AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮನೆ ಬಾಗಿಲು ತೆಗೆಯಿರಿ’ ಮಂಗಳೂರಿನ ನಕ್ಸಲ್​​​ ಪೀಡಿತ ಪ್ರದೇಶದ ಒಂಟಿ ಮನೆಗೆ ಅಪರಿಚಿತ ಗ್ಯಾಂಗ್ ಭೇಟಿ

ರಾತ್ರಿ ಆಗಮಿಸಿದ್ದ ಅಪರಿಚಿತರು ಬಾಗಿಲು ತೆಗೆಯಲು ಪ್ರಯತ್ನಿಸುತ್ತಿದ್ದಂತೆ ಮನೆಯ ಮಾಲೀಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ವೇಣೂರು ಮತ್ತು ಬೆಳ್ತಂಗಡಿ ಪೊಲೀಸರು ದೌಡಾಯಿಸಿದ್ದಾರೆ. ಈ ಅಪರಿಚಿತ ತಂಡ, ವೇಣೂರು ಪೊಲೀಸರು ಎಂದು ಹೇಳಿ ಪರಿಚಯ ಮಾಡಿಕೊಂಡು ಬಾಗಿಲು ತೆಗೆಯಿರಿ ಎಂದು ಹೇಳಿದ್ದರಂತೆ.

‘ಮನೆ ಬಾಗಿಲು ತೆಗೆಯಿರಿ’ ಮಂಗಳೂರಿನ ನಕ್ಸಲ್​​​ ಪೀಡಿತ ಪ್ರದೇಶದ ಒಂಟಿ ಮನೆಗೆ ಅಪರಿಚಿತ ಗ್ಯಾಂಗ್ ಭೇಟಿ
ಅಪರಿಚಿತ ತಂಡದಿಂದ ಮನೆಗೆ ಭೇಟಿ
ಅಶೋಕ್​ ಪೂಜಾರಿ, ಮಂಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on:Nov 22, 2023 | 3:59 PM

Share

ದಕ್ಷಿಣ ಕನ್ನಡ, ನ.22: ನಕ್ಸಲ್​(Naxal) ಪೀಡಿತ ಪ್ರದೇಶವಾದ ದಕ್ಷಿಣ ಕನ್ನಡ(Dakshina kannada) ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಅರಣ್ಯ ವ್ಯಾಪ್ತಿಯ ಕುತ್ಲೂರು ಗ್ರಾಮದ ಒಂಟಿ ಮನೆಯೊಂದರ ಬಾಗಿಲನ್ನು ನಿನ್ನೆ(ನ.21) ರಾತ್ರಿ ಐದು ಜನ ಅಪರಿಚಿತರ ತಂಡ ತಟ್ಟಿದ ಘಟನೆ ನಡೆದಿದೆ. ಇದು ಬಹಳ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸ್ಪಷ್ಟನೆ ನೀಡಿದ್ದಾರೆ. ‘ಜಮೀನು ರಿಜಿಸ್ಟರ್ ವಿಚಾರದಲ್ಲಿ ಹಣದ ವ್ಯತ್ಯಾಸದಿಂದ ದೂರು ಹಿನ್ನಲೆ ಆರೋಪಿ ಬೆಳಗ್ಗೆ ಸಿಗಲ್ಲವೆಂದು ರಾತ್ರಿಯೇ ಮೂಡಬಿದ್ರೆ ಪೊಲೀಸರು ಹಣ ವಂಚನೆ ವಿಚಾರದಲ್ಲಿ ಇಬ್ಬರು ಹೆಡ್ ಕಾನ್ಸ್‌ಟೇಬಲ್, ಓರ್ವ ಮಹಿಳಾ ಪೊಲೀಸ್, ಓರ್ವ ದೂರುದಾರರು ಹೋಗಿದ್ದಾರೆ. ಬಳಿಕ ಪೊಲೀಸರು ಎಂದು ಆತನಿಗೆ ನಿನ್ನೆ ರಾತ್ರಿಯೇ ಅರಿವು ಮಾಡಲಾಗಿದೆ. ಆದ್ರೂ ನಕ್ಸಲ್ ಎಂದು ಮನೆ ಮಾಲೀಕ ಜೋಸ್ಸಿ ಆಂಟನಿ ನಾಟಕವಾಡಿದ್ದಾನೆ ಎಂದರು.

 ನಕ್ಸಲ್ ಎಂದು ನಾಟಕವಾಡಿರೋ ಮನೆ ಮಾಲೀಕ

ಅದರಲ್ಲಿ ನಾಲ್ವರು ಪುರುಷರು ನೀಲಿ ಬಣ್ಣದ ಬಟ್ಟೆ ಧರಿಸಿದ್ದರೆ, ಓರ್ವ ಮಹಿಳೆ ಖಾಕಿ ಬಟ್ಟೆ ಧರಿಸಿ, ಕೈಯಲ್ಲಿ ಮಾರಕಸ್ತ್ರಗಳನ್ನು ಹಿಡಿದು ಬಂದಿದ್ದರಂತೆ. ಜೊತೆಗೆ ಮನೆಯ ಬಾಗಿಲನ್ನು ತೆಗೆಯದೇ ಇದ್ದಾಗ, ಹಾರೆಯಲ್ಲಿ ಮೀಟಿ ಬಾಗಿಲನ್ನು ತೆಗೆಯಲು ಪ್ರಯತ್ನಿಸಿದ್ದಾಗಿ ಮನೆ ನಿವಾಸಿ ಜೋಸಿ ಆಂಟನಿ ಹೇಳಿದ್ದರು.

ಇದನ್ನೂ ಓದಿ:ಛತ್ತೀಸ್‌ಗಢದಲ್ಲಿ ನಕ್ಸಲ್ ವಿರುದ್ಧ ಬೃಹತ್ ಕಾರ್ಯಾಚರಣೆ, ಮಾವೋವಾದಿ ನಾಯಕ ಮದ್ವಿ ಹಿದ್ಮಾ ಹತ?

ಇನ್ನು ರಾತ್ರಿ ಆಗಮಿಸಿದ್ದ ಅಪರಿಚಿತರು ಬಾಗಿಲು ತೆಗೆಯಲು ಪ್ರಯತ್ನಿಸುತ್ತಿದ್ದಂತೆ ಮನೆಯ ಮಾಲೀಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ವೇಣೂರು ಮತ್ತು ಬೆಳ್ತಂಗಡಿ ಪೊಲೀಸರು ದೌಡಾಯಿಸಿದ್ದಾರೆ. ಈ ಅಪರಿಚಿತ ತಂಡ, ವೇಣೂರು ಪೊಲೀಸರು ಎಂದು ಹೇಳಿ ಪರಿಚಯ ಮಾಡಿಕೊಂಡು ಬಾಗಿಲು ತೆಗೆಯಿರಿ ಎಂದು ಹೇಳಿದ್ದರಂತೆ. ಬಂದಿದ್ದವರು ನಕ್ಸಲರು ಎಂಬ ಶಂಕೆ ವ್ಯಕ್ತವಾಗಿದ್ದು, ಆ ನಿಟ್ಟಿನಲ್ಲಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:20 pm, Wed, 22 November 23

Follow Us
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು