂ.ಗೆ ತಲುಪಿತ್ತು. ಇದೀಗ 2900 ರೂ. ದಾಟಿದೆ. ಕಳೆದ ವಾರ 26 ರೂ.ಗೆ ಮಾರಾಟವಾಗುತ್ತಿದ್ದ ಒಂದು ಕಿಲೋ ಈರುಳ್ಳಿ ಇದೀಗ 34 ರಿಂದ 35 ರೂ.ಗೆ ಮಾರಾಟವಾಗುತ್ತಿದೆ.

ಟೊಮೆಟೊ ಆಯ್ತು, ಈಗ ಈರುಳ್ಳಿ ಸರದಿ; ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಬೆಲೆ ಏರಿಕೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Aug 18, 2023 | 10:32 PM

Share

ಮಂಗಳೂರು, ಆಗಸ್ಟ್ 18: ಟೊಮೆಟೊ ದರ ಕ್ರಮೇಣ ಇಳಿಮುಖವಾಗುತ್ತಿರುವಂತೆಯೇ ಇದೀಗ ಈರುಳ್ಳಿ ದರ (Onion Price) ಗಗನಮುಖಿಯಾಗತೊಡಗಿದೆ. ಮಂಗಳೂರು ನಗರ (Mangalore City) ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ (Dakshina Kannada District) ಈರುಳ್ಳಿ ಬೆಲೆ ಗಣನೀಯವಾಗಿ ಹೆಚ್ಚಳವಾಗಿದೆ. ದೇಶದಲ್ಲಿ ಅತಿ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರದಿಂದ ಪೂರೈಕೆ ಕಳೆದ ಎರಡು ವಾರಗಳಿಂದ ಕಡಿಮೆಯಾಗಿದೆ. ಹೀಗಾಗಿ ಈರುಳ್ಳಿ ಬೆಲೆ ಏರುಗತಿಯಲ್ಲಿ ಸಾಗಿದೆ ಎಂದು ಮೂಲಗಳು ತಿಳಿಸಿವೆ.

ನಾಸಿಕ್‌ನ ಲಾಸಲ್‌ಗಾಂವ್‌ನ ಎಪಿಎಂಸಿಯ ತರಕಾರಿಯ ಅತಿದೊಡ್ಡ ಸಗಟು ಮಾರುಕಟ್ಟೆಯಲ್ಲಿ ಆಗಸ್ಟ್ 4 ರಂದು ಈರುಳ್ಳಿ ಬೆಲೆ ಕ್ವಿಂಟಲ್‌ಗೆ 1550 ರೂ.ಗಳಿಂದ 2300 ರೂ. ವರೆಗೆ ಏರಿಕೆಯಾಗಿತ್ತು. ಇದು ಕಳೆದ ಎಂಟು ತಿಂಗಳಲ್ಲೇ ದಾಖಲಾದ ಗರಿಷ್ಠ ಬೆಲೆಯಾಗಿದೆ.

ಮಂಗಳೂರಿನಲ್ಲಿ ಕಳೆದ ಎರಡು ವಾರಗಳಿಂದ ಈರುಳ್ಳಿ ಬೆಲೆ ನಿರಂತರವಾಗಿ ಏರಿಕೆಯಾಗಿದೆ. ಕಳೆದ ವಾರ ಕ್ವಿಂಟಲ್‌ಗೆ 2000 ರೂ.ಗೆ ತಲುಪಿತ್ತು. ಇದೀಗ 2900 ರೂ. ದಾಟಿದೆ. ಕಳೆದ ವಾರ 26 ರೂ.ಗೆ ಮಾರಾಟವಾಗುತ್ತಿದ್ದ ಒಂದು ಕಿಲೋ ಈರುಳ್ಳಿ ಇದೀಗ 34 ರಿಂದ 35 ರೂ.ಗೆ ಮಾರಾಟವಾಗುತ್ತಿದೆ.

ನಾಸಿಕ್‌ನ ರೈತರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿರುವ ಕಾರಣ, ಮಾರುಕಟ್ಟೆಯಲ್ಲಿ ಈರುಳ್ಳಿ ಪೂರೈಕೆ ಕಡಿಮೆಯಾಗಿದೆ. ಇದು ಬೆಲೆ ಏರಿಕೆಗೆ ಕಾರಣವಾಗಿದೆ. ಈ ಹಿಂದೆ ನಾಸಿಕ್ ಮಾರುಕಟ್ಟೆಯಿಂದ 25 ಸಾವಿರದಿಂದ 30 ಸಾವಿರ ಕ್ವಿಂಟಲ್ ಈರುಳ್ಳಿ ಪೂರೈಕೆಯಾಗುತ್ತಿತ್ತು. ಈಗ ಅದು 10,000 ಕ್ವಿಂಟಲ್‌ಗೆ ಇಳಿಕೆಯಾಗಿದೆ.

ಇದನ್ನೂ ಓದಿ: ಮಂಗಳೂರು: ಅಕ್ಕಿ ಇಲ್ಲವೆಂದು ಪೇಚಾಡುವ ಸರ್ಕಾರ; ತನ್ನದೇ ಗೋದಾಮಿನಿಂದ ಕೋಟ್ಯಾಂತರ ರೂ. ಅಕ್ಕಿ ಮಾಯ

ಲಭ್ಯವಿರುವ ಪೂರೈಕೆಗೆ ಹೋಲಿಸಿದರೆ ಸ್ಥಳೀಯ ಮಾರುಕಟ್ಟೆಯಲ್ಲಿ ಈರುಳ್ಳಿಗೆ ಬೇಡಿಕೆ ಹೆಚ್ಚಿದೆ. ಮಳೆಯಿಂದಾಗಿ ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ಈರುಳ್ಳಿ ಕೊಯ್ಲು ಒಂದು ತಿಂಗಳು ವಿಳಂಬವಾಗಿದೆ. ಮಹಾರಾಷ್ಟ್ರದ ಅಹಮದ್ ನಗರದಲ್ಲಿಯೂ ಪೂರೈಕೆ ಕಡಿಮೆಯಾಗಿದೆ. ಬಾಂಗ್ಲಾದೇಶದಿಂದ ಈರುಳ್ಳಿಗೆ ಹೆಚ್ಚಿನ ಬೇಡಿಕೆ ಇದೆ, ಇದರ ಪರಿಣಾಮವಾಗಿ ಈರುಳ್ಳಿ ಬೆಲೆ ಏರುತ್ತಿದೆ ಎಂದು ಮಾರುಕಟ್ಟೆ ಮೂಲಗಳು ಹೇಳಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ