AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕನ್ನಡದಲ್ಲಿ ಹಲವೆಡೆ ಭೂಕಂಪನ ಅನುಭವ; ಸುಳ್ಯದಲ್ಲಿ 3-4 ಸೆಕೆಂಡುಗಳ ಕಾಲ ಭಾರಿ ಶಬ್ದ

ಸುಳ್ಯ ಪಟ್ಟಣ, ಸಂಪಾಜೆ, ಗೂನಡ್ಕ, ಮರ್ಕಂಜ, ಆಲೆಟ್ಟಿ, ತೊಡಿಕಾನ, ಪೆರಾಜೆ ಎಂಬಲ್ಲಿ ಇಂದು ಬೆಳಗ್ಗೆ 9.12 ರ ವೇಳೆಗೆ 3-4 ಸೆಕೆಂಡುಗಳ ಕಾಲ ಶಬ್ದದೊಂದಿಗೆ ಲಘು ಕಂಪನ ಆಗಿದೆ ಎಂಬ ಮಾಹಿತಿ ತಿಳಿದುಬಂದಿದೆ.

ದಕ್ಷಿಣ ಕನ್ನಡದಲ್ಲಿ ಹಲವೆಡೆ ಭೂಕಂಪನ ಅನುಭವ; ಸುಳ್ಯದಲ್ಲಿ 3-4 ಸೆಕೆಂಡುಗಳ ಕಾಲ ಭಾರಿ ಶಬ್ದ
ಮನೆ ಗೋಡೆ ಬಿರುಕು ಬಿಟ್ಟಿದೆ
TV9 Web
| Edited By: sandhya thejappa|

Updated on:Jun 25, 2022 | 1:18 PM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿವಿಧ ಕಡೆ ಭೂಮಿ ಕಂಪಿಸಿದ (Earthquake) ಅನುಭವವಾಗಿದ್ದು, ಜನರು ಆತಂಕಗೊಂಡಿದ್ದಾರೆ. ಸುಳ್ಯ (Sulya) ಪಟ್ಟಣ, ಸಂಪಾಜೆ, ಗೂನಡ್ಕ, ಮರ್ಕಂಜ, ಆಲೆಟ್ಟಿ, ತೊಡಿಕಾನ, ಪೆರಾಜೆ ಎಂಬಲ್ಲಿ ಇಂದು ಬೆಳಗ್ಗೆ 9.12 ರ ವೇಳೆಗೆ 3-4 ಸೆಕೆಂಡುಗಳ ಕಾಲ ಶಬ್ದದೊಂದಿಗೆ ಲಘು ಕಂಪನ ಆಗಿದೆ. ಕೆಲವರ ಮನೆಗಳಲ್ಲಿ ಪಾತ್ರೆಗಳು ಉರುಳಿವೆ ಎಂಬ ಮಾಹಿತಿ ತಿಳಿದುಬಂದಿದೆ. ಜೂನ್ 23ರಂದು ಕೊಡಗು ಮತ್ತು ಹಾಸನ ಜಿಲ್ಲೆಯ ವಿವಿಧೆಡೆ ಭೂಮಿ ಕಂಪಿಸಿದ ಅನುಭವವಾಗಿತ್ತು. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಆಯುಕ್ತರು ಭೂಕಂಪನ ಸಂಭವಿಸಿರುವುದನ್ನು ದೃಢಪಡಿಸಿದ್ದರು.

ಭೂಕಂಪನದಿಂದಾಗಿ ಕೊಡಗು-ದಕ್ಷಿಣ ಕನ್ನಡ ಜಿಲ್ಲೆ ಗಡಿಭಾಗವಾದ ಸಂಪಾಜೆಯಲ್ಲಿ ಮನೆ ಗೋಡೆಗಳು ಬಿರುಕು ಬಿಟ್ಟಿವೆ. ಸಂಪಾಜೆ ಗ್ರಾಮ ಪಂಚಾಯತಿ ಸದಸ್ಯ ಅಬುಶಾಲಿ ಎಂಬುವವರ ಮನೆ ಗೋಡೆಗಳು ಬೀರುಕು ಬಿಟ್ಟಿರುವ ಬಗ್ಗೆ ಮಾಹಿತಿ ಇದೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ವಿರುದ್ಧ ದೆಹಲಿ ಕೋರ್ಟ್​ಗೆ ಸಲ್ಲಿಕೆಯಾಗಿರುವ ಇಡಿ ಚಾರ್ಜ್ ಶೀಟ್​​ನಲ್ಲಿ ಏನೆಲ್ಲಾ ಆರೋಪಗಳಿವೆ?

ಇದನ್ನೂ ಓದಿ
Image
ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮುಗೆ ನಮ್ಮ ಬೆಂಬಲ; ಮಾಯಾವತಿ ಘೋಷಣೆ
Image
Sonu Sood: ರಾಜಮೌಳಿ ‘ಬಾಹುಬಲಿ’ ಚಿತ್ರದ ಆಫರ್​ ಕೊಟ್ರೂ ಒಪ್ಪಿಕೊಂಡಿರಲಿಲ್ಲ ಸೋನು ಸೂದ್​; ಕಾರಣ ಏನು?
Image
IND vs IRE: ಐರ್ಲೆಂಡ್​ನಲ್ಲಿ ಟೀಮ್ ಇಂಡಿಯಾ ಆಟಗಾರರ ನಡುವೆಯೇ ಶುರುವಾಗಿದೆ ಫೈಟ್
Image
Monkeypox: ಮಂಕಿಪಾಕ್ಸ್​ ರೋಗದ ಲಕ್ಷಣಗಳೇನು? ಯಾವಾಗ ಚಿಕಿತ್ಸೆ ಪಡೆಯಬೇಕು?

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರಾಮಸ್ಥರೊಬ್ಬರು, 9 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ನಮ್ಮ ಜೀವನದಲ್ಲಿ ಈ ರೀತಿ ಅನುಭವ ಆಗಿದ್ದು ಎರಡನೇ ಬಾರಿ. ನಾನು ಚಿಕ್ಕವನಿದ್ದಾಗ ಇದೇ ರೀತಿ ಕಂಪನವಾಗಿತ್ತು. ಮೊದಲ ಬಾರಿ ಪಾತ್ರೆಗಳು ಕೆಳಗೆ ಬಿದ್ದಿದ್ದವು. ಆದರೆ ಈ ಬಾರಿ ಅಷ್ಟರ ಮಟ್ಟಿಗೆ ಏನೂ ಆಗಿಲ್ಲ ಎಂದರು.

ಭೂಕಂಪನ ದೃಢ: ಜಿಲ್ಲೆಯಲ್ಲಿ ಹಲವು ಕಡೆ ಭೂಕಂಪನ ಆಗಿರುವ ಬಗ್ಗೆ ರಾಜ್ಯ ವಿಪತ್ತು ನಿರ್ವಹಣಾ ಕೋಶ ದೃಢಪಡಿಸಿದೆ.  ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದ್ದು, ಬೆಳಗ್ಗೆ 9 ಗಂಟೆ 9 ನಿಮಿಷ 48 ಸೆಕೆಂಡ್​ಗೆ ಭೂಕಂಪ ಆಗಿರುವ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಹಳ್ಳದಲ್ಲಿ ಭ್ರೂಣ ಎಸೆದ ಪ್ರಕರಣ: ವೆಂಕಟೇಶ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್ ಜಪ್ತಿ ಮಾಡಿದ ಡಿಎಚ್​ಒ

Published On - 10:11 am, Sat, 25 June 22

Follow Us
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ