AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷನ ಹತ್ಯೆಗೆ ಸಂಚು ಆರೋಪ: ಪೊಲೀಸ್​ ಕಮಿಷನರ್​ಗೆ ದೂರು

ಆಗಸ್ಟ್​ 17 ರಂದು 5 ಜನ ನನ್ನನ್ನ ವಿಚಾರಿಸಿಕೊಂಡು ಬಂದಿದ್ದಾರೆ. ನನ್ನ ಮಾಜಿ ಡ್ರೈವರ್ ಮನೆಗೆ ಹೋಗಿ ಬಂದೂಕು ತೋರಿಸಿ ವಿಚಾರಿಸಿದ್ದಾರೆ. ಪ್ರಶ್ನಿಸಿದಾಗ ಸಿಸಿಬಿ ಅಧಿಕಾರಿಗಳು ಎಂದು ಡ್ರೈವರ್ ಬಳಿ ಹೇಳಿಕೊಂಡಿದ್ದಾರೆ. 

ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷನ ಹತ್ಯೆಗೆ ಸಂಚು ಆರೋಪ: ಪೊಲೀಸ್​ ಕಮಿಷನರ್​ಗೆ ದೂರು
ರಾಜ್ಯಾಧ್ಯಕ್ಷ ರಾಜೇಶ್​ ಪವಿತ್ರನ್
TV9 Web
| Edited By: |

Updated on:Aug 22, 2022 | 3:20 PM

Share

ಮಂಗಳೂರು: ಹಿಂದೂ ಮಹಾಸಭಾ (Hindu Mahasabha) ರಾಜ್ಯಧ್ಯಕ್ಷ ರಾಜೇಶ್​ ಪವಿತ್ರನ್​ ಅವರ ಕೊಲೆಗೆ ಸಂಚಿನ ಆರೋಪ ಮಾಡಲಾಗಿದೆ ಎಂದು ಕೊಲೆ ಸಂಚಿನ ಬಗ್ಗೆ ನಗರ ಪೊಲೀಸ್ ಆಯುಕ್ತರಿಗೆ ಲಿಖಿತ ದೂರು ನೀಡಿಲಾಗಿದೆ. ಸುರತ್ಕಲ್​ ಪೊಲೀಸ್ ಠಾಣೆಯಲ್ಲೂ ಅಧ್ಯಕ್ಷ ದೂರು ದಾಖಲಿಸಿದ್ದು, ಮಾದ್ಯಮಗಳಿಗೆ ತನ್ನ ಕೊಲೆ ಸಂಚಿನ ಬಗ್ಗೆ ರಾಜೇಶ್ ಮಾಹಿತಿ ನೀಡಿದರು. ಹದಿನೈದು ದಿನಗಳ ಹಿಂದೆ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ರಾಜ್ಯ ಗೃಹ ಇಲಾಖೆಗೂ ಜಿಲ್ಲೆಯಲ್ಲಿ ಹಿಂದೂ ನಾಯಕರ ಕೊಲೆಗೆ ಸಂಚು ನಡೆಯುವ ಬಗ್ಗೆ ಮಾಹಿತಿ ನೀಡಲಾಗಿತ್ತು. ಆದರೆ ಆಗಸ್ಟ್​ 17 ರಂದು 5 ಜನ ನನ್ನನ್ನ ವಿಚಾರಿಸಿಕೊಂಡು ಬಂದಿದ್ದಾರೆ. ನನ್ನ ಮಾಜಿ ಡ್ರೈವರ್ ಮನೆಗೆ ಹೋಗಿ ಬಂದೂಕು ತೋರಿಸಿ ವಿಚಾರಿಸಿದ್ದಾರೆ. ಪ್ರಶ್ನಿಸಿದಾಗ ಸಿಸಿಬಿ ಅಧಿಕಾರಿಗಳು ಎಂದು ಡ್ರೈವರ್ ಬಳಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಗಂಡನ ಕುಟುಂಬವನ್ನೇ ಟಾರ್ಗೇಟ್ ಮಾಡಿ, ಮಾನಸಿಕ ಹಿಂಸೆ ಕೊಟ್ಟು ಹಣ ಚಿನ್ನಾಭರಣ ಸಮೇತ ಪತ್ನಿ ಗ್ರೇಟ್​ ಎಸ್ಕೇಪ್!

ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಬಂದವರು ಹಿಂದುಗಳೇ ಆಗಿರುವ ಕಾರಣ ಈ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಬಿಜೆಪಿಯ ಕಿವಿ ಹಿಂಡುವ ಕೆಲಸವನ್ನು ಹಿಂದೂ ಮಹಾಸಭಾ ಮಾಡಿದೆ. ಆದರೆ ರಾಜ್ಯ ಬಿಜೆಪಿ ಸರ್ಕಾರ ಹಿಂದುತ್ವ ವಿರೋಧಿ ಕೆಲಸ ಮಾಡಿದೆ. ಹೀಗಾಗಿ ಹಿಂದೂ ಮಹಾಸಭಾ ರಾಜಕೀಯ ಪಕ್ಷವಾಗಿ ಚುನಾವಣೆ ಎದುರಿಸುತ್ತಿದೆ. ಈ ಕಾರಣದಿಂದ ಪೊಲೀಸರು ಸೂಕ್ತ ತನಿಖೆಯನ್ನ ನಡೆಸಲು ಆಗ್ರಹಿಸಲಾಗಿದೆ.

ವಿಎಚ್​ಪಿ ಕಾರ್ಯಕರ್ತನಿಗೆ ಜೀವ ಬೆದರಿಕೆ, ಹತ್ಯೆಗೆ ಯತ್ನ

ನಗರದ ವಿಶ್ವ ಹಿಂದೂ ಪರಿಷತ್ (Vishwa Hindu Parishad – VHP) ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿರುವ ದುಷ್ಕರ್ಮಿಗಳು ಹತ್ಯೆಗೂ ಯತ್ನಿಸಿರುವ ಆಘಾತಕಾರಿ ಮಾಹಿತಿ ಬಹಿರಂಗಗೊಂಡಿದೆ. ಮೂರು ಬಾರಿ ಬೈಕ್​ನಲ್ಲಿ ಕಾರ್ಯಕರ್ತನನ್ನು ಹಿಂಬಾಲಿಸಿದ್ದ ದುಷ್ಕರ್ಮಿಗಳು ಹತ್ಯೆಗೆ ಯತ್ನಿಸಿದ್ದರು. ಮಾತ್ರವಲ್ಲದೆ, ದೂರವಾಣಿ ಮೂಲಕವೂ ಹಲವು ಬಾರಿ ಜೀವ ಬೆದರಿಕೆ ಹಾಕಿದ್ದರು. ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್​​ 506, 507ರ ಅನ್ವಯ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: ಗಣೇಶನ ವಿಸರ್ಜನೆಗೆಂದು ಕೆರೆಯ ಆಳ ತಿಳಿಯಲು ಸ್ನೇಹಿತರ ಜೊತೆ ಹೋದಾಗ ಯುವಕ ನೀರಿನಲ್ಲಿ ಮುಳುಗಿ ಸಾವು

ಮಂಗಳೂರಿನ ಬಜ್ಜೋಡಿ-ಬಿಕರ್ನಕಟ್ಟೆ ರಸ್ತೆಯಲ್ಲಿ ಕಾರು ಹಿಂಬಾಲಿಸಿದ್ದ ದುಷ್ಕರ್ಮಿಗಳು ಆಗಸ್ಟ್ 7ರಂದು ಕಾರಿಗೆ ಬೈಕ್ ತಾಗಿಸಿದ್ದರು. ಅದೇ ದಿನ ರಾತ್ರಿ 11.43ಕ್ಕೆ ಕಾರ್ಯಕರ್ತನಿಗೆ ಕರೆ ಮಾಡಿದ್ದ ಅವರು, ತುಳು ಮಿಶ್ರಿತ ಉರ್ದು ಭಾಷೆಯಲ್ಲಿ ಜೀವ ಬೆದರಿಕೆ ಹಾಕಿದ್ದರು. ಈ ಸಂಬಂಧ ಕಂಕನಾಡಿ ನಗರ ಠಾಣೆಯಲ್ಲಿ FIR ದಾಖಲು

‘ಇನಿ ತಪ್ಪಯ ಪಂಡ್​ದ್ ಖುಷಿ ಮಲ್ಪೋಡ್ಚಿ, ಗೊತ್ತುಂಡು, ನನ್ನ ಮೂಜಿ ಜನ ಪಂಪುವೆಲ್ ಡ್ ಉಲ್ಲೆರತ್ತಾ, ಬುಡ್ಪುಜಿ ಯಾನ್, ಕರ್ತಿನ ಬೇನೆ ಉಂಡು’ (ಈ ದಿನ ತಪ್ಪಿಸಿದ್ದಿ ಎಂದು ಖುಷಿ ಪಡಬೇಡ, ಗೊತ್ತಿದೆ. ಇನ್ನೂ ಮೂರು ಜನ ಪಂಪ್​ವೆಲ್​ನಲ್ಲಿ ಇದ್ದಾರೆ. ನಾನು ಬಿಡುವುದಿಲ್ಲ. ಕೊಂದ ನೋವು ಇದೆ) ಎಂದು ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:18 pm, Mon, 22 August 22

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ