AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India: ಬೆಂಗಳೂರಿನಿಂದ ಮಂಗಳೂರಿಗೆ ಎರಡು ಹೊಸ ವಿಮಾನಗಳನ್ನು ಆರಂಭಿಸಿದ ಏರ್ ಇಂಡಿಯಾ

ಏರ್ ಇಂಡಿಯಾ ಸಂಸ್ಥೆಯು ಬೆಂಗಳೂರಿನಿಂದ ಮಂಗಳೂರಿಗೆ ಎರಡು ಹೊಸ ವಿಮಾನಗಳ ಸೇವೆಯನ್ನು ಆರಂಭಿಸಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ವಿಮಾನಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಎರಡು ನಗರಗಳಿಗೆ ಮಾತ್ರವಲ್ಲದೆ ಚೆನ್ನೈ, ಕಣ್ಣೂರು, ತಿರುವನಂತಪುರಂ ಮತ್ತು ವಾರಣಾಸಿಗೆ ಸಂಪರ್ಕ ಕಲ್ಪಿಸುವ ಹೆಚ್ಚಿನ ಸಂಪರ್ಕವನ್ನು ಭರವಸೆ ನೀಡಿದೆ.

Air India: ಬೆಂಗಳೂರಿನಿಂದ ಮಂಗಳೂರಿಗೆ ಎರಡು ಹೊಸ ವಿಮಾನಗಳನ್ನು ಆರಂಭಿಸಿದ ಏರ್ ಇಂಡಿಯಾ
ಬೆಂಗಳೂರಿನಿಂದ ಮಂಗಳೂರಿಗೆ ಎರಡು ಹೊಸ ವಿಮಾನಗಳನ್ನು ಆರಂಭಿಸಿದ ಏರ್ ಇಂಡಿಯಾ (ಸಾಂದರ್ಭಿಕ ಚಿತ್ರ)Image Credit source: Reuters
Rakesh Nayak Manchi
|

Updated on: Nov 16, 2023 | 7:45 AM

Share

ಮಂಗಳೂರು, ನ.16: ಏರ್ ಇಂಡಿಯಾ (Air India) ಸಂಸ್ಥೆಯು ಬೆಂಗಳೂರಿನಿಂದ ಮಂಗಳೂರಿಗೆ (Bengaluru To Mangaluru) ಎರಡು ಹೊಸ ವಿಮಾನಗಳ ಸೇವೆಯನ್ನು ಆರಂಭಿಸಿದೆ. ನವೆಂಬರ್ 15 ರ ಬುಧವಾರದಿಂದ ಪ್ರಾರಂಭವಾಗುವ ಚಳಿಗಾಲದ ವೇಳಾಪಟ್ಟಿಯು ಈ ಎರಡು ನಗರಗಳಿಗೆ ಮಾತ್ರವಲ್ಲದೆ ಚೆನ್ನೈ, ಕಣ್ಣೂರು, ತಿರುವನಂತಪುರಂ ಮತ್ತು ವಾರಣಾಸಿಗೆ ಸಂಪರ್ಕ ಕಲ್ಪಿಸುತ್ತದೆ.

ಈ ಬಗ್ಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ (MIA) ಮಂಗಳವಾರ ವರದಿ ಬಿಡುಗಡೆ ಮಾಡಿದೆ. ದೇಶೀಯ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದ್ದು, ವಿಮಾನದ ಸಮಯವನ್ನು ಗ್ರಾಹಕರ ಅನುಕೂಲಕ್ಕಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಎಂಐಎ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ವಿಶ್ವಕಪ್ ಫೈನಲ್ ದಿನ ಏರ್ ಇಂಡಿಯಾ ವಿಮಾನ ಹಾರಾಡುವಂತಿಲ್ಲ: ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್​ನಿಂದ ಎಚ್ಚರಿಕೆ

ವಿಮಾನಗಳ ವೇಳಾಪಟ್ಟಿ

IX 782 ವಿಮಾನವು ವಾರಣಾಸಿಯಿಂದ ಬೆಳಿಗ್ಗೆ 8 ಗಂಟೆಗೆ ತನ್ನ ಪ್ರಯಾಣವನ್ನು ಪ್ರಾರಂಭಿಸುತ್ತದೆ, ಬೆಳಿಗ್ಗೆ 10.30 ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಇಳಿಯುತ್ತದೆ. ವಿಮಾನವನ್ನು ಬದಲಾಯಿಸದೆ 55 ನಿಮಿಷಗಳ ವಿರಾಮದ ನಂತರ, ಅದು KIA ನಿಂದ 11.10 ಕ್ಕೆ ನಿರ್ಗಮಿಸಿ ಮಧ್ಯಾಹ್ನ 12.10 ಕ್ಕೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿದೆ.

ವಾರಣಾಸಿ-ಮಂಗಳೂರು ವಿಮಾನ ಸೇವೆಯಿ ನವೆಂಬರ್ 25 ರವರೆಗೆ (ಕೇವಲ 10 ದಿನಗಳವರೆಗೆ) ಮಾತ್ರ ಇರಲಿದೆ. ಆದಾಗ್ಯೂ, ನವೆಂಬರ್ 26 ರಿಂದ, ವಿಮಾನವು ಬೆಂಗಳೂರಿನ ಮೂಲಕ ಚೆನ್ನೈನಿಂದ ಮಂಗಳೂರಿಗೆ ಸೇವೆ ನೀಡಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ