ಲೋಕಸಭೆ ಚುನಾವಣೆ ಮುಗಿದ ಆರೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ; ತಯಾರಾಗಿ ಎಂದು ಕಾರ್ಯಕರ್ತರಿಗೆ ನಳಿನ್ ಸೂಚನೆ

ಲೋಕಸಭಾ ಚುನಾವಣೆಗೆ(Lok Sabha election) ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣೆ ತಯಾರಿ ಬಗ್ಗೆ ಮಂಗಳೂರು ಬಿಜೆಪಿ(BJP) ಚುನಾವಣಾ ಕಚೇರಿಯಲ್ಲಿ ಇಂದು(ಮಾ.17) ಸಂಸದ ನಳಿನ್​ ಕುಮಾರ್​ ಕಟೀಲ್​ (Nalin Kumar Kateel) ಪದಾಧಿಕಾರಿಗಳ ಸಭೆ ನಡೆಸಿದ್ದಾರೆ.

ಲೋಕಸಭೆ ಚುನಾವಣೆ ಮುಗಿದ ಆರೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ; ತಯಾರಾಗಿ ಎಂದು ಕಾರ್ಯಕರ್ತರಿಗೆ ನಳಿನ್ ಸೂಚನೆ
ನಳಿನ್​ ಕುಮಾರ್​ ಕಟೀಲ್​​
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 17, 2024 | 10:15 PM

ದಕ್ಷಿಣ ಕನ್ನಡ, ಮಾ.17: ಲೋಕಸಭಾ ಚುನಾವಣೆಗೆ(Lok Sabha election) ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣೆ ತಯಾರಿ ಬಗ್ಗೆ ಮಂಗಳೂರು ಬಿಜೆಪಿ(BJP) ಚುನಾವಣಾ ಕಚೇರಿಯಲ್ಲಿ ಇಂದು(ಮಾ.17) ಸಂಸದ ನಳಿನ್​ ಕುಮಾರ್​ ಕಟೀಲ್​ (Nalin Kumar Kateel) ಪದಾಧಿಕಾರಿಗಳ ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ‘ಹಿಂದೆಂದಿಗಿಂತ ಹೆಚ್ಚಿನ ಅಂತರದಲ್ಲಿ ಬ್ರಿಜೇಶ್​ ಚೌಟರನ್ನು ಗೆಲ್ಲಿಸುತ್ತೇವೆ ಎಂದು ಹೇಳಿದರು.

ವಿಧಾನಸಭೆ ಚುನಾವಣೆಗೆ ತಯಾರಾಗಿ ಎಂದು ಕಾರ್ಯಕರ್ತರಿಗೆ ಕಟೀಲ್ ಸೂಚನೆ

ಲೋಕಸಭಾ ಚುನಾವಣೆ ಮುಗಿದ ಮೇಲೆ ‘ಮೇ’ ನಲ್ಲಿ ವಿಧಾನಸಭಾ ಚುನಾವಣೆ ಬರುತ್ತದೆ ತಯರಾಗಿ ಎಂದು ಪದಾಧಿಕಾರಿಗಳ ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕರ್ತರಿಗೆ ಸೂಚನೆ‌ ನೀಡಿದ್ದಾರೆ. ಬಳಿಕ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಟೀಲ್, ‘ಲೋಕಸಭೆ ಚುನಾವಣೆ ಮುಗಿದ ಆರು ತಿಂಗಳಲ್ಲಿ ವಿಧಾನಸಭೆ ಚುನಾವಣೆ ಬರುತ್ತದೆ. ಈ ಬಗ್ಗೆ ನಮಗೆ ಅತ್ಯಂತ ಸ್ಪಷ್ಟ ವಿಶ್ವಾಸವಿದೆ ಎಂದಿದ್ದಾರೆ.

ಇದನ್ನೂ ಓದಿ:​2024ರ ಲೋಕಸಭಾ ಚುನಾವಣೆ ಧರ್ಮ ಯುದ್ಧ ಇದ್ದಂತೆ; ಡಾ.ಮಂಜುನಾಥ್​

ಇನ್ನು ಇದೇ ವೇಳೆ ಶಿವಮೊಗ್ಗದಿಂದ ಕೆ.ಎಸ್​​.ಈಶ್ವರಪ್ಪ ಸ್ವತಂತ್ರ ಸ್ಪರ್ಧೆ ವಿಚಾರ , ‘ಈಶ್ವರಪ್ಪ ಜೊತೆ ಮಾತುಕತೆ ಮಾಡುತ್ತಿದ್ದು, ಎಲ್ಲವೂ ಸರಿಹೋಗುತ್ತದೆ. ಜಿಲ್ಲೆಯಲ್ಲಿ ಒಂದು ರಾಜಕೀಯ ಪಾರ್ಟಿಗಳಲ್ಲಿ ಇರುವ ಸಮಸ್ಯೆ ಇದೆ. ವಿಧಾನಸಭಾ ಕ್ಷೇತ್ರದಲ್ಲಿ ಹತ್ತಕ್ಕೂ ಹೆಚ್ಚು ಸಮರ್ಥ ನಾಯಕರಿದ್ದಾರೆ. ಆದ್ದರಿಂದ ನಮ್ಮಲ್ಲಿ ನಾಯಕತ್ವದ ಗೊಂದಲ ಇದೆ. ಭಾರತಮಾತೆ ಹಾಗೂ ಮೋದಿಗಾಗಿ ಈ ಗೊಂದಲವೆಲ್ಲವನ್ನು ಬದಿಗಿಟ್ಟು ಕೆಲಸ ಮಾಡುತ್ತಾರೆ. ನನಗೆ ಕೇರಳದ ಚುನಾವಣೆ ಕೂಡ ನೋಡಿಕೊಳ್ಳಿ ಎಂದು ಹೇಳಿದ್ದಾರೆ. ಆದರೆ, ನನ್ನ ಕ್ಷೇತ್ರಕ್ಕೆ ನಾನು ಹೆಚ್ಚು ಸಮಯ ನೀಡುತ್ತೇನೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ