AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ahmedabad-Mangalore Train : ಮಂಗಳೂರು- ಅಹಮದಾಬಾದ್​​ಗೆ ಜೂನ್ 9ರಿಂದ ವಿಶೇಷ ರೈಲು ಸೇವೆ

ಅಹಮದಾಬಾದ್-ಮಂಗಳೂರಿಗೆ ವಿಶೇಷ ರೈಲು ಸಂಚಾರಿಸಲಿದೆ. ಪ್ರಯಾಣಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಈ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ.

Ahmedabad-Mangalore Train : ಮಂಗಳೂರು- ಅಹಮದಾಬಾದ್​​ಗೆ ಜೂನ್ 9ರಿಂದ ವಿಶೇಷ ರೈಲು ಸೇವೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jun 06, 2023 | 12:03 PM

Share

ಮಂಗಳೂರು: ಅಹಮದಾಬಾದ್-ಮಂಗಳೂರಿಗೆ ವಿಶೇಷ ರೈಲು (Ahmedabad-Mangalore Train) ಸಂಚಾರಿಸಲಿದೆ, 09424 ಸಂಖ್ಯೆಯ ರೈಲು ಮತ್ತು 09423 ಸಂಖ್ಯೆಯ ರೈಲು ಅಹಮದಾಬಾದ್-ಮಂಗಳೂರು ಜೆಎನ್-ಅಹಮದಾಬಾದ್ ವೀಕ್ಲಿ ಸ್ಪೆಷಲ್ ವಿಶೇಷ ದರದಲ್ಲಿ ಈ ರೈಲು ಸಂಚಾರ ನಡೆಸಲಿದೆ. ಈಗಾಗಲೇ ಒಡಿಶಾದಲ್ಲಿ ನಡೆದ ಘಟನೆಗಳು ಒಂದು ದೊಡ್ಡ ಪರಿಣಾಮವನ್ನು ಉಂಟು ಮಾಡಿದೆ. ಅದಕ್ಕೆ ರೈಲುಗಳಲ್ಲಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಈ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ.

ಅದರಂತೆ 09424 ಸಂಖ್ಯೆಯ ರೈಲು ಶುಕ್ರವಾರದಂದು (ಜೂನ್ 9, 16 ಮತ್ತು 23) ಸಂಜೆ 4 ಗಂಟೆಗೆ ಅಹಮದಾಬಾದ್‌ನಿಂದ ಹೊರಟು ಮರುದಿನ ರಾತ್ರಿ 7.40ಕ್ಕೆ ಮಂಗಳೂರು ತಲುಪಲಿದೆ, ಹಾಗೆ 09423 ಸಂಖ್ಯೆಯ ರೈಲು ಶನಿವಾರದಂದು (ಜೂನ್ 10, 17 ಮತ್ತು 24) ರಾತ್ರಿ 9.10 ಕ್ಕೆ ಮಂಗಳೂರಿನಿಂದ ಹೊರಟು ಮೂರನೇ ದಿನ 1.15 ಕ್ಕೆ ಅಹಮದಾಬಾದ್ ತಲುಪುತ್ತದೆ.

ಇದನ್ನೂ ಓದಿ: Special Train: ಇಂದೋರ್ – ಮಂಗಳೂರು, ಮುರುಡೇಶ್ವರ – ಯಶವಂತಪುರ ಮಧ್ಯೆ ವಿಶೇಷ ರೈಲು; ಇಲ್ಲಿದೆ ವಿವರ

ಇದು ನಾಡಿಯಾಡ್, ಆನಂದ್, ವಡೋದರಾ, ಭರೂಚ್, ಸೂರತ್, ವಾಪಿ, ವಸಾಯಿ ರಸ್ತೆ, ಪನ್ವೇಲ್, ರೋಹಾ, ರತ್ನಗಿರಿ, ಕುಡಾಲ್, ಸಾವಂತವಾಡಿ ರಸ್ತೆ, ಥಿವಿಮ್, ಕರ್ಮಾಲಿ, ಮಡಗಾಂವ್ ಜೆಎನ್, ಕಾರವಾರ, ಉಡುಪಿ ಮತ್ತು ಸುರತ್ಕಲ್ ನಿಲ್ದಾಣಗಳಲ್ಲಿ ನಿಲ್ಲುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈಗಾಗಲೇ ಅನೇಕ ಜನರು ಈ ರೈಲು ಸೇವೆಯನ್ನು ಬುಕ್​​​ ಮಾಡಿದ್ದು, ಇದು ಮಂಗಳೂರಿನಿಂದ ಅಹಮದಾಬಾದ್​​ಗೆ ಹೋಗುವ ಜನರಿಗೆ ಹೆಚ್ಚು ಅನುಕೂಲವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!