AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bajrang Dal: ಕರಾವಳಿಯಲ್ಲಿ ಶಾಶ್ವತ ಎನ್​ಐಎ ಕಚೇರಿ ಸ್ಥಾಪಿಸುವಂತೆ ಭಜರಂಗದಳ ಆಗ್ರಹ

ಇತ್ತೀಚಿನ ಕೆಲವು ವಿದ್ಯಮಾನಗಳನ್ನು ಪ್ರಸ್ತಾಪಿಸಿರುವ ಭಜರಂಗದಳ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

Bajrang Dal: ಕರಾವಳಿಯಲ್ಲಿ ಶಾಶ್ವತ ಎನ್​ಐಎ ಕಚೇರಿ ಸ್ಥಾಪಿಸುವಂತೆ ಭಜರಂಗದಳ ಆಗ್ರಹ
ಸಾಂಕೇತಿಕ ಚಿತ್ರ
TV9 Web
| Updated By: guruganesh bhat|

Updated on:Aug 06, 2021 | 7:54 PM

Share

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಶಾಶ್ವತ ಎನ್‌ಐಎ ಕಚೇರಿಯನ್ನು ಸ್ಥಾ‌ಪಿಸುವಂತೆ ಕೋರಿ ಬಜರಂಗದಳ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಬಿ.ಎಂ.ಇದಿನಬ್ಬ ಮೊಮ್ಮಗನನ್ನು ಎನ್ಐಎ (NIA) ವಶಕ್ಕೆ ಪಡೆದ ವಿಚಾರವನ್ನು ಪ್ರಸ್ತಾಪಿಸಿರುವ ಭಜರಂಗದಳ, ಕೇಂದ್ರ ಸರ್ಕಾರದ ಬಳಿ ಶಾಶ್ವತ ಎನ್ಐಎ ಕಚೇರಿ ಸ್ಥಾಪಿಸುವಂತೆ ಆಗ್ರಹಿಸಿದೆ.

ಭಜರಂಗದಳ ಉಲ್ಲೇಖಿಸಿದ ಪ್ರಕರಣವೇನು? ಮಾಜಿ ಶಾಸಕ ಬಿ.ಎಂ.ಇದಿನಬ್ಬ ಮಗನ ಮನೆ ಮೇಲೆ ಬೆಂಗಳೂರು ಎನ್ಐಎ(NIA) ತಂಡ ದಾಳಿ ನಡೆಸಿದೆ. ಮಂಗಳೂರಿನ ಉಳ್ಳಾಲದಲ್ಲಿರುವ ಮನೆ ಮೇಲೆ ಎನ್ಐಎ ದಾಳಿ ನಡೆಸಿದೆ. ಮಾಜಿ ಶಾಸಕ ಬಿ.ಎಂ.ಇದಿನಬ್ಬ ಮಗ ಬಿ.ಎಂ.ಬಾಷಾನಿಗೆ ಉಗ್ರರ ಜೊತೆ ನಂಟಿದೆ ಎಂಬ ಬೆಂಗಳೂರಿನಿಂದ ಬಂದ ಎನ್ಐಎ ಅಧಿಕಾರಿಗಳ ತಂಡ ಉಳ್ಳಾಲದಲ್ಲಿರುವ ಮನೆ ಮೇಲೆ ದಾಳಿ ನಡೆಸಿದೆ

ಇದಿನಬ್ಬ ಪುತ್ರ ಇಸ್ಮಾಯಿಲ್ ಬಾಷಾರ ಪುತ್ರಿಯ ಮಗಳು ಅಜ್ಮಲ್ ಕುಟುಂಬ ಮೂರು ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿತ್ತು. ವರ್ಷಗಳ ಹಿಂದೆ ಗಂಡ ಸಿಯಾಝ್ ಉನ್ನತ ಶಿಕ್ಷಣಕ್ಕಾಗಿ ಶ್ರೀಲಂಕಾಕ್ಕೆ ಹೋಗ್ತಿರೋದಾಗಿ ಹೇಳಿ ಹೋದವರು ಇಂದಿನವರೆಗೂ ಸಂಪರ್ಕಕ್ಕೆ ಸಿಕ್ಕಿಲ್ಲ. ಶ್ರೀಲಂಕಾದಿಂದ ಮಸ್ಕತ್ ಹಾಗೂ ಕತಾರ್ ಗೆ ತೆರಳಿ ಅಲ್ಲಿಂದ ಸಿರಿಯಾಕ್ಕೆ ಹೋಗಿ ಐಸಿಸ್ ಸೇರಿದ್ದಾರೆಂದು ಮಾಹಿತಿ‌ ಇತ್ತು. ವೈದ್ಯರಾಗಿರುವ ಸಿಯಾಝ್‍ನ ಸಹೋದರ ಕೂಡ ಹೆಂಡತಿ ಮತ್ತು ಮಗುವಿನೊಂದಿಗೆ ತೆರಳಿದ್ದ. ಈ ಬಗ್ಗೆ ಕೇರಳ ಆಂತರಿಕ ಭದ್ರತಾ ಹಾಗೂ ಗುಪ್ತಚರ ಇಲಾಖೆ ಹಾಗೂ ರಾಷ್ಟ್ರೀಯ ತನಿಖಾ ದಳ ತನಿಖೆ ಆರಂಭಿಸಿತ್ತು. ಅದೇ ತನಿಖೆಯ ಭಾಗವಾಗಿ ಅಜ್ಮಲ್ ಅಜ್ಜ ಇಸ್ಮಾಯಿಲ್ ಭಾಷಾ ಮನೆಗೆ ದಾಳಿ ನಡೆದಿರಬಹುದು ಎನ್ನಲಾಗುತ್ತಿದೆ. ಸಾಹಿತಿಯೂ ಆಗಿದ್ದ ದಿ.ಇದಿನಬ್ಬ ಮೂರು ಬಾರಿ ಕಾಂಗ್ರೆಸ್ ನಿಂದ ಉಳ್ಳಾಲ ಶಾಸಕರಾಗಿ ಆಯ್ಕೆಯಾಗಿದ್ದರು.

ಇದನ್ನೂ ಓದಿ: 

ಭಟ್ಕಳದಲ್ಲಿ ಎನ್​ಐಎ ದಾಳಿ: ಐಸಿಸ್ ನಂಟು ಶಂಕೆಯ ಮೇಲೆ ಮೂವರು ವಶಕ್ಕೆ 

ಸಿಎಂ ಬಸವರಾಜ ಬೊಮ್ಮಾಯಿ – ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಭೇಟಿ; ನದಿ ನೀರು ಹಂಚಿಕೆ ಕುರಿತು ಮಾತುಕತೆ

(Bajrang Dal demands the establishment of a permanent NIA office along the coastal area)

Published On - 6:05 pm, Fri, 6 August 21

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!