AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India: ಮುಂಬೈ-ಮಂಗಳೂರಿಗೆ ತನ್ನ ಎರಡನೇ ದೈನಂದಿನ ವಿಮಾನಯಾನ ಆರಂಭಿಸಿದ ಏರ್ ಇಂಡಿಯಾ

ಏರ್ ಇಂಡಿಯಾ ತನ್ನ ಎರಡನೇ ದೈನಂದಿನ ವಿಮಾನಯಾನವನ್ನು ಮುಂಬೈ ಮತ್ತು ಮಂಗಳೂರು ನಡುವೆ ಶನಿವಾರ ಹಾರಾಟ ನಡೆಸಿದೆ. ಇಂಡಿಗೋಗೆ ಮೇ 22ರಂದು ಮುಂಬೈ-ಮಂಗಳೂರು ಸೆಕ್ಟರ್‌ನಲ್ಲಿ ಮೂರನೇ ದೈನಂದಿನ ವಿಮಾನ ಕಾರ್ಯನಿರ್ವಹಿಸಲು ಅವಕಾಶ ನೀಡಿದೆ.

Air India: ಮುಂಬೈ-ಮಂಗಳೂರಿಗೆ ತನ್ನ ಎರಡನೇ ದೈನಂದಿನ ವಿಮಾನಯಾನ ಆರಂಭಿಸಿದ ಏರ್ ಇಂಡಿಯಾ
ಏರ್​ ಇಂಡಿಯಾ
ಅಕ್ಷಯ್​ ಪಲ್ಲಮಜಲು​​
|

Updated on:Jun 12, 2023 | 12:50 PM

Share

ಮಂಗಳೂರು: ಏರ್ ಇಂಡಿಯಾ (Air India) ತನ್ನ ಎರಡನೇ ದೈನಂದಿನ ವಿಮಾನಯಾನವನ್ನು ಮುಂಬೈ ಮತ್ತು ಮಂಗಳೂರು ನಡುವೆ ಶನಿವಾರ ಹಾರಾಟ ನಡೆಸಿದೆ. ಇಂಡಿಗೋಗೆ ಮೇ 22ರಂದು ಮುಂಬೈ-ಮಂಗಳೂರು ಸೆಕ್ಟರ್‌ನಲ್ಲಿ ಮೂರನೇ ದೈನಂದಿನ ವಿಮಾನವಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡಿದೆ. ಈಗ, ಎರಡೂ ವಿಮಾನಯಾನ ಸಂಸ್ಥೆಗಳು ಈ ಹೆಚ್ಚು ಪ್ರಯಾಣಿಸುವ ವಲಯದಲ್ಲಿ ಒಟ್ಟಾಗಿ ಐದು ದಿನ ವಿಮಾನಗಳನ್ನು ನಿರ್ವಹಿಸುತ್ತವೆ ಎಂದು ಹೇಳಿದೆ.

ಏರ್ ಇಂಡಿಯಾ ವಿಮಾನ 1679 ಮುಂಬೈನಿಂದ ಮಧ್ಯಾಹ್ನ 12.40ಕ್ಕೆ ಹೊರಟು 2.10ಕ್ಕೆ ಮಂಗಳೂರಿಗೆ ತಲುಪುತ್ತದೆ. ಹಿಂದಿರುಗುವ ಮಾರ್ಗದಲ್ಲಿ AI 1680 ಮಮಗಳೂರಿನಿಂದ ಮಧ್ಯಾಹ್ನ 2.50ಕ್ಕೆ ಹೊರಟು ಸಂಜೆ 4.35ಕ್ಕೆ ಮುಂಬೈ ತಲುಪುತ್ತದೆ. ಈ ವಿಮಾನದ ಮೊದಲ ಹಂತದಲ್ಲಿ 182 ಪ್ರಯಾಣಿಕರು AI 1679 ನಲ್ಲಿ ಮಂಗಳೂರಿಗೆ ಮತ್ತು 167 ಪ್ರಯಾಣಿಕರು AI 1680 ನಲ್ಲಿ ಮುಂಬೈ ತೆರಳಿದ್ದಾರೆ. ಇನ್ನೊಂದು ಏರ್​​ ಇಂಡಿಯಾ ವಿಮಾನ AI 680 ವಿಮಾನವು ಮಂಗಳೂರಿನಿಂದ ಬೆಳಿಗ್ಗೆ 7.55ಕ್ಕೆ ಹೊರಟು, ಬೆಳಿಗ್ಗೆ 9ಕ್ಕೆ ಮುಂಬೈ ತಲುಪುತ್ತದೆ.

ಇದನ್ನೂ ಓದಿ: Air India Discount Offers: ಕೇವಲ 1,705 ರೂ.ಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಕೇ? ಇಂದೇ ಟಿಕೆಟ್ ಕಾಯ್ದಿರಿಸಿ

ಏರ್​​ಲೈನ್​​ ಉದ್ಯಮಗಳ ಪ್ರಕಾರ, ಇಂಡಿಗೋ ಅಕ್ಟೋಬರ್​ 28ರಿಂದ ತನ್ನ ಎರಡನೇ ಹಂತದ ಮುಂಬೈ – ಮಂಗಳೂರು ಸೇವೆಗಳನ್ನು ಕೊನೆಗೊಳಿಸುತ್ತದೆ, ನಂತರ ಏರ್​ ಇಂಡಿಯಾ ತನ್ನ ಸೇವೆಯನ್ನು ಆರಂಭಿಸಲಿದೆ ಎಂದು ಹೇಳಿದ್ದಾರೆ. ಜೂನ್​ 15ರವರೆಗೆ ಹಾರಾಟ ನಡೆಸುತ್ತದೆ ಎಂದು ಹೇಳಲಾಗಿತ್ತು, ಆದರೆ ಇದೀಗ ಇದರ ಹಾರಾಟವನ್ನು ಜುಲೈ 30 ವರೆಗೆ ನಡೆಸಲಿದೆ ಎಂದು ಹೇಳಲಾಗಿದೆ. ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ ​​(ಡಿಜಿಸಿಎ) ಅಂಕಿಅಂಶ ಪ್ರಕಾರ 2022 ಮುಂಬೈನಿಂದ ಮಂಗಳೂರಿಗೆ 4.94 ಲಕ್ಷಕ್ಕೂ ಹೆಚ್ಚು ಪ್ರಯಾಣಿಸಿದ್ದಾರೆ, ಈ ವರದಿ ಪ್ರಕಾರ ತಿಂಗಳಿಗೆ 42 ಸಾವಿರ ಪ್ರಯಾಣಿಕರು ಹಾರಾಟ ನಡೆಸಿದ್ದಾರೆ ಎಂದು ಹೇಳಲಾಗಿದೆ. ಅತೀ ಹೆಚ್ಚು ಹಾರಾಟ ನಡೆಸಿದ ಎರಡನೇ ವಿಮಾನ ಮಾರ್ಗವೆಂದರೆ ಮಂಗಳೂರು-ಬೆಂಗಳೂರು ಎಂದು ಹೇಳಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:48 pm, Mon, 12 June 23

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ