AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ​ಗಿರಿ : ಅನ್ಯಕೋಮಿನ ಯುವಕ, ಯುವತಿ ಮೇಲೆ ಹಲ್ಲೆ?

ಅನ್ಯಕೋಮಿನ ಯುವಕ, ಯುವತಿ ಮೇಲೆ ಯುವಕರಿಂದ ಹಲ್ಲೆಗೆ ಯತ್ನಿಸಿರುವಂತಹ ಘಟನೆ ಮಂಗಳೂರಿನ ಕದ್ರಿ ಉದ್ಯಾನವನದ ಬಳಿ ನಡೆದಿದೆ. ಆ ಮೂಲಕ ನಗರದಲ್ಲಿ ಮತ್ತೊಂದು ನೈತಿಕ ಪೊಲೀಸ್ ​ಗಿರಿ ನಡೆದಿದೆ. ಘಟನೆ ಹಿನ್ನೆಲೆ ಕೆಲ ಯುವಕರನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ​ಗಿರಿ : ಅನ್ಯಕೋಮಿನ ಯುವಕ, ಯುವತಿ ಮೇಲೆ ಹಲ್ಲೆ?
ಪ್ರಾತಿನಿಧಿಕ ಚಿತ್ರ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jan 19, 2024 | 8:20 PM

Share

ಮಂಗಳೂರು, ಜನವರಿ 19: ಅನ್ಯಕೋಮಿನ ಯುವಕ, ಯುವತಿ ಮೇಲೆ ಯುವಕರಿಂದ ಹಲ್ಲೆಗೆ ಯತ್ನಿಸಿರುವಂತಹ ಘಟನೆ ಮಂಗಳೂರಿನ ಕದ್ರಿ ಉದ್ಯಾನವನದ ಬಳಿ ನಡೆದಿದೆ. ಆ ಮೂಲಕ ನಗರದಲ್ಲಿ ಮತ್ತೊಂದು ನೈತಿಕ ಪೊಲೀಸ್ ​ಗಿರಿ (moral police) ನಡೆದಿದೆ. ಘಟನೆ ಹಿನ್ನೆಲೆ ಕೆಲ ಯುವಕರನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದೇರಳಕಟ್ಟೆಯಿಂದ ಬಸ್​ನಲ್ಲಿ ಬಂದಿದ್ದು, ಅಂಬೇಡ್ಕರ್ ವೃತ್ತಕ್ಕೆ ಜತೆಯಾಗಿ ಬಂದಿದ್ದಾರೆ. ಈ ವೇಳೆ ಯುವಕ, ಯುವತಿಯನ್ನ ಯುವಕರ ತಂಡ ಫಾಲೋ ಮಾಡಿದೆ. ಕದ್ರಿ ಪಾರ್ಕ್ ಬಳಿ ತಡೆದು ಜೋಡಿ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಕಂಡುಬಂದಿದೆ.

ಎರಡನೇ ಬಾರಿ ನಡೆದ ನೈತಿಕ ಪೊಲೀಸ್ ಗಿರಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದ ವಿವೇಕನಂದ ಕಾಲೇಜಿನಲ್ಲಿ ವ್ಯಾಸಂಗ ಮಾಡುತಿದ್ದ ಹಿಂದೂ ಯುವಕ ಹಾಗೂ ಮುಸ್ಲಿಂ ಯುವತಿ ಚಿಂತಾಮಣಿ ನಗರದ ಮೆಹಬೂಬ್ ನಗರದಲ್ಲಿ ತಿರುಗಾಡುತಿದ್ದ ವೇಳೆ ಅನ್ಯಕೋಮಿನ ಯುವಕರು, ಅವರಿಬ್ಬರನ್ನು ರಸ್ತೆಯಲ್ಲಿ ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ಪ್ರದರ್ಶನ ತೋರಿ ದೌರ್ಜನ್ಯ ಎಸಗಿರುವ ಘಟನೆ ಇತ್ತೀಚೆಗೆ ಚಿಂತಾಮಣಿ ನಗರದ ಮೆಹಬೂಬ್ ನಗರದಲ್ಲಿ ನಡೆದಿತ್ತು.

ಇದನ್ನೂ ಓದಿ: ಧರ್ಮಸ್ಥಳದಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಸುತ್ತಾಟ; ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ನಾವಿಬ್ಬರು ಸ್ನೇಹಿತರು ಎಂದು ಅಂಗಲಾಚಿ ಬೇಡಿಕೊಂಡರೂ ಬಿಡದೆ ಅನ್ಯ ಕೋಮಿನ ಯುವಕರ ಗುಂಪು, ಯುವಕ -ಯುವತಿ ಮೇಲೆ ದಾಂದಲೆ ನಡೆಸಿ ಹಲ್ಲೆಗೆ ಯತ್ನಿಸಿದ್ದರು.

ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್​ಗಿರಿ: ಅನ್ಯಕೋಮಿನ ಜೋಡಿ ಮೇಲೆ ದಾಳಿ

ಹಿಂದೂ ಯುವಕ ಹಾಗೂ ಅನ್ಯ ಕೋಮಿನ ಯುವತಿ ಹೋಟಲ್​ಗೆ ತಿಂಡಿ ತಿನ್ನಲು ಹೋಗಿದ್ದಕ್ಕೆ ಅನ್ಯ ಕೋಮಿನ ಪುಂಡರ ಗ್ಯಾಂಗ್ ಇದೆ ರೀತಿ ನೈತಿಕ ಪೊಲೀಸ್ ಗಿರಿ ನಡೆಸಿ ದೌರ್ಜನ್ಯ ಎಸಗಿದ್ದರು. ಆ ಘಟನೆ ಮರೆಯುವುದಕ್ಕೂ ಮುನ್ನ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿರುವುದು ವಿಪರ್ಯಾಸ.

ಅನ್ಯಕೋಮಿನ ಜೋಡಿ ಮೇಲೆ ದಾಳಿ

ದಕ್ಷಿಣ ಕನ್ನಡ ಜಿಲ್ಲೆ ಹೇಳಿ ಕೇಳಿ ಕೋಮ ಸೂಕ್ಷ್ಮ ಪ್ರದೇಶ. ಯಾವುದೇ ಘಟನೆ ನಡೆದರೂ ಅದಕ್ಕೆ ಕೋಮು ಅನ್ನೋದು ತಳುಕು ಹಾಕಿಕೊಂಡಿರುತ್ತದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಣಾಳಿಕೆಯಲ್ಲೂ ಕೂಡ ಇದು ಒಂದು ಭಾಗವಾಗಿತ್ತು. ಸರ್ಕಾರ ಬಂದ ಕೂಡಲೇ ಗೃಹ ಸಚಿವ ಡಾ. ಜಿ ಪರಮೇಶ್ವರ್, ಮಂಗಳೂರಿಗೆ ಭೇಟಿ ಕೊಟ್ಟು ನೈತಿಕ ಪೊಲೀಸ್ ಗಿರಿಯನ್ನು ಹತ್ತಿಕ್ಕಲು ಪೊಲೀಸರಿಗೆ ಸೂಚಿಸಿದ್ದರು. ಆದರೆ ನೈತಿಕ ಪೊಲೀಸ್ ಗಿರಿ ಮತ್ತೆ ಮತ್ತೆ ಹೆಚ್ಚಾಗುತ್ತಲೇ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ