AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: ಉರುಳು ಸೇವೆ ಮಾಡಿ ಹರಕೆ ಸಲ್ಲಿಸಿದ ಶಾಸಕ ವೇದವ್ಯಾಸ್ ಕಾಮತ್

ಅಯೋಧ್ಯೆ ಶ್ರೀರಾಮ ಮಂದಿರ ಇಂದು ಲೋಕಾರ್ಪಣೆಗೊಂಡಿದ್ದು, ಕೋಟ್ಯಂತರ ಹಿಂದೂಗಳ ಐದು ಶತಮಾನಗಳ ಕನಸು ಈಡೇರಿದೆ. ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ಮಂಗಳೂರಿನಲ್ಲೂ ಪೂಜೆಗಳು ನೆರವೇರಿಲಾಗಿದೆ. ಆದರೆ, ಅಯೋಧ್ಯೆ ರಾಮ ಮಂದಿರ ನಿರ್ಮಾಣ ವಿಚಾರವಾಗಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಅವರು ಉರುಳು ಸೇವೆ ಮಾಡುವ ಹರಕೆ ಹೊತ್ತುಕೊಂಡಿದ್ದರು. ಆ ಹರಕೆಯನ್ನು ಇಂದು ಸಲ್ಲಿಸಿದ್ದಾರೆ.

TV9 Web
| Updated By: Rakesh Nayak Manchi|

Updated on:Jan 22, 2024 | 6:45 PM

Share

ಮಂಗಳೂರು, ಜ.22: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಇಂದು ಅಯೋಧ್ಯೆಯ ರಾಮಮಂದಿರದ (Ayodhya Ram Mandir) ಉದ್ಘಾಟನೆ, ಮಹಾಮಸ್ತಕಾಭಿಷೇಕ ಕಾರ್ಯಕ್ರಮದ ನೇರಪ್ರಸಾರ, ವಿಶೇಷ ಪೂಜೆ, ಭಜನೆ ಕಾರ್ಯಕ್ರಮಗಳು ನಡೆದವು. ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಡಿ.ವೇದವ್ಯಾಸ ಕಾಮತ್ (D.Vedavyas Kamath) ಅವರು ಬಜಿಲಕೇರಿಯ ಮುಖ್ಯಪ್ರಾಣ ದೇವಸ್ಥಾನದಲ್ಲಿ ಉರುಳು ಸೇವೆ ಮಾಡಿ ಹರಕೆ ಸಲ್ಲಿಸಿದರು.

ನಂತರ ಮಾತನಾಡಿದ ಅವರು, ರಾಮಜನ್ಮಭೂಮಿ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ತೀರ್ಪಿನ ಕೆಲವು ದಿನಗಳ ಮೊದಲು, ನಾನು ಈ ಸೆವೆಯನ್ನು ಮಾಡಲು ಪ್ರತಿಜ್ಞೆ ಮಾಡಿದ್ದೆ. ಈ ಹರಕೆಯನ್ನು ಇಂದು ಬೆಳಗ್ಗೆ 8.30ಕ್ಕೆ ಸಲ್ಲಿಸಿದ್ದೇನೆ ಎಂದರು. ಹಿಂದಿನ ಅವಧಿಯಲ್ಲಿ ಶಂಕುಸ್ಥಾಪನೆ ಮಾಡುವಾಗ ನಾನು ಶಾಸಕನಾಗಿದ್ದೆ. ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಎರಡನೇ ಬಾರಿಗೆ ಶಾಸಕನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: ಗದಗದ ಮಸೀದಿಯಲ್ಲಿ ಪೂಜೆ, ಹೋಮ

ವಿಶ್ವ ಹಿಂದೂ ಪರಿಷತ್ ದಕ್ಷಿಣ ಕರ್ನಾಟಕ ಪ್ರಾಂತದ ಜಂಟಿ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಮಾತನಾಡಿ, ರಾಮಜನ್ಮಭೂಮಿಯನ್ನು ಹಿಂಪಡೆಯಲು 500 ವರ್ಷಗಳ ಕಾಲ ನಡೆದ ಹೋರಾಟವನ್ನು ಬಾಲರಾಮನ ಪ್ರತಿಷ್ಠಾಪನೆಯು ಮುಕ್ತಾಯಗೊಳಿಸುತ್ತದೆ. ಇದು ಭಾರತದಾದ್ಯಂತ ದೀಪಾವಳಿ ಹಬ್ಬದ ವಾತಾವರಣ ನಿರ್ಮಾಣ ಮಾಡಿದೆ. ರಾಮ ಮಂದಿರವು ಜಾತಿ ಮತ್ತು ಧರ್ಮದ ಭಿನ್ನಾಭಿಪ್ರಾಯಗಳನ್ನು ನಿವಾರಿಸುತ್ತದೆ ಮತ್ತು ರಾಮರಾಜ್ಯದ ರಚನೆಗೆ ದಾರಿ ಮಾಡಿಕೊಡುತ್ತದೆ ಎಂದರು.

ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ರಾಜ್ಯ ಸರ್ಕಾರದ ನಿರ್ದೇಶನದಂತೆ ಮುಜರಾಯಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜೆ ನಡೆಯಿತು. ಇದಲ್ಲದೆ, ಭಜನಾ ಮಂದಿರಗಳು ಮತ್ತು ಸಣ್ಣ ದೇವಾಲಯಗಳಲ್ಲಿಯೂ ಪೂಜೆಗಳನ್ನು ನಡೆಸಲಾಗಿದೆ.

ಅನೇಕ ದೇವಾಲಯಗಳಲ್ಲಿ ಎಲ್‌ಇಡಿ ಪರದೆಗಳನ್ನು ಹಾಕಿ ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆಯ ಕ್ಷಣಗಳನ್ನು ವೀಕ್ಷಿಸಲು ಅನುವುಮಾಡಿಕೊಡಲಾಗಿತ್ತು. ದೇವಾಲಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಜನರು ಬಾಲರಾಮನ ಪ್ರಣಾಪ್ರತಿಷ್ಠಾಪನೆಯನ್ನು ವೀಕ್ಷಿಸಿದರು. ಮಂಗಳೂರಿನ ಕಾರ್ ಸ್ಟ್ರೀಟ್ ಪ್ರದೇಶದಲ್ಲಿ ಬಸ್ ಹಾಗೂ ವಾಹನಗಳಲ್ಲಿ ಸಂಚರಿಸುವವರಿಗೆ ಸಿಹಿ ವಿತರಿಸಲಾಯಿತು.

ಬೀದಿಗಳಲ್ಲಿ ಎಲ್​ಇಡಿ ಪರದೆಗಳನ್ನು ಹಾಕಿ ರಾಮಮಂದಿರ ಉದ್ಘಾಟನೆಯ ನೇರ ಪ್ರದರ್ಶನ ಮಾಡಲಾಗಿತು. ವಿಟಿ ರಸ್ತೆಯಲ್ಲಿರುವ ಶ್ರೀ ವಿತೋಭಾ ರುಕ್ಮಯಿ ದೇವಸ್ಥಾನದ ವತಿಯಿಂದ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿತ್ತು. ದೇವಾಲಯಕ್ಕೆ ನೀಡುವ ಭಕ್ತರಿಗೆ ಮಾತ್ರವಲ್ಲದೆ ವಾಹನ ಸವಾರರಿಗೆ ಮತ್ತು ಪಾದಾಚಾರಿಗಳಿಗೆ ಸಿಹಿ ತಿಂಡಿಗಳನ್ನು ವಿತರಿಸಲಾಯಿತು. ಮರೋಳಿ ಸೂರ್ಯನಾರಾಯಣ ದೇವಸ್ಥಾನದಲ್ಲಿ ಶ್ರೀರಾಮ ತಾರಕ ಹವನ ನಡೆಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:36 pm, Mon, 22 January 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!