AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ; ಮಂಗಳೂರು ಬಿಜೆಪಿ ಶಾಸಕ ಡಾ.ವೈ ಭರತ್ ಶೆಟ್ಟಿ ವಿರುದ್ದ ಕಮಿಷನರ್​ಗೆ ದೂರು

ಮಂಗಳೂರು ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ(Dr. Bharath Shetty Y) ವಿರುದ್ಧ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್​ಗೆ ದೂರು ನೀಡಲಾಗಿದೆ. ಎಂಎಲ್​ಸಿ ಐವನ್ ಡಿಸೋಜಾ(Ivan D'Souza) ನೇತೃತ್ವದ ನಿಯೋಗ ಇಂದು (ಮಂಗಳವಾರ) ಕಮಿಷನರ್ ಅವರನ್ನು ಭೇಟಿಯಾಗಿ ಶಾಸಕರನ್ನು ಬಂಧಿಸಲು ಒತ್ತಾಯಿಸಿದರು.

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ; ಮಂಗಳೂರು ಬಿಜೆಪಿ ಶಾಸಕ ಡಾ.ವೈ ಭರತ್ ಶೆಟ್ಟಿ ವಿರುದ್ದ ಕಮಿಷನರ್​ಗೆ ದೂರು
ಮಂಗಳೂರು ಬಿಜೆಪಿ ಶಾಸಕ ಡಾ.ವೈ ಭರತ್ ಶೆಟ್ಟಿ ವಿರುದ್ದ ಕಮಿಷನರ್​ಗೆ ದೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 09, 2024 | 3:40 PM

Share

ದಕ್ಷಿಣ ಕನ್ನಡ, ಜು.09: ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರ ಹಿನ್ನಲೆ ಮಂಗಳೂರು ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ(Dr. Bharath Shetty Y) ವಿರುದ್ಧ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್​ಗೆ ದೂರು ನೀಡಲಾಗಿದೆ. ಎಂಎಲ್​ಸಿ ಐವನ್ ಡಿಸೋಜಾ(Ivan D’Souza) ನೇತೃತ್ವದ ನಿಯೋಗ, ಇಂದು(ಜು.09) ಕಮಿಷನರ್ ಅವರನ್ನು ಭೇಟಿಯಾಗಿ ಭರತ್ ಶೆಟ್ಟಿ ವಿರುದ್ಧ ಎಫ್ಐಆರ್‌ ದಾಖಲಿಸಿ ಬಂಧಿಸಲು ಒತ್ತಾಯಿಸಿದರು.

ಮಂಗಳೂರಿನ ಕಾವೂರಿನಲ್ಲಿ ನಿನ್ನೆ ನಡೆದಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ್ದ ಶಾಸಕ ಭರತ್ ಶೆಟ್ಟಿ, ‘ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು ಅನಿಸ್ತಿದೆ. ರಾಹುಲ್ ಗಾಂಧಿ ಶಿವನ ಫೋಟೋ ಹಿಡಿದು ನಿಂತಿದ್ದ. ಈ ಹುಚ್ಚನಿಗೆ ಶಿವ ಮೂರನೇ ಕಣ್ಣು ಬಿಟ್ಟರೆ ಸುಟ್ಟು ಬೂದಿಯಾಗ್ತಾನೆ ಎಂದು ಗೊತ್ತಿಲ್ಲ ಎಂದಿದ್ದರು. ಈ ಹಿನ್ನಲೆ ಐವನ್ ಡಿಸೋಜಾ ನೇತೃತ್ವದ ನಿಯೋಗ ಭರತ್ ಶೆಟ್ಟಿ ಅವರನ್ನು ಬಂಧಿಸಲು ಕಮಿಷನರ್​ಗೆ ದೂರು ನೀಡಿದೆ.

ಇದನ್ನೂ ಓದಿ:ರಾಹುಲ್ ಗಾಂಧಿ ದೊಡ್ಡ ಹುಚ್ಚ, ಪಾರ್ಲಿಮೆಂಟ್​ಗೆ ಹೋಗಿ ಅವನ ಕೆನ್ನೆಗೆ ಬಾರಿಸಬೇಕು: ಭರತ್ ಶೆಟ್ಟಿ ಹೇಳಿಕೆಗೆ ವ್ಯಾಪಕ ವಿರೋಧ

ಘಟನೆ ವಿವರ

ಶಾಸಕ ಭರತ್ ಶೆಟ್ಟಿ ಅವರು ರಾಹುಲ್ ಗಾಂಧಿ ವಿರುದ್ಧ ಮಂಗಳೂರಿನಲ್ಲಿ ನಿನ್ನೆ ನಡೆದ ಪ್ರತಿಭಟನಾ ಸಭೆಯಲ್ಲಿ ಕಿಡಿಕಾರಿದ್ದರು. ‘ಹಿಂದೂಗಳ ಬಗ್ಗೆ ಏನು ಮಾತನಾಡಿದ್ರೂ ಕೇಳ್ತಾರೆ ಎಂಬ ಭಾವನೆ ರಾಹುಲ್ ಗಾಂಧಿಗೆ ಇರಬಹುದು. ಅವನು ಅಲ್ಲಿ ಬೊಗಳುವ ಸಂದರ್ಭ ಇಲ್ಲಿನ ಸ್ಥಳೀಯ ನಾಯಕರು ಬಾಲ ಬಿಚ್ಚಲು ಶುರು ಮಾಡಿದ್ದಾರೆ. ‘ಬಾಯಿಗೆ ಬಂದ ಹಾಗೆ ರಾಹುಲ್ ಗಾಂಧಿ ಬೊಗಳುತ್ತಿದ್ದಾನೆ. ಆತ ದೊಡ್ಡ ಹುಚ್ಚ, ರಾಹುಲ್‌ ಗಾಂಧಿಗೆ ಸಂಸತ್ತಿನೊಳಗೇ ಹೋಗಿ ಬಾಗಿಲು ಹಾಕಿಕೊಂಡು ಕೆನ್ನೆಗೆ ಎರಡು ಬಾರಿಸಿಬೇಕು ಎಂದಿದ್ದರು. ಈ ಹೇಳಿಕೆ ವಿರುದ್ದ ಇದೀಗ ದೂರು ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?