AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷನ ಹತ್ಯೆಗೆ ಸಂಚು ಆರೋಪ: ಪೊಲೀಸ್​ ಕಮಿಷನರ್​ಗೆ ದೂರು

ಆಗಸ್ಟ್​ 17 ರಂದು 5 ಜನ ನನ್ನನ್ನ ವಿಚಾರಿಸಿಕೊಂಡು ಬಂದಿದ್ದಾರೆ. ನನ್ನ ಮಾಜಿ ಡ್ರೈವರ್ ಮನೆಗೆ ಹೋಗಿ ಬಂದೂಕು ತೋರಿಸಿ ವಿಚಾರಿಸಿದ್ದಾರೆ. ಪ್ರಶ್ನಿಸಿದಾಗ ಸಿಸಿಬಿ ಅಧಿಕಾರಿಗಳು ಎಂದು ಡ್ರೈವರ್ ಬಳಿ ಹೇಳಿಕೊಂಡಿದ್ದಾರೆ. 

ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷನ ಹತ್ಯೆಗೆ ಸಂಚು ಆರೋಪ: ಪೊಲೀಸ್​ ಕಮಿಷನರ್​ಗೆ ದೂರು
ರಾಜ್ಯಾಧ್ಯಕ್ಷ ರಾಜೇಶ್​ ಪವಿತ್ರನ್
TV9 Web
| Edited By: |

Updated on:Aug 22, 2022 | 3:20 PM

Share

ಮಂಗಳೂರು: ಹಿಂದೂ ಮಹಾಸಭಾ (Hindu Mahasabha) ರಾಜ್ಯಧ್ಯಕ್ಷ ರಾಜೇಶ್​ ಪವಿತ್ರನ್​ ಅವರ ಕೊಲೆಗೆ ಸಂಚಿನ ಆರೋಪ ಮಾಡಲಾಗಿದೆ ಎಂದು ಕೊಲೆ ಸಂಚಿನ ಬಗ್ಗೆ ನಗರ ಪೊಲೀಸ್ ಆಯುಕ್ತರಿಗೆ ಲಿಖಿತ ದೂರು ನೀಡಿಲಾಗಿದೆ. ಸುರತ್ಕಲ್​ ಪೊಲೀಸ್ ಠಾಣೆಯಲ್ಲೂ ಅಧ್ಯಕ್ಷ ದೂರು ದಾಖಲಿಸಿದ್ದು, ಮಾದ್ಯಮಗಳಿಗೆ ತನ್ನ ಕೊಲೆ ಸಂಚಿನ ಬಗ್ಗೆ ರಾಜೇಶ್ ಮಾಹಿತಿ ನೀಡಿದರು. ಹದಿನೈದು ದಿನಗಳ ಹಿಂದೆ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ರಾಜ್ಯ ಗೃಹ ಇಲಾಖೆಗೂ ಜಿಲ್ಲೆಯಲ್ಲಿ ಹಿಂದೂ ನಾಯಕರ ಕೊಲೆಗೆ ಸಂಚು ನಡೆಯುವ ಬಗ್ಗೆ ಮಾಹಿತಿ ನೀಡಲಾಗಿತ್ತು. ಆದರೆ ಆಗಸ್ಟ್​ 17 ರಂದು 5 ಜನ ನನ್ನನ್ನ ವಿಚಾರಿಸಿಕೊಂಡು ಬಂದಿದ್ದಾರೆ. ನನ್ನ ಮಾಜಿ ಡ್ರೈವರ್ ಮನೆಗೆ ಹೋಗಿ ಬಂದೂಕು ತೋರಿಸಿ ವಿಚಾರಿಸಿದ್ದಾರೆ. ಪ್ರಶ್ನಿಸಿದಾಗ ಸಿಸಿಬಿ ಅಧಿಕಾರಿಗಳು ಎಂದು ಡ್ರೈವರ್ ಬಳಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಗಂಡನ ಕುಟುಂಬವನ್ನೇ ಟಾರ್ಗೇಟ್ ಮಾಡಿ, ಮಾನಸಿಕ ಹಿಂಸೆ ಕೊಟ್ಟು ಹಣ ಚಿನ್ನಾಭರಣ ಸಮೇತ ಪತ್ನಿ ಗ್ರೇಟ್​ ಎಸ್ಕೇಪ್!

ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಬಂದವರು ಹಿಂದುಗಳೇ ಆಗಿರುವ ಕಾರಣ ಈ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಬಿಜೆಪಿಯ ಕಿವಿ ಹಿಂಡುವ ಕೆಲಸವನ್ನು ಹಿಂದೂ ಮಹಾಸಭಾ ಮಾಡಿದೆ. ಆದರೆ ರಾಜ್ಯ ಬಿಜೆಪಿ ಸರ್ಕಾರ ಹಿಂದುತ್ವ ವಿರೋಧಿ ಕೆಲಸ ಮಾಡಿದೆ. ಹೀಗಾಗಿ ಹಿಂದೂ ಮಹಾಸಭಾ ರಾಜಕೀಯ ಪಕ್ಷವಾಗಿ ಚುನಾವಣೆ ಎದುರಿಸುತ್ತಿದೆ. ಈ ಕಾರಣದಿಂದ ಪೊಲೀಸರು ಸೂಕ್ತ ತನಿಖೆಯನ್ನ ನಡೆಸಲು ಆಗ್ರಹಿಸಲಾಗಿದೆ.

ವಿಎಚ್​ಪಿ ಕಾರ್ಯಕರ್ತನಿಗೆ ಜೀವ ಬೆದರಿಕೆ, ಹತ್ಯೆಗೆ ಯತ್ನ

ನಗರದ ವಿಶ್ವ ಹಿಂದೂ ಪರಿಷತ್ (Vishwa Hindu Parishad – VHP) ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿರುವ ದುಷ್ಕರ್ಮಿಗಳು ಹತ್ಯೆಗೂ ಯತ್ನಿಸಿರುವ ಆಘಾತಕಾರಿ ಮಾಹಿತಿ ಬಹಿರಂಗಗೊಂಡಿದೆ. ಮೂರು ಬಾರಿ ಬೈಕ್​ನಲ್ಲಿ ಕಾರ್ಯಕರ್ತನನ್ನು ಹಿಂಬಾಲಿಸಿದ್ದ ದುಷ್ಕರ್ಮಿಗಳು ಹತ್ಯೆಗೆ ಯತ್ನಿಸಿದ್ದರು. ಮಾತ್ರವಲ್ಲದೆ, ದೂರವಾಣಿ ಮೂಲಕವೂ ಹಲವು ಬಾರಿ ಜೀವ ಬೆದರಿಕೆ ಹಾಕಿದ್ದರು. ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್​​ 506, 507ರ ಅನ್ವಯ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: ಗಣೇಶನ ವಿಸರ್ಜನೆಗೆಂದು ಕೆರೆಯ ಆಳ ತಿಳಿಯಲು ಸ್ನೇಹಿತರ ಜೊತೆ ಹೋದಾಗ ಯುವಕ ನೀರಿನಲ್ಲಿ ಮುಳುಗಿ ಸಾವು

ಮಂಗಳೂರಿನ ಬಜ್ಜೋಡಿ-ಬಿಕರ್ನಕಟ್ಟೆ ರಸ್ತೆಯಲ್ಲಿ ಕಾರು ಹಿಂಬಾಲಿಸಿದ್ದ ದುಷ್ಕರ್ಮಿಗಳು ಆಗಸ್ಟ್ 7ರಂದು ಕಾರಿಗೆ ಬೈಕ್ ತಾಗಿಸಿದ್ದರು. ಅದೇ ದಿನ ರಾತ್ರಿ 11.43ಕ್ಕೆ ಕಾರ್ಯಕರ್ತನಿಗೆ ಕರೆ ಮಾಡಿದ್ದ ಅವರು, ತುಳು ಮಿಶ್ರಿತ ಉರ್ದು ಭಾಷೆಯಲ್ಲಿ ಜೀವ ಬೆದರಿಕೆ ಹಾಕಿದ್ದರು. ಈ ಸಂಬಂಧ ಕಂಕನಾಡಿ ನಗರ ಠಾಣೆಯಲ್ಲಿ FIR ದಾಖಲು

‘ಇನಿ ತಪ್ಪಯ ಪಂಡ್​ದ್ ಖುಷಿ ಮಲ್ಪೋಡ್ಚಿ, ಗೊತ್ತುಂಡು, ನನ್ನ ಮೂಜಿ ಜನ ಪಂಪುವೆಲ್ ಡ್ ಉಲ್ಲೆರತ್ತಾ, ಬುಡ್ಪುಜಿ ಯಾನ್, ಕರ್ತಿನ ಬೇನೆ ಉಂಡು’ (ಈ ದಿನ ತಪ್ಪಿಸಿದ್ದಿ ಎಂದು ಖುಷಿ ಪಡಬೇಡ, ಗೊತ್ತಿದೆ. ಇನ್ನೂ ಮೂರು ಜನ ಪಂಪ್​ವೆಲ್​ನಲ್ಲಿ ಇದ್ದಾರೆ. ನಾನು ಬಿಡುವುದಿಲ್ಲ. ಕೊಂದ ನೋವು ಇದೆ) ಎಂದು ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:18 pm, Mon, 22 August 22

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್