ಮಂಗಳೂರು: ಬಜರಂಗದಳ ಮುಖಂಡ ಮತ್ತು ತಂಡದಿಂದ ಗೂಂಡಾಗಿರಿ

ಜಾಗದ ವಿಚಾರವಾಗಿ ಬಜರಂಗದಳ ಮುಖಂಡ ಮತ್ತು ತಂಡ ಅಂಗಡಿಗೆ ನುಗ್ಗಿ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಜಿನ ಉಪ್ಪಿನಂಗಡಿ ಪೇಟೆಯಲ್ಲಿ ನಡೆದಿದೆ. ಅಂಗಡಿಯಿಂದ ಹೊರಗೆಳೆದು ನಡುರಸ್ತೆಯಲ್ಲಿ ನಾಲ್ವರ ಮೇಲೆ ಹಲ್ಲೆಗೈದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಂಗಳೂರು: ಬಜರಂಗದಳ ಮುಖಂಡ ಮತ್ತು ತಂಡದಿಂದ ಗೂಂಡಾಗಿರಿ
ಬಜರಂಗದಳ ಮುಖಂಡ ಭರತ್ ಕುಮ್ಡೇಲು ಮತ್ತು ತಂಡದಿಂದ ಹಲ್ಲೆ
Edited By:

Updated on: Oct 05, 2023 | 12:18 PM

ಮಂಗಳೂರು, ಅ.5: ಜಾಗದ ವಿಚಾರವಾಗಿ ಬಜರಂಗದಳ (Bajrang Dal) ಮುಖಂಡ ಮತ್ತು ತಂಡ ಅಂಗಡಿಗೆ ನುಗ್ಗಿ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಜಿನ ಉಪ್ಪಿನಂಗಡಿ ಪೇಟೆಯಲ್ಲಿ ನಡೆದಿದೆ. ಅಂಗಡಿಯಿಂದ ಹೊರಗೆಳೆದು ನಡುರಸ್ತೆಯಲ್ಲಿ ನಾಲ್ವರ ಮೇಲೆ ಹಲ್ಲೆಗೈದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬಜರಂಗದಳ ಮುಖಂಡ, ರೌಡಿಶೀಟರ್ ಭರತ್ ಕುಮ್ಡೇಲು, ಬಜರಂಗದಳದ ಜಗಜೀವನ್ ರೈ, ಭವಿಷ್, ಸಂದೀಪ್ ಎಂಬವರು ಅಂಗಡಿಗೆ ನುಗ್ಗಿ ಹರೀಶ ನಾಯ್ಕ, ಸುದರ್ಶನ್ ಕುಮಾರ್, ರಮಾನಂದ ಎಂಬವರನ್ನು ಹೊರಗೆಳೆದು ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ:  ಮಂಗಳೂರು: ವಿಟ್ಲದಲ್ಲಿ ಗ್ರಾನೈಟ್ ಸಾಗಿಸುತ್ತಿದ್ದ ಲಾರಿ ಕಟ್ಟಡಕ್ಕೆ ಡಿಕ್ಕಿ, ಓರ್ವ ಸಾವು, ಮೂವರು ಗಂಭೀರ

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಸ್​ಸಿ ಎಸ್​ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಭರತ್ ಕುಮ್ಡೇಲು ಕಲ್ಲಡ್ಕದ ಬಜರಂಗದಳ ಮುಖಂಡನಾಗಿದ್ದಾನೆ. ಅಲ್ಲದೆ, ಬಂಟ್ವಾಳದಲ್ಲಿ ರೌಡಿ ಶೀಟರ್ ಆಗಿದ್ದು, 2017ರಲ್ಲಿ ಎಸ್​ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಕೊಲೆ ಪ್ರಕರಣದ ಆರೋಪಿಯಾಗಿದ್ದ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:09 pm, Thu, 5 October 23