AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷನ ಹತ್ಯೆಗೆ ಸಂಚು ಆರೋಪ: ಪೊಲೀಸ್​ ಕಮಿಷನರ್​ಗೆ ದೂರು

ಆಗಸ್ಟ್​ 17 ರಂದು 5 ಜನ ನನ್ನನ್ನ ವಿಚಾರಿಸಿಕೊಂಡು ಬಂದಿದ್ದಾರೆ. ನನ್ನ ಮಾಜಿ ಡ್ರೈವರ್ ಮನೆಗೆ ಹೋಗಿ ಬಂದೂಕು ತೋರಿಸಿ ವಿಚಾರಿಸಿದ್ದಾರೆ. ಪ್ರಶ್ನಿಸಿದಾಗ ಸಿಸಿಬಿ ಅಧಿಕಾರಿಗಳು ಎಂದು ಡ್ರೈವರ್ ಬಳಿ ಹೇಳಿಕೊಂಡಿದ್ದಾರೆ. 

ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷನ ಹತ್ಯೆಗೆ ಸಂಚು ಆರೋಪ: ಪೊಲೀಸ್​ ಕಮಿಷನರ್​ಗೆ ದೂರು
ರಾಜ್ಯಾಧ್ಯಕ್ಷ ರಾಜೇಶ್​ ಪವಿತ್ರನ್
TV9 Web
| Edited By: |

Updated on:Aug 22, 2022 | 3:20 PM

Share

ಮಂಗಳೂರು: ಹಿಂದೂ ಮಹಾಸಭಾ (Hindu Mahasabha) ರಾಜ್ಯಧ್ಯಕ್ಷ ರಾಜೇಶ್​ ಪವಿತ್ರನ್​ ಅವರ ಕೊಲೆಗೆ ಸಂಚಿನ ಆರೋಪ ಮಾಡಲಾಗಿದೆ ಎಂದು ಕೊಲೆ ಸಂಚಿನ ಬಗ್ಗೆ ನಗರ ಪೊಲೀಸ್ ಆಯುಕ್ತರಿಗೆ ಲಿಖಿತ ದೂರು ನೀಡಿಲಾಗಿದೆ. ಸುರತ್ಕಲ್​ ಪೊಲೀಸ್ ಠಾಣೆಯಲ್ಲೂ ಅಧ್ಯಕ್ಷ ದೂರು ದಾಖಲಿಸಿದ್ದು, ಮಾದ್ಯಮಗಳಿಗೆ ತನ್ನ ಕೊಲೆ ಸಂಚಿನ ಬಗ್ಗೆ ರಾಜೇಶ್ ಮಾಹಿತಿ ನೀಡಿದರು. ಹದಿನೈದು ದಿನಗಳ ಹಿಂದೆ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ರಾಜ್ಯ ಗೃಹ ಇಲಾಖೆಗೂ ಜಿಲ್ಲೆಯಲ್ಲಿ ಹಿಂದೂ ನಾಯಕರ ಕೊಲೆಗೆ ಸಂಚು ನಡೆಯುವ ಬಗ್ಗೆ ಮಾಹಿತಿ ನೀಡಲಾಗಿತ್ತು. ಆದರೆ ಆಗಸ್ಟ್​ 17 ರಂದು 5 ಜನ ನನ್ನನ್ನ ವಿಚಾರಿಸಿಕೊಂಡು ಬಂದಿದ್ದಾರೆ. ನನ್ನ ಮಾಜಿ ಡ್ರೈವರ್ ಮನೆಗೆ ಹೋಗಿ ಬಂದೂಕು ತೋರಿಸಿ ವಿಚಾರಿಸಿದ್ದಾರೆ. ಪ್ರಶ್ನಿಸಿದಾಗ ಸಿಸಿಬಿ ಅಧಿಕಾರಿಗಳು ಎಂದು ಡ್ರೈವರ್ ಬಳಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಗಂಡನ ಕುಟುಂಬವನ್ನೇ ಟಾರ್ಗೇಟ್ ಮಾಡಿ, ಮಾನಸಿಕ ಹಿಂಸೆ ಕೊಟ್ಟು ಹಣ ಚಿನ್ನಾಭರಣ ಸಮೇತ ಪತ್ನಿ ಗ್ರೇಟ್​ ಎಸ್ಕೇಪ್!

ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಬಂದವರು ಹಿಂದುಗಳೇ ಆಗಿರುವ ಕಾರಣ ಈ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಬಿಜೆಪಿಯ ಕಿವಿ ಹಿಂಡುವ ಕೆಲಸವನ್ನು ಹಿಂದೂ ಮಹಾಸಭಾ ಮಾಡಿದೆ. ಆದರೆ ರಾಜ್ಯ ಬಿಜೆಪಿ ಸರ್ಕಾರ ಹಿಂದುತ್ವ ವಿರೋಧಿ ಕೆಲಸ ಮಾಡಿದೆ. ಹೀಗಾಗಿ ಹಿಂದೂ ಮಹಾಸಭಾ ರಾಜಕೀಯ ಪಕ್ಷವಾಗಿ ಚುನಾವಣೆ ಎದುರಿಸುತ್ತಿದೆ. ಈ ಕಾರಣದಿಂದ ಪೊಲೀಸರು ಸೂಕ್ತ ತನಿಖೆಯನ್ನ ನಡೆಸಲು ಆಗ್ರಹಿಸಲಾಗಿದೆ.

ವಿಎಚ್​ಪಿ ಕಾರ್ಯಕರ್ತನಿಗೆ ಜೀವ ಬೆದರಿಕೆ, ಹತ್ಯೆಗೆ ಯತ್ನ

ನಗರದ ವಿಶ್ವ ಹಿಂದೂ ಪರಿಷತ್ (Vishwa Hindu Parishad – VHP) ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿರುವ ದುಷ್ಕರ್ಮಿಗಳು ಹತ್ಯೆಗೂ ಯತ್ನಿಸಿರುವ ಆಘಾತಕಾರಿ ಮಾಹಿತಿ ಬಹಿರಂಗಗೊಂಡಿದೆ. ಮೂರು ಬಾರಿ ಬೈಕ್​ನಲ್ಲಿ ಕಾರ್ಯಕರ್ತನನ್ನು ಹಿಂಬಾಲಿಸಿದ್ದ ದುಷ್ಕರ್ಮಿಗಳು ಹತ್ಯೆಗೆ ಯತ್ನಿಸಿದ್ದರು. ಮಾತ್ರವಲ್ಲದೆ, ದೂರವಾಣಿ ಮೂಲಕವೂ ಹಲವು ಬಾರಿ ಜೀವ ಬೆದರಿಕೆ ಹಾಕಿದ್ದರು. ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್​​ 506, 507ರ ಅನ್ವಯ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: ಗಣೇಶನ ವಿಸರ್ಜನೆಗೆಂದು ಕೆರೆಯ ಆಳ ತಿಳಿಯಲು ಸ್ನೇಹಿತರ ಜೊತೆ ಹೋದಾಗ ಯುವಕ ನೀರಿನಲ್ಲಿ ಮುಳುಗಿ ಸಾವು

ಮಂಗಳೂರಿನ ಬಜ್ಜೋಡಿ-ಬಿಕರ್ನಕಟ್ಟೆ ರಸ್ತೆಯಲ್ಲಿ ಕಾರು ಹಿಂಬಾಲಿಸಿದ್ದ ದುಷ್ಕರ್ಮಿಗಳು ಆಗಸ್ಟ್ 7ರಂದು ಕಾರಿಗೆ ಬೈಕ್ ತಾಗಿಸಿದ್ದರು. ಅದೇ ದಿನ ರಾತ್ರಿ 11.43ಕ್ಕೆ ಕಾರ್ಯಕರ್ತನಿಗೆ ಕರೆ ಮಾಡಿದ್ದ ಅವರು, ತುಳು ಮಿಶ್ರಿತ ಉರ್ದು ಭಾಷೆಯಲ್ಲಿ ಜೀವ ಬೆದರಿಕೆ ಹಾಕಿದ್ದರು. ಈ ಸಂಬಂಧ ಕಂಕನಾಡಿ ನಗರ ಠಾಣೆಯಲ್ಲಿ FIR ದಾಖಲು

‘ಇನಿ ತಪ್ಪಯ ಪಂಡ್​ದ್ ಖುಷಿ ಮಲ್ಪೋಡ್ಚಿ, ಗೊತ್ತುಂಡು, ನನ್ನ ಮೂಜಿ ಜನ ಪಂಪುವೆಲ್ ಡ್ ಉಲ್ಲೆರತ್ತಾ, ಬುಡ್ಪುಜಿ ಯಾನ್, ಕರ್ತಿನ ಬೇನೆ ಉಂಡು’ (ಈ ದಿನ ತಪ್ಪಿಸಿದ್ದಿ ಎಂದು ಖುಷಿ ಪಡಬೇಡ, ಗೊತ್ತಿದೆ. ಇನ್ನೂ ಮೂರು ಜನ ಪಂಪ್​ವೆಲ್​ನಲ್ಲಿ ಇದ್ದಾರೆ. ನಾನು ಬಿಡುವುದಿಲ್ಲ. ಕೊಂದ ನೋವು ಇದೆ) ಎಂದು ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:18 pm, Mon, 22 August 22

Follow Us
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ