AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಚ್ಚಿಬೀಳಿಸುವ ವರದಿ: ಮಕ್ಕಳ ಕೈಗೆ ಮೊಬೈಲ್‌ ಕೊಡುವ ಪೋಷಕರು ಈ ಸುದ್ದಿ ಓದಲೇ ಬೇಕು

ಸರಣಿ ಹೃದಯಾಘಾತ ಪ್ರಕರಣದಿಂದ ಹಾಸನ ಪತರುಗುಟ್ಟಿ ಹೋಗಿದೆ. ರಾಜ್ಯ ಆರೋಗ್ಯ ಇಲಾಖೆ ಹಾರ್ಟ್‌ ಆಟ್ಯಾಕ್‌ನಿಂದಾಗುತ್ತಿರುವ ಸರಣಿ ಸಾವುಗಳನ್ನ ನಿಯಂತ್ರಣಕ್ಕೆ ಪರಿಹಾರ ಹುಡುಕುತ್ತಿದೆ. ದಕ್ಷಿಣ ಕನ್ನಡ ಈ ವಿಚಾರದಲ್ಲಿ ಸೇಫ್‌ ಎಂದು ಕೊಳ್ಳುತ್ತಿರುವಾಗಲೇ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯೊಂದು ಬೆಚ್ಚಿಬೀಳಿಸುವಂತಿದೆ. ಈ ವರದಿ ಕಂಡ ಪೋಷಕರು ಆತಂಕ್ಕೀಡಾಗಿದ್ದು, ಮಕ್ಕಳ ಕೈಗೆ ಮೊಬೈಲ್‌ ಕೊಡುವ ಪೋಷಕರು ಈ ಸ್ಟೋರಿ ಓದಲೇಬೇಕು.

ಬೆಚ್ಚಿಬೀಳಿಸುವ ವರದಿ: ಮಕ್ಕಳ ಕೈಗೆ ಮೊಬೈಲ್‌ ಕೊಡುವ ಪೋಷಕರು ಈ ಸುದ್ದಿ ಓದಲೇ ಬೇಕು
Mobile Effect
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Jul 07, 2025 | 5:18 PM

Share

ಮಂಗಳೂರು, (ಜುಲೈ 07): ಪುಟಾಣಿ ಮಕ್ಕಳಿಂದ (Children) ಹಿಡಿದು ಹಿರಿಯ ವಯಸ್ಕರರಿಗೂ ಮೊಬೈಲ್‌ (Mobile Phone) ಅಂದರೆ ಅಚ್ಚು ಮೆಚ್ಚು. ಒಂದು ರೀತಿ ಬಾಳ ಸಂಗಾತಿ ರೀತಿ. ಕೆಲವರಿಗೆ ಮೊಬೈಲ್‌ ಇಲ್ಲದೆ ಒಂದು ಕ್ಷಣವೂ ಕಳೆಯೋದಕ್ಕೆ ಸಾಧ್ಯವಿಲ್ಲ. ಒಂದರ್ಥದಲ್ಲಿ ಮೊಬೈಲ್‌ ಬಳಸುವುದು ಒಂದು ವ್ಯಸನದ ರೀತಿ ಪರಿವರ್ತನೆಯಾಗಿದೆ. ಇದರಿಂದ ಕಣ್ಣಿಗೂ (Eyes) ಮನಸ್ಸಿಗೂ ಆರೋಗ್ಯಕ್ಕೂ ಸಮಸ್ಯೆ. ಈ ಸಂಬಂಧ ದಕ್ಷಿಣ ಕನ್ನಡ (Dakhsina Kannada) ಜಿಲ್ಲೆಯ ಬೆಚ್ಚಿಬೀಳಿಸುವ ವರದಿಯೊಂದನ್ನು ಆರೋಗ್ಯ ಇಲಾಖೆ ರಿಲೀಸ್‌ ಮಾಡಿದ್ದು, ಒಂದಲ್ಲ ಎರಡಲ್ಲ ಬರೊಬ್ಬರಿ ನಾಲ್ಕು ಸಾವಿರ ಮಕ್ಕಳು ದೃಷ್ಟಿ ದೋಷ ಸಮಸ್ಯೆಯಿಂದ ಬಳಲುತ್ತಿದ್ದಾರೆ.ಈ ವರದಿಯಲ್ಲಿ ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಮೊಬೈಲ್​​ ನಿಂದ ಮಕ್ಕಳಿಗೆ ದೃಷ್ಟಿ ದೋಷ

ಒಂದರ್ಥದಲ್ಲಿ ಮೊಬೈಲ್‌ ಬಳಸೋದು ಒಂದು ವ್ಯಸನದ ರೀತಿ ಪರಿವರ್ತನೆಯಾಗಿದೆ. ಇದರಿಂದ ನಮ್ಮ ಕಣ್ಣಿಗೂ ಮನಸ್ಸಿಗೂ ಆರೋಗ್ಯಕ್ಕೂ ಒಂದು ರೀತಿ ಸಮಸ್ಯೆ ಅನ್ನೋದು ಗೊತ್ತಿದ್ರು ನಾವ್ಯಾರು ಮೊಬೈಲ್‌ ಬಳಸುವುದನ್ನು ಕಡಿಮೆ ಮಾಡಲ್ಲ. ಹದಿ ಹರೆಯದವರಾದ್ರು ಓಕೆ ಆದರೆ ಪುಟ್ಟ ಪುಟ್ಟ ಮಕ್ಕಳು ಈ ಮೊಬೈಲ್‌ ಬಳಸಿ ಅದೆಂಥ ಸಂಕಷ್ಟಕ್ಕೆ ಸಿಲುಕಿದ್ದಾರೆ ಗೊತ್ತಾ? ರಾಷ್ಟ್ರೀಯ ಅಂದತ್ವ ನಿವಾರಣ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಭಯಾನಕ ಮಾಹಿತಿ ಪತ್ತೆಯಾಗಿದೆ. ಕೇವಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 4 ಸಾವಿರ ಮಕ್ಕಳು ದೃಷ್ಟಿ ದೋಷದ ಸಮಸ್ಯೆ ಇದ್ದು, ಸುಮಾರು 4398 ಮಕ್ಕಳಿಗೆ ಗಂಭೀರ ದೃಷ್ಟಿ ದೋಷದ ಸಮಸ್ಯೆ ಕಂಡುಬಂದಿರುವುದು ವರದಿಯಲ್ಲಿ ದೃಢಪಟ್ಟಿದೆ. ಈ ಪೈಕಿ 2066 ಮಕ್ಕಳಿಗೆ ಕನ್ನಡಕ ಕಡ್ಡಾಯವಾಗಿ ಧರಿಸುವ ಅಗತ್ಯವಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಹೃದಯಾಘಾತ ಪ್ರಕರಣ ಹೆಚ್ಚಳಕ್ಕೆ ಕಾರಣವೇನು? ಸರ್ಕಾರಕ್ಕೆ ಸಲ್ಲಿಕೆಯಾಯ್ತು ತಜ್ಞರ ವರದಿ

ದೃಷ್ಟಿ ಜತೆಗೆ ಮಾನಸಿಕ ಆರೋಗ್ಯ ಸಮಸ್ಯೆ

ದಕ್ಷಿಣ ಕನ್ನಡ ಜಿಲ್ಲೆಯ 1376 ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳನ್ನು ಒಳಗೊಂಡ ಈ ತಪಾಸಣೆ ರಾಷ್ಟ್ರೀಯ ಅಂದತ್ವ ನಿವಾರಣಾ ಯೋಜನೆಯಡಿ ಕೈಗೊಳ್ಳಲಾಗಿತ್ತು. 1,45,951 ಮಕ್ಕಳನ್ನು ಪರೀಕ್ಷಿಸಲಾಗಿದ್ದು, ಅವರಲ್ಲಿ 4,398 ಮಕ್ಕಳಿಗೆ ದೃಷ್ಟಿದೋಷ ಕಂಡುಬಂದಿದೆ. ಮೊಬೈಲ್ ಬಳಕೆಯಿಂದ ಕೇವಲ ದೃಷ್ಟಿದೋಷ ಮಾತ್ರವಲ್ಲ, ಮಾನಸಿಕ ಸಮಸ್ಯೆಗಳೂ ಕಾಣಿಸಿಕೊಂಡಿವೆ. ಇದಕ್ಕಾಗಿ ಮಾನಸಿಕ ಆರೋಗ್ಯ ಕುರಿತು ಮನೋಸ್ಥೈರ್ಯ ಎಂಬ ಜಾಗೃತಿ ಅಭಿಯಾನದ ಜೊತೆಗೆ ಪ್ರತಿ ಶಾಲೆಯ ಒಬ್ಬ ಶಿಕ್ಷಕಿಗೆ ವಿಶೇಷ ತರಬೇತಿ ನೀಡಿ ಮಕ್ಕಳ ಮಾನಸಿಕ ಸಮಸ್ಯೆ ಗುರುತಿಸಲು ಯೋಗ್ಯ ಮಾಡಲಾಗಿದೆ.‌ ಅತಿಯಾದ ಮೊಬೈಲ್ ಬಳಕೆಯು ಮಕ್ಕಳ ದೃಷ್ಟಿ ಹಾಗೂ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದೆ.

ಒಟ್ಟಿನಲ್ಲಿ ಆನ್‌ಲೈನ್ ಕ್ಲಾಸ್‌ ಹೆಸರಲ್ಲಿ ಮಕ್ಕಳ ಕೈ ಸೇರಿದ್ದ ಮೊಬೈಲ್‌ ಇದೀಗ ಅವರ ಕೈಯಿಂದ ಬಿಡಿಸಲಾಗದಷ್ಟು ಬಿಗಿಯಾಗಿದೆ. ಇನ್ನಾದರು ಪೋಷಕರು ಎಚ್ಚೆತ್ತು ಮಕ್ಕಳ ಮೊಬೈಲ್ ಬಳಕೆಯನ್ನು ನಿಯಂತ್ರಿಸಬೇಕು, ಸಮಯಕ್ಕೆ ಸರಿಯಾಗಿ ಕಣ್ಣಿನ ತಪಾಸಣೆ ಮಾಡಿಸಿ, ತಜ್ಞರ ಸಲಹೆ ಪಡೆಯುವುದು ಅತ್ಯಂತ ಅಗತ್ಯವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ