AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಎಂಬಿಬಿಎಸ್ ಸೀಟ್ ಅಕ್ರಮ; ಜಿ.ಆರ್.ಮೆಡಿಕಲ್ ಕಾಲೇಜು ವಿರುದ್ಧ ಗಂಭೀರ ಆರೋಪ

MBBS Medical Seat Scam: ಮಂಗಳೂರಿನ ನೀರುಮಾರ್ಗದಲ್ಲಿ ಎರಡು ವರ್ಷಗಳ ಹಿಂದೆ ಜಿ.ಆರ್.ಮೆಡಿಕಲ್ ಕಾಲೇಜು ಆರಂಭವಾಗಿತ್ತು. ಈಗ ಲಕ್ಷಾಂತರ ಶುಲ್ಕ ತೆತ್ತು ಪ್ರವೇಶ ಪಡೆದ 150 ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.

ಮಂಗಳೂರಿನಲ್ಲಿ ಎಂಬಿಬಿಎಸ್ ಸೀಟ್ ಅಕ್ರಮ; ಜಿ.ಆರ್.ಮೆಡಿಕಲ್ ಕಾಲೇಜು ವಿರುದ್ಧ ಗಂಭೀರ ಆರೋಪ
ಜಿ.ಆರ್.ಮೆಡಿಕಲ್ ಕಾಲೇಜು
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಆಯೇಷಾ ಬಾನು

Updated on: Aug 13, 2023 | 9:32 AM

ಮಂಗಳೂರು, ಆ.13: ಜಿಲ್ಲೆಯಲ್ಲಿ ಎಂಬಿಬಿಎಸ್ ಮೆಡಿಕಲ್ ಸೀಟ್(MBBS Medical Seat Scam) ಹೆಸರಿನಲ್ಲಿ ಭಾರೀ ಅಕ್ರಮ ನಡೆದಿದೆ. ಮಂಗಳೂರಿನ ಜಿ.ಆರ್.ಮೆಡಿಕಲ್ ಕಾಲೇಜು(Mangaluru GR Medical College) ಹೆಸರಿನಲ್ಲಿ ಸರ್ಕಾರದ ಅನುಮತಿಯನ್ನೇ ಪಡೆಯದೆ ನೂರಾರು ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್ ಮಾರಾಟ ಮಾಡಿದ ಆರೋಪ ಕೇಳಿ ಬಂದಿದೆ. ಸದ್ಯ ಈಗ ಈ ಬಗ್ಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಸಮಗ್ರ ತನಿಖೆಗೆ ಸೂಚಿಸಿದೆ. ಈ ಪ್ರಕರಣವನ್ನು ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ(Karnataka Government) ಆಯೋಗ ಪತ್ರ ಬರೆದಿದೆ.

ಮಂಗಳೂರಿನ ನೀರುಮಾರ್ಗದಲ್ಲಿ ಎರಡು ವರ್ಷಗಳ ಹಿಂದೆ ಜಿ.ಆರ್.ಮೆಡಿಕಲ್ ಕಾಲೇಜು ಆರಂಭವಾಗಿತ್ತು. ಈಗ ಲಕ್ಷಾಂತರ ಶುಲ್ಕ ತೆತ್ತು ಪ್ರವೇಶ ಪಡೆದ 150 ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಅನುಮತಿ‌ ಇಲ್ಲದೇ ಸೀಟು ನೀಡಿರುವುದು ಅಕ್ರಮ ಮತ್ತು ಕಾನೂನು ಬಾಹಿರ ಎಂದು ವರದಿಯಾಗಿದೆ. 2022-23 ಸಾಲಿಯಲ್ಲಿ 150 ವಿದ್ಯಾರ್ಥಿಗಳಿಗೆ ಎಂ.ಬಿ.ಬಿ.ಎಸ್ ದಾಖಲಾತಿ ನೀಡಲಾಗಿದೆ. 2021-22ರಲ್ಲಿ ಎಂಎಆರ್ಬಿ ಮೆಡಿಕಲ್ ಕಾಲೇಜು ನಡೆಸಲು ಅನುಮತಿ ನೀಡಿತ್ತು. ಆದರೆ 2022ರ ಸೆಪ್ಟೆಂಬರ್ ನಲ್ಲಿ ಎಂಎಆರ್ಬಿ ತಂಡ ಕಾಲೇಜಿನಲ್ಲಿ ಪರಿಶೀಲನೆ ನಡೆಸಿತ್ತು. ಈ ವೇಳೆ ಕಾಲೇಜಿನಲ್ಲಿ ರಿಸರ್ಚ್ ಸೆಂಟರ್ ಅಗತ್ಯ ಮಾನದಂಡ ಮತ್ತು ನುರಿತ ಸಿಬ್ಬಂದಿ ಇರಲಿಲ್ಲ. ಹೀಗಾಗಿ ಎರಡನೇ ಬ್ಯಾಚ್ ನಲ್ಲಿ ಎಂಬಿಬಿಎಸ್ ದಾಖಲಾತಿಗೆ ಅವಕಾಶ ನೀಡಿರಲಿಲ್ಲ. ಹೀಗಿದ್ದರೂ ಕಾನೂನು ಬಾಹಿರವಾಗಿ 150 ಮಂದಿಗೆ ಸೀಟು ಹಂಚಿಕೆ ಮಾಡಲಾಗಿದೆ. ಕೋಟ್ಯಾಂತರ ರೂ. ಶುಲ್ಕ ಪಡೆದು ಸೀಟು ಹಂಚಿದ್ದಾರೆ.

ಇದನ್ನೂ ಓದಿ: ಮೆಡಿಕಲ್ ಕಾಲೇಜ್ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಅನಾಥ ಶವಗಳ ಮೇಲೆ ನಡೆಯುತ್ತಿದ್ಯಾ ಹಣ ಮಾಡುವ ದಂಧೆ?

ಆಯೋಗ ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಎರಡು ಬಾರಿ ತನಿಖೆಗೆ ಸೂಚಿಸಿದೆ. ಹೀಗಾಗಿ ಇಲಾಖೆ ನಿರ್ಲಕ್ಷ್ಯದ ಹಿನ್ನೆಲೆ ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಪತ್ರ ಬರೆದಿದೆ. ಅನುಮತಿ ರದ್ದತಿ ಬಗ್ಗೆ ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ ಜಿ.ಆರ್.ಮೆಡಿಕಲ್ ಕಾಲೇಜು ಆಡಳಿತ ಮೇಲ್ಮನವಿ ಸಲ್ಲಿಸಿದೆ.

ಮಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ