AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲು ಜಾರಿ ಬಿಸಿಯೂಟದ ಸಾಂಬಾರು ಪಾತ್ರೆಗೆ ಬಿದ್ದಿದ್ದ ಅಡುಗೆ ಸಹಾಯಕಿ ಸಾವು

ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಕಾಲು ಜಾರಿ ಸಾಂಬಾರು ಪಾತ್ರೆಗೆ ಬಿದ್ದಿದ್ದರು.ಪ್ರಮೀಳಾರನ್ನು ತಕ್ಷಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.

ಕಾಲು ಜಾರಿ ಬಿಸಿಯೂಟದ ಸಾಂಬಾರು ಪಾತ್ರೆಗೆ ಬಿದ್ದಿದ್ದ ಅಡುಗೆ ಸಹಾಯಕಿ ಸಾವು
ಕಾಲು ಜಾರಿ ಬಿಸಿಯೂಟದ ಸಾಂಬಾರು ಪಾತ್ರೆಗೆ ಬಿದ್ದಿದ್ದ ಅಡುಗೆ ಸಹಾಯಕಿ ಸಾವು
TV9 Web
| Edited By: ಸಾಧು ಶ್ರೀನಾಥ್​|

Updated on:Jun 14, 2022 | 9:10 PM

Share

ಮಂಗಳೂರು: ಬಿಸಿಯೂಟದ ಸಾಂಬಾರು ಪಾತ್ರೆಗೆ ಬಿದ್ದು ಗಾಯಗೊಂಡಿದ್ದ ಅಡುಗೆ ಸಹಾಯಕಿ ಸಾವನ್ನಪ್ಪಿದ್ದಾರೆ. ಅಗ್ನೇಸ್ ಪ್ರಮೀಳಾ ಡಿಸೋಜಾ (37) ಸಾವಿಗೀಡಾದ ದುರ್ದೈವಿ. ಪ್ರಮೀಳಾ ಡಿಸೋಜಾ ಅವರು ಮೇ 30 ರಂದು ಸಾಂಬಾರು ಪಾತ್ರೆಗೆ ಬಿದ್ದು ಗಾಯಗೊಂಡಿದ್ದರು. ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಕಾಲು ಜಾರಿ ಸಾಂಬಾರು ಪಾತ್ರೆಗೆ ಬಿದ್ದಿದ್ದರು.ಪ್ರಮೀಳಾರನ್ನು ತಕ್ಷಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಇವರು ಪುತ್ತೂರಿನ ವಿಕ್ಟರ್ಸ್ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಡಿಲು ಬಡಿದು ಯುವತಿ ದುರ್ಮರಣ:

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು ಮಲ್ಲಾ(ಬಿ) ಗ್ರಾಮದಲ್ಲಿ ಸಿಡಿಲು ಬಡಿದು ಯುವತಿ ದುರ್ಮರಣಕ್ಕೀಡಾಗಿದ್ದಾಳೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ 17 ವರ್ಷದ ವಿದ್ಯಾಶ್ರೀ ಮೃತಪಟ್ಟ ದುರ್ದೈವಿ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅಡುಗೆ ಅನಿಲ ಸೋರಿಕೆಯಾಗಿ ಹೊತ್ತಿ ಉರಿದ ಸಿಲಿಂಡರ್, ಮಹಿಳೆಗೆ ಗಂಭೀರ ಗಾಯ

ಬೆಳಗಾವಿ: ಶಾರ್ಟ್ ಸರ್ಕ್ಯೂಟ್ ವೇಳೆ ಅಡುಗೆ ಅನಿಲ ಸೋರಿಕೆಯಾಗಿ ಸಿಲಿಂಡರ್ ಹೊತ್ತಿ ಉರಿದಿದೆ. ಇದರಿಂದ ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣದಲ್ಲಿ ಜಗದೀಶ್ ಬಾಣಗಿ ಎಂಬುವರ ಮನೆಯಲ್ಲಿ ಈ ಆಕಸ್ಮಿಕ ಘಟ‌ನೆ ನಡೆದಿದೆ. 47 ವರ್ಷದ ನಾರು ಡೆಗೆ ಎಂಬುವರ ಕೈ, ಕಾಲು, ಹೊಟ್ಟೆ, ಮುಖಕ್ಕೆ ಸುಟ್ಟ ಗಾಯಗಳಾಗಿವೆ. ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.

ಅಫಜಲಪುರ ಬಿಇಒ ದೇಶಮುಖ್ ಎಸಿಬಿ ಬಲೆಗೆ

ಕಲಬುರಗಿ ಜಿಲ್ಲೆ ಅಫಜಲಪುರ ಬಿಇಒ ದೇಶಮುಖ್ ಕಲಬುರಗಿಯ ಹೋಟೆಲ್ ಬಳಿ ₹ 15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ತಾಲೂಕಿನ ಹೇರೂರ್ ಗ್ರಾಮದ ಅನುದಾನಿತ ಶಾಲೆಯ ಸಿಬ್ಬಂದಿಗೆ ಸಂಬಳ ನೀಡಲು ಶ್ರೀಯುತರು ಲಂಚಕ್ಕೆ ಬೇಡಿಕೆಯೊಡ್ಡಿದ್ದರು. ಹೆಡ್ ಮಾಸ್ಟರ್ ರಾಜಶೇಖರ್ ಖಿಲಾರಿ ಎಂಬುವವರ ಬಳಿ ದೇಶಮುಖ್ ಲಂಚ ಸ್ವೀಕರಿಸುತ್ತಿದ್ದ. ಎರಡು ತಿಂಗಳ ಅವಧಿಗೆ ಆರು ಲಕ್ಷ ರೂಪಾಯಿ ಸ್ಯಾಲರಿ ಮಾಡೋದಕ್ಕೆ ಆರೋಪಿ ದೇಶಮುಖ್ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಅಫಜಲಪುರದಿಂದ ಬಂದು ಕಲಬುರಗಿಯ ಹೊಟೇಲ್ ಬಳಿ 15 ಸಾವಿರ ಹಣ ಪಡೆಯುವಾಗ ಎಸಿಬಿ ಬಲೆಗೆ ದೇಶಮುಖ್ ಸಿಕ್ಕಿಬಿದ್ದಿದ್ದಾನೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಇದನ್ನೂ ಓದಿ: ಸದಾ ಬಂಗಾರ ಧರಿಸುವುದರಿಂದ ಈ ಐದು ರಾಶಿಯವರಿಗೆ ಅದೃಷ್ಟ ಒಲಿದು ಬರುತ್ತಂತೆ

Published On - 8:57 pm, Tue, 14 June 22

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್