AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲು ಜಾರಿ ಬಿಸಿಯೂಟದ ಸಾಂಬಾರು ಪಾತ್ರೆಗೆ ಬಿದ್ದಿದ್ದ ಅಡುಗೆ ಸಹಾಯಕಿ ಸಾವು

ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಕಾಲು ಜಾರಿ ಸಾಂಬಾರು ಪಾತ್ರೆಗೆ ಬಿದ್ದಿದ್ದರು.ಪ್ರಮೀಳಾರನ್ನು ತಕ್ಷಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.

ಕಾಲು ಜಾರಿ ಬಿಸಿಯೂಟದ ಸಾಂಬಾರು ಪಾತ್ರೆಗೆ ಬಿದ್ದಿದ್ದ ಅಡುಗೆ ಸಹಾಯಕಿ ಸಾವು
ಕಾಲು ಜಾರಿ ಬಿಸಿಯೂಟದ ಸಾಂಬಾರು ಪಾತ್ರೆಗೆ ಬಿದ್ದಿದ್ದ ಅಡುಗೆ ಸಹಾಯಕಿ ಸಾವು
TV9 Web
| Edited By: |

Updated on:Jun 14, 2022 | 9:10 PM

Share

ಮಂಗಳೂರು: ಬಿಸಿಯೂಟದ ಸಾಂಬಾರು ಪಾತ್ರೆಗೆ ಬಿದ್ದು ಗಾಯಗೊಂಡಿದ್ದ ಅಡುಗೆ ಸಹಾಯಕಿ ಸಾವನ್ನಪ್ಪಿದ್ದಾರೆ. ಅಗ್ನೇಸ್ ಪ್ರಮೀಳಾ ಡಿಸೋಜಾ (37) ಸಾವಿಗೀಡಾದ ದುರ್ದೈವಿ. ಪ್ರಮೀಳಾ ಡಿಸೋಜಾ ಅವರು ಮೇ 30 ರಂದು ಸಾಂಬಾರು ಪಾತ್ರೆಗೆ ಬಿದ್ದು ಗಾಯಗೊಂಡಿದ್ದರು. ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಕಾಲು ಜಾರಿ ಸಾಂಬಾರು ಪಾತ್ರೆಗೆ ಬಿದ್ದಿದ್ದರು.ಪ್ರಮೀಳಾರನ್ನು ತಕ್ಷಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಇವರು ಪುತ್ತೂರಿನ ವಿಕ್ಟರ್ಸ್ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಡಿಲು ಬಡಿದು ಯುವತಿ ದುರ್ಮರಣ:

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು ಮಲ್ಲಾ(ಬಿ) ಗ್ರಾಮದಲ್ಲಿ ಸಿಡಿಲು ಬಡಿದು ಯುವತಿ ದುರ್ಮರಣಕ್ಕೀಡಾಗಿದ್ದಾಳೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ 17 ವರ್ಷದ ವಿದ್ಯಾಶ್ರೀ ಮೃತಪಟ್ಟ ದುರ್ದೈವಿ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅಡುಗೆ ಅನಿಲ ಸೋರಿಕೆಯಾಗಿ ಹೊತ್ತಿ ಉರಿದ ಸಿಲಿಂಡರ್, ಮಹಿಳೆಗೆ ಗಂಭೀರ ಗಾಯ

ಬೆಳಗಾವಿ: ಶಾರ್ಟ್ ಸರ್ಕ್ಯೂಟ್ ವೇಳೆ ಅಡುಗೆ ಅನಿಲ ಸೋರಿಕೆಯಾಗಿ ಸಿಲಿಂಡರ್ ಹೊತ್ತಿ ಉರಿದಿದೆ. ಇದರಿಂದ ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣದಲ್ಲಿ ಜಗದೀಶ್ ಬಾಣಗಿ ಎಂಬುವರ ಮನೆಯಲ್ಲಿ ಈ ಆಕಸ್ಮಿಕ ಘಟ‌ನೆ ನಡೆದಿದೆ. 47 ವರ್ಷದ ನಾರು ಡೆಗೆ ಎಂಬುವರ ಕೈ, ಕಾಲು, ಹೊಟ್ಟೆ, ಮುಖಕ್ಕೆ ಸುಟ್ಟ ಗಾಯಗಳಾಗಿವೆ. ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.

ಅಫಜಲಪುರ ಬಿಇಒ ದೇಶಮುಖ್ ಎಸಿಬಿ ಬಲೆಗೆ

ಕಲಬುರಗಿ ಜಿಲ್ಲೆ ಅಫಜಲಪುರ ಬಿಇಒ ದೇಶಮುಖ್ ಕಲಬುರಗಿಯ ಹೋಟೆಲ್ ಬಳಿ ₹ 15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ತಾಲೂಕಿನ ಹೇರೂರ್ ಗ್ರಾಮದ ಅನುದಾನಿತ ಶಾಲೆಯ ಸಿಬ್ಬಂದಿಗೆ ಸಂಬಳ ನೀಡಲು ಶ್ರೀಯುತರು ಲಂಚಕ್ಕೆ ಬೇಡಿಕೆಯೊಡ್ಡಿದ್ದರು. ಹೆಡ್ ಮಾಸ್ಟರ್ ರಾಜಶೇಖರ್ ಖಿಲಾರಿ ಎಂಬುವವರ ಬಳಿ ದೇಶಮುಖ್ ಲಂಚ ಸ್ವೀಕರಿಸುತ್ತಿದ್ದ. ಎರಡು ತಿಂಗಳ ಅವಧಿಗೆ ಆರು ಲಕ್ಷ ರೂಪಾಯಿ ಸ್ಯಾಲರಿ ಮಾಡೋದಕ್ಕೆ ಆರೋಪಿ ದೇಶಮುಖ್ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಅಫಜಲಪುರದಿಂದ ಬಂದು ಕಲಬುರಗಿಯ ಹೊಟೇಲ್ ಬಳಿ 15 ಸಾವಿರ ಹಣ ಪಡೆಯುವಾಗ ಎಸಿಬಿ ಬಲೆಗೆ ದೇಶಮುಖ್ ಸಿಕ್ಕಿಬಿದ್ದಿದ್ದಾನೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಇದನ್ನೂ ಓದಿ: ಸದಾ ಬಂಗಾರ ಧರಿಸುವುದರಿಂದ ಈ ಐದು ರಾಶಿಯವರಿಗೆ ಅದೃಷ್ಟ ಒಲಿದು ಬರುತ್ತಂತೆ

Published On - 8:57 pm, Tue, 14 June 22

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​