AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ahmedabad-Mangalore Train : ಮಂಗಳೂರು- ಅಹಮದಾಬಾದ್​​ಗೆ ಜೂನ್ 9ರಿಂದ ವಿಶೇಷ ರೈಲು ಸೇವೆ

ಅಹಮದಾಬಾದ್-ಮಂಗಳೂರಿಗೆ ವಿಶೇಷ ರೈಲು ಸಂಚಾರಿಸಲಿದೆ. ಪ್ರಯಾಣಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಈ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ.

Ahmedabad-Mangalore Train : ಮಂಗಳೂರು- ಅಹಮದಾಬಾದ್​​ಗೆ ಜೂನ್ 9ರಿಂದ ವಿಶೇಷ ರೈಲು ಸೇವೆ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jun 06, 2023 | 12:03 PM

ಮಂಗಳೂರು: ಅಹಮದಾಬಾದ್-ಮಂಗಳೂರಿಗೆ ವಿಶೇಷ ರೈಲು (Ahmedabad-Mangalore Train) ಸಂಚಾರಿಸಲಿದೆ, 09424 ಸಂಖ್ಯೆಯ ರೈಲು ಮತ್ತು 09423 ಸಂಖ್ಯೆಯ ರೈಲು ಅಹಮದಾಬಾದ್-ಮಂಗಳೂರು ಜೆಎನ್-ಅಹಮದಾಬಾದ್ ವೀಕ್ಲಿ ಸ್ಪೆಷಲ್ ವಿಶೇಷ ದರದಲ್ಲಿ ಈ ರೈಲು ಸಂಚಾರ ನಡೆಸಲಿದೆ. ಈಗಾಗಲೇ ಒಡಿಶಾದಲ್ಲಿ ನಡೆದ ಘಟನೆಗಳು ಒಂದು ದೊಡ್ಡ ಪರಿಣಾಮವನ್ನು ಉಂಟು ಮಾಡಿದೆ. ಅದಕ್ಕೆ ರೈಲುಗಳಲ್ಲಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಈ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ.

ಅದರಂತೆ 09424 ಸಂಖ್ಯೆಯ ರೈಲು ಶುಕ್ರವಾರದಂದು (ಜೂನ್ 9, 16 ಮತ್ತು 23) ಸಂಜೆ 4 ಗಂಟೆಗೆ ಅಹಮದಾಬಾದ್‌ನಿಂದ ಹೊರಟು ಮರುದಿನ ರಾತ್ರಿ 7.40ಕ್ಕೆ ಮಂಗಳೂರು ತಲುಪಲಿದೆ, ಹಾಗೆ 09423 ಸಂಖ್ಯೆಯ ರೈಲು ಶನಿವಾರದಂದು (ಜೂನ್ 10, 17 ಮತ್ತು 24) ರಾತ್ರಿ 9.10 ಕ್ಕೆ ಮಂಗಳೂರಿನಿಂದ ಹೊರಟು ಮೂರನೇ ದಿನ 1.15 ಕ್ಕೆ ಅಹಮದಾಬಾದ್ ತಲುಪುತ್ತದೆ.

ಇದನ್ನೂ ಓದಿ: Special Train: ಇಂದೋರ್ – ಮಂಗಳೂರು, ಮುರುಡೇಶ್ವರ – ಯಶವಂತಪುರ ಮಧ್ಯೆ ವಿಶೇಷ ರೈಲು; ಇಲ್ಲಿದೆ ವಿವರ

ಇದು ನಾಡಿಯಾಡ್, ಆನಂದ್, ವಡೋದರಾ, ಭರೂಚ್, ಸೂರತ್, ವಾಪಿ, ವಸಾಯಿ ರಸ್ತೆ, ಪನ್ವೇಲ್, ರೋಹಾ, ರತ್ನಗಿರಿ, ಕುಡಾಲ್, ಸಾವಂತವಾಡಿ ರಸ್ತೆ, ಥಿವಿಮ್, ಕರ್ಮಾಲಿ, ಮಡಗಾಂವ್ ಜೆಎನ್, ಕಾರವಾರ, ಉಡುಪಿ ಮತ್ತು ಸುರತ್ಕಲ್ ನಿಲ್ದಾಣಗಳಲ್ಲಿ ನಿಲ್ಲುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈಗಾಗಲೇ ಅನೇಕ ಜನರು ಈ ರೈಲು ಸೇವೆಯನ್ನು ಬುಕ್​​​ ಮಾಡಿದ್ದು, ಇದು ಮಂಗಳೂರಿನಿಂದ ಅಹಮದಾಬಾದ್​​ಗೆ ಹೋಗುವ ಜನರಿಗೆ ಹೆಚ್ಚು ಅನುಕೂಲವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ