AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು-ಬೆಂಗಳೂರು ಮಧ್ಯೆ ಏರ್ ಇಂಡಿಯಾ ಎಕ್ಸ್‌ಪ್ರೆಸ್​ನ 2 ಹೊಸ ವಿಮಾನಗಳು ಆರಂಭ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಡುವೆ ಸಂಚರಿಸಲಿವೆ. ಹೊಸ ವಿಮಾನಗಳು ಚೆನ್ನೈ, ಕಣ್ಣೂರು, ತಿರುವನಂತಪುರಂ ಮತ್ತು ವಾರಣಾಸಿಗೂ ಸಂಪರ್ಕ ಕಲ್ಪಿಸಲಿವೆ. ಈ ಹೊಸ ವಿಮಾನಗಳ ಕಾರ್ಯಾಚರಣೆಯಿಂದ ಮುಂದಿನ ದಿನಗಳಲ್ಲಿ ದೇಶೀಯ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಎಂಐಎ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರು-ಬೆಂಗಳೂರು ಮಧ್ಯೆ ಏರ್ ಇಂಡಿಯಾ ಎಕ್ಸ್‌ಪ್ರೆಸ್​ನ 2 ಹೊಸ ವಿಮಾನಗಳು ಆರಂಭ
ಏರ್ ಇಂಡಿಯಾ ಎಕ್ಸ್‌ಪ್ರೆಸ್​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Nov 13, 2023 | 7:08 AM

Share

ಮಂಗಳೂರು ನ.13: ಬುಧವಾರದಿಂದ ಮಂಗಳೂರು-ಬೆಂಗಳೂರು (Mangalore-Bengaluru) ಮಧ್ಯೆ ಏರ್ ಇಂಡಿಯಾ ಎಕ್ಸ್‌ಪ್ರೆಸ್​ನ (Air India Express) ಎರಡು ಹೊಸ ವಿಮಾನಗಳು (Airplane) ಕಾರ್ಯಾರಂಭ ಮಾಡಲಿವೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ (MIA) ಯಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ನಡುವೆ ಸಂಚರಿಸಲಿವೆ. ಹೊಸ ವಿಮಾನಗಳು ಚೆನ್ನೈ, ಕಣ್ಣೂರು, ತಿರುವನಂತಪುರಂ ಮತ್ತು ವಾರಣಾಸಿಗೂ ಸಂಪರ್ಕ ಕಲ್ಪಿಸಲಿವೆ. ಈ ಹೊಸ ವಿಮಾನಗಳ ಕಾರ್ಯಾಚರಣೆಯಿಂದ ಮುಂದಿನ ದಿನಗಳಲ್ಲಿ ದೇಶೀಯ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಎಂಐಎ ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನದ ಸಮಯ

ಫ್ಲೈಟ್ ಕ್ಯಾರಿಯರ್ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಏರ್ ಇಂಡಿಯಾ ಎಕ್ಸ್‌ಪ್ರೆಸ್ IX 782 ವಾರಣಾಸಿಯಿಂದ ಬೆಳಿಗ್ಗೆ 8 ಗಂಟೆಗೆ ಹೊರಟು, 10.30 ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು (ಕೆಐಎ) ತಲುಪುತ್ತದೆ. ನಂತರ ಕೆಐಎಯಿಂದ ಬೆಳಗ್ಗೆ 11:10 ಕ್ಕೆ ಹೊರಡುತ್ತದೆ ಮತ್ತು 12:10 ಕ್ಕೆ ಎಂಐಎ ತಲುಪುತ್ತದೆ.

ವಾರಣಾಸಿ ಮತ್ತು ಮಂಗಳೂರಿಗೆ ನವೆಂಬರ್ 25 ರವರೆಗೆ ಕೇವಲ 10 ದಿನಗಳ ಕಾಲ ಮಾತ್ರ ಸಂಪರ್ಕ ಕಲ್ಪಿಸಲಾಗುವುದು. ನವೆಂಬರ್ 26 ರಿಂದ ಇದೇ ವಿಮಾನವು ಚೆನ್ನೈನಿಂದ-ಮಂಗಳೂರಿಗೆ ಬೆಂಗಳೂರು ಮಾರ್ಗವಾಗಿ ಮೂಲಕ ಸಂಪರ್ಕ ಕಲ್ಪಿಸಲಿದೆ. ಇದು ಬೆಳಗ್ಗೆ 9.35ಕ್ಕೆ ಚೆನ್ನೈನಿಂದ ಹೊರಡುತ್ತದೆ, 10.35ಕ್ಕೆ ಕೆಐಎಗೆ ತಲುಪುತ್ತದೆ. 12.10ಕ್ಕೆ ಎಮ್​ಐಎಗೆ ತಲುಪುತ್ತದೆ. ಫ್ಲೈಟ್ ನಂಬರ್​ IX 678 ಎಮ್​ಐಎನಿಂದ ಮಧ್ಯಾಹ್ನ 12:40ಕ್ಕೆ ಹೊರಡುತ್ತದೆ, ಕೆಐಎಗೆ 1.55 ಕ್ಕೆ ಆಗಮಿಸುತ್ತದೆ.

ಇದನ್ನೂ ಓದಿ: ಬೆಂಗಳೂರು: ವಿಮಾನದಲ್ಲಿ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಸಹಪ್ರಯಾಣಿಕನಿಂದ ಕಿರುಕುಳ; ದೂರು ದಾಖಲು

ಎರಡನೇ ಹೊಸ ವಿಮಾನವು ಕಣ್ಣೂರು-ಬೆಂಗಳೂರು-ಮಂಗಳೂರು (IX 1795) ನಡುವೆ ಸಂಚರಿಸುತ್ತದೆ. ಇದು ಬುಧವಾರದಿಂದ ಕಾರ್ಯನಿರ್ವಹಿಸಲಿದೆ. ಇದು ಕಣ್ಣೂರಿನಿಂದ ಸಂಜೆ 4.30 ಕ್ಕೆ ಹೊರಟು 5.50 ಕ್ಕೆ ಕೆಐಎಗೆ ಆಗಮಿಸುತ್ತದೆ. ನಂತರ ಎಐಎಗೆ 6.25 ಕ್ಕೆ ಹೊರಟು 7.35ಕ್ಕೆ ತಲುಪುತ್ತದೆ. ಅದೇ ವಿಮಾನವು ಬದಲಾದ ವಿಮಾನ ಸಂಖ್ಯೆ IX792, ಎಮ್​ಐಎನಿಂದ ರಾತ್ರಿ 8.15 ಕ್ಕೆ ನಿರ್ಗಮಿಸುತ್ತದೆ, ರಾತ್ರಿ 9.30ಕ್ಕೆ ಕೆಐಎಗೆ ತಲುಪುತ್ತದೆ. ಮತ್ತು 50 ನಿಮಿಷಗಳ ಲೇಓವರ್ ನಂತರ ತಿರುವನಂತಪುರಂಗೆ ಹೊರಟು ರಾತ್ರಿ 11.25 ಕ್ಕೆ ತಲುಪುತ್ತದೆ. ಏರ್‌ಲೈನ್ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಪ್ರಸ್ತುತ ವಿವರಗಳ ಪ್ರಕಾರ ವಿಮಾನವು ಬೋಯಿಂಗ್ 737 ಮ್ಯಾಕ್ಸ್ ಆಗಿರುತ್ತದೆ.

ಪುಣೆಗೆ ವಿಮಾನ ಹಾರಾಟ ಪುನರಾರಂಭ

ಅಕ್ಟೋಬರ್ 29 ರಿಂದ ನವೆಂಬರ್ 18 ರ ನಡುವೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಪುಣೆ-ಮಂಗಳೂರು ವಿಮಾನವು ವಾರಕ್ಕೆ ಮೂರು ಬಾರಿ ವಿಮಾನ ಸೇವೆಯೊಂದಿಗೆ ನವೆಂಬರ್ 19 ರಿಂದ ಪುನರಾರಂಭಗೊಳ್ಳಲಿದೆ. ಸಮಯವೂ ಬದಲಾಗಿದೆ. 6E177 ವಿಮಾನವು ಪುಣೆಯಿಂದ ಬೆಳಗ್ಗೆ 7.25ಕ್ಕೆ ಹೊರಡಲಿದ್ದು, ಬೆಳಗ್ಗೆ 9.05ಕ್ಕೆ ಎಮ್​ಐಎ ತಲುಪಲಿದೆ. 6E358 ವಿಮಾನವು ಎಮ್​ಐಎನಿಂದ ಬೆಳಗ್ಗೆ 10.15 ಕ್ಕೆ ಹೊರಟು 11.40 ಕ್ಕೆ ಪುಣೆ ತಲುಪಲಿದೆ. ಈ ವಿಮಾನವು 186 ಆಸನಗಳ ಏರ್‌ಬಸ್ A320 ಆಗಿರುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ