AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕನ್ನಡದಲ್ಲಿ ಹಲವೆಡೆ ಭೂಕಂಪನ ಅನುಭವ; ಸುಳ್ಯದಲ್ಲಿ 3-4 ಸೆಕೆಂಡುಗಳ ಕಾಲ ಭಾರಿ ಶಬ್ದ

ಸುಳ್ಯ ಪಟ್ಟಣ, ಸಂಪಾಜೆ, ಗೂನಡ್ಕ, ಮರ್ಕಂಜ, ಆಲೆಟ್ಟಿ, ತೊಡಿಕಾನ, ಪೆರಾಜೆ ಎಂಬಲ್ಲಿ ಇಂದು ಬೆಳಗ್ಗೆ 9.12 ರ ವೇಳೆಗೆ 3-4 ಸೆಕೆಂಡುಗಳ ಕಾಲ ಶಬ್ದದೊಂದಿಗೆ ಲಘು ಕಂಪನ ಆಗಿದೆ ಎಂಬ ಮಾಹಿತಿ ತಿಳಿದುಬಂದಿದೆ.

ದಕ್ಷಿಣ ಕನ್ನಡದಲ್ಲಿ ಹಲವೆಡೆ ಭೂಕಂಪನ ಅನುಭವ; ಸುಳ್ಯದಲ್ಲಿ 3-4 ಸೆಕೆಂಡುಗಳ ಕಾಲ ಭಾರಿ ಶಬ್ದ
ಮನೆ ಗೋಡೆ ಬಿರುಕು ಬಿಟ್ಟಿದೆ
TV9 Web
| Updated By: sandhya thejappa|

Updated on:Jun 25, 2022 | 1:18 PM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿವಿಧ ಕಡೆ ಭೂಮಿ ಕಂಪಿಸಿದ (Earthquake) ಅನುಭವವಾಗಿದ್ದು, ಜನರು ಆತಂಕಗೊಂಡಿದ್ದಾರೆ. ಸುಳ್ಯ (Sulya) ಪಟ್ಟಣ, ಸಂಪಾಜೆ, ಗೂನಡ್ಕ, ಮರ್ಕಂಜ, ಆಲೆಟ್ಟಿ, ತೊಡಿಕಾನ, ಪೆರಾಜೆ ಎಂಬಲ್ಲಿ ಇಂದು ಬೆಳಗ್ಗೆ 9.12 ರ ವೇಳೆಗೆ 3-4 ಸೆಕೆಂಡುಗಳ ಕಾಲ ಶಬ್ದದೊಂದಿಗೆ ಲಘು ಕಂಪನ ಆಗಿದೆ. ಕೆಲವರ ಮನೆಗಳಲ್ಲಿ ಪಾತ್ರೆಗಳು ಉರುಳಿವೆ ಎಂಬ ಮಾಹಿತಿ ತಿಳಿದುಬಂದಿದೆ. ಜೂನ್ 23ರಂದು ಕೊಡಗು ಮತ್ತು ಹಾಸನ ಜಿಲ್ಲೆಯ ವಿವಿಧೆಡೆ ಭೂಮಿ ಕಂಪಿಸಿದ ಅನುಭವವಾಗಿತ್ತು. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಆಯುಕ್ತರು ಭೂಕಂಪನ ಸಂಭವಿಸಿರುವುದನ್ನು ದೃಢಪಡಿಸಿದ್ದರು.

ಭೂಕಂಪನದಿಂದಾಗಿ ಕೊಡಗು-ದಕ್ಷಿಣ ಕನ್ನಡ ಜಿಲ್ಲೆ ಗಡಿಭಾಗವಾದ ಸಂಪಾಜೆಯಲ್ಲಿ ಮನೆ ಗೋಡೆಗಳು ಬಿರುಕು ಬಿಟ್ಟಿವೆ. ಸಂಪಾಜೆ ಗ್ರಾಮ ಪಂಚಾಯತಿ ಸದಸ್ಯ ಅಬುಶಾಲಿ ಎಂಬುವವರ ಮನೆ ಗೋಡೆಗಳು ಬೀರುಕು ಬಿಟ್ಟಿರುವ ಬಗ್ಗೆ ಮಾಹಿತಿ ಇದೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ವಿರುದ್ಧ ದೆಹಲಿ ಕೋರ್ಟ್​ಗೆ ಸಲ್ಲಿಕೆಯಾಗಿರುವ ಇಡಿ ಚಾರ್ಜ್ ಶೀಟ್​​ನಲ್ಲಿ ಏನೆಲ್ಲಾ ಆರೋಪಗಳಿವೆ?

ಇದನ್ನೂ ಓದಿ
Image
ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮುಗೆ ನಮ್ಮ ಬೆಂಬಲ; ಮಾಯಾವತಿ ಘೋಷಣೆ
Image
Sonu Sood: ರಾಜಮೌಳಿ ‘ಬಾಹುಬಲಿ’ ಚಿತ್ರದ ಆಫರ್​ ಕೊಟ್ರೂ ಒಪ್ಪಿಕೊಂಡಿರಲಿಲ್ಲ ಸೋನು ಸೂದ್​; ಕಾರಣ ಏನು?
Image
IND vs IRE: ಐರ್ಲೆಂಡ್​ನಲ್ಲಿ ಟೀಮ್ ಇಂಡಿಯಾ ಆಟಗಾರರ ನಡುವೆಯೇ ಶುರುವಾಗಿದೆ ಫೈಟ್
Image
Monkeypox: ಮಂಕಿಪಾಕ್ಸ್​ ರೋಗದ ಲಕ್ಷಣಗಳೇನು? ಯಾವಾಗ ಚಿಕಿತ್ಸೆ ಪಡೆಯಬೇಕು?

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರಾಮಸ್ಥರೊಬ್ಬರು, 9 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ನಮ್ಮ ಜೀವನದಲ್ಲಿ ಈ ರೀತಿ ಅನುಭವ ಆಗಿದ್ದು ಎರಡನೇ ಬಾರಿ. ನಾನು ಚಿಕ್ಕವನಿದ್ದಾಗ ಇದೇ ರೀತಿ ಕಂಪನವಾಗಿತ್ತು. ಮೊದಲ ಬಾರಿ ಪಾತ್ರೆಗಳು ಕೆಳಗೆ ಬಿದ್ದಿದ್ದವು. ಆದರೆ ಈ ಬಾರಿ ಅಷ್ಟರ ಮಟ್ಟಿಗೆ ಏನೂ ಆಗಿಲ್ಲ ಎಂದರು.

ಭೂಕಂಪನ ದೃಢ: ಜಿಲ್ಲೆಯಲ್ಲಿ ಹಲವು ಕಡೆ ಭೂಕಂಪನ ಆಗಿರುವ ಬಗ್ಗೆ ರಾಜ್ಯ ವಿಪತ್ತು ನಿರ್ವಹಣಾ ಕೋಶ ದೃಢಪಡಿಸಿದೆ.  ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದ್ದು, ಬೆಳಗ್ಗೆ 9 ಗಂಟೆ 9 ನಿಮಿಷ 48 ಸೆಕೆಂಡ್​ಗೆ ಭೂಕಂಪ ಆಗಿರುವ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಹಳ್ಳದಲ್ಲಿ ಭ್ರೂಣ ಎಸೆದ ಪ್ರಕರಣ: ವೆಂಕಟೇಶ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್ ಜಪ್ತಿ ಮಾಡಿದ ಡಿಎಚ್​ಒ

Published On - 10:11 am, Sat, 25 June 22

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ