ಅರುಣ್ ಕುಮಾರ್ ಪುತ್ತಿಲ ಜತೆಗಿನ ಸಂಧಾನ ಯಶಸ್ವಿ, ಹಿಂದೂ ಮುಖಂಡ ನಾಳೆ ಬಿಜೆಪಿ ಸೇರ್ಪಡೆ

Arun Kumar Puthila: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಜತೆಗಿನ ಬಿಜೆಪಿ ನಾಯಕರ ಸಂಧಾನ ಯಶಸ್ವಿಯಾಗಿದ್ದು, ಅರುಣ್ ಪುತ್ತಿಲ ವಾಪಸ್ ಬಿಜೆಪಿ ಸೇರ್ಪಡೆಗೆ ಒಪ್ಪಿಕೊಂಡಿದ್ದಾರೆ. ಅದರಂತೆ ನಾಳೆಯೇ ಮಂಗಳೂರಿನಲ್ಲಿ ಪುತ್ತಿಲ ಪಕ್ಷ ಸೇರ್ಪಡೆಯಾಗಲಿದ್ದಾರೆ.

ಅರುಣ್ ಕುಮಾರ್ ಪುತ್ತಿಲ ಜತೆಗಿನ ಸಂಧಾನ ಯಶಸ್ವಿ, ಹಿಂದೂ ಮುಖಂಡ ನಾಳೆ ಬಿಜೆಪಿ ಸೇರ್ಪಡೆ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Mar 14, 2024 | 10:22 PM

ಬೆಂಗಳೂರು. ಮಂಗಳೂರು, (ಮಾರ್ಚ್ 14): ಲೋಕಸಭಾ ಚುನಾವಣೆ (Loksabha Elections 2024) ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ (Arun Kumar Puthila) ಜತೆಗಿನ ಬಿಜೆಪಿ ನಾಯಕರ ಸಂಧಾನ ಯಶಸ್ವಿಯಾಗಿದೆ. ಇಂದು(ಮಾರ್ಚ್ 14) ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸಂಧಾನ ಸಭೆ ನಡೆದಿದ್ದು, ಅರುಣ್ ಪುತ್ತಿಲ ಅವರನ್ನು ಮನವೊಲಿಸುವಲ್ಲಿ ಬಿಜೆಪಿ ನಾಯಕರು ಕೊನೆಗೂ ಯಶಸ್ವಿಯಾಗಿದ್ದು, ನಾಳೆ (ಮಾರ್ಚ್​ 15) ಅರುಣ್ ಪುತ್ತಿಲ ಅವರು ಮಂಗಳೂರಿನಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಆನೆ ಬಲಬಂದಂತಾಗಿದೆ.

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್  ನೇತೃತ್ವದಲ್ಲಿ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಪುತ್ತಿಲರ ಜೊತೆಗಿನ ಸಂಧಾನ ಯಶಸ್ವಿಯಾಗಿದ್ದು, ಇದೀಗ ಬಿಜೆಪಿಗೆ ಮರುಸೇರ್ಪಡೆಯಾಗಲು ಪುತ್ತಿಲ ಒಪ್ಪಿಗೆ ನೀಡಿದ್ದಾರೆ. ಇದರೊಂದಿಗೆ ಕಳೆದ ವಿಧಾನಸಭಾ ಚುನಾವಣೆಯಿಂದ ಆರಂಭಗೊಂಡಿದ್ದ ಬಿಜೆಪಿ-ಪುತ್ತಿಲರ ನಡುವಿನ ಸಂಘರ್ಷ ಅಂತ್ಯವಾದಂತಾಗಿದೆ.

ಇನ್ನು ಪ್ರಮುಖವಾಗಿ ಯಾವುದೇ ಷರತ್ತು ಇಲ್ಲದೆ ಬಿಜೆಪಿ ಸೇರ್ಪಡೆಯಾಗಲು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಆದ್ರೆ, ಪಕ್ಷ ಪುತ್ತಿಲ ಅವರಿಗೆ ಯಾವ ಹುದ್ದೆ ನೀಡುತ್ತದೆ ಎನ್ನುವುದೇ ಕುತೂಹಲ ಮೂಡಿಸಿದೆ. ಜಿಲ್ಲೆಯ ಏಳು ಮಂಡಲಗಳ ಪೈಕಿ ಬಾಕಿ ಇರುವ ಪುತ್ತೂರು ಮಂಡಲ ಅಧ್ಯಕ್ಷರನ್ನಾಗಿ ಮಾಡುವ ಸಾಧ್ಯತೆಗಳಿವೆ.

ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಕೆಲ ನಾಯಕರ ನಡೆಗೆ ಅಸಮಾಧಾನಗೊಂಡಿದ್ದ ಪುತ್ತಿಲ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರಿನಿಂದ ಪಕ್ಷೇತರವಾಗಿ ಸ್ಪರ್ಧಿಸಿ ಬಿಜೆಪಿ ಸೋಲಿಗೆ ಕಾರಣರಾಗಿದ್ದರು. ಇದೀಗ ಲೋಕಸಭಾ ಚುನಾವಣೆಯಲ್ಲೂ ಸಹ ದಕ್ಷಿಣ ಕನ್ನಡ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದರು. ಆದ್ರೆ, ಇದೀಗ ನಳಿನ್ ಕುಮಾರ್ ಕಟೀಲ್ ಬದಲಿಗೆ ಕ್ಯಾ‌.ಬ್ರಿಜೇಶ್ ಚೌಟಾಗೆ ಬಿಜೆಪಿ ಟಿಕೆಟ್ ಸಿಕ್ಕಿದ್ದರಿಂದ ಪುತ್ತಿಲ ಸೈಲೆಂಟ್ ಆಗಿದ್ದರು. ಅಲ್ಲದೇ ಕ್ಯಾ‌.ಬ್ರಿಜೇಶ್ ಚೌಟಾ ಸೇರಿದಂತೆ ಕೆಲ ಕರಾವಳಿ ಭಾಗದ ಬಿಜೆಪಿ ನಾಯಕರು ಅರುಣ್ ಪುತ್ತಿಲ ಅವರನ್ನು ಕರೆಯಿಸಿ ಮಾತುಕತೆ ನಡೆಸಿ ಮನವೊಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:21 pm, Thu, 14 March 24

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ