AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಿಫ್ಟ್ ಕಾರಿನಲ್ಲಿ ನಾಲ್ಕು ಗೋವುಗಳ ಸಾಗಾಟ ತಡೆದ ಬಜರಂಗದಳ; ಕಾರು ಚರಂಡಿಗೆ ಪಲ್ಟಿ, ಖದೀಮರು ಪರಾರಿ

ದಕ್ಷಿಣಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಕಬಕದ ಪದ್ಮಡ್ಕ ಎಂಬಲ್ಲಿ ಕೆಲ ದಂಧೆಕೋರರು ತಡರಾತ್ರಿ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸುತ್ತಿದ್ದರು. ವಿಚಾರ ತಿಳಿಯುತ್ತಿದ್ದಂತೆ ಬಜರಂಗದಳ ಕಾರ್ಯಕರ್ತರು ದಂಧೆಕೋರರನ್ನು ತಡೆದಿದ್ದಾರೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ ಬಿದ್ದು ಜಖಂಗೊಂಡಿದೆ. ಖದೀಮರು ಕಾರು ಬಿಟ್ಟು ಪರಾರಿಯಾಗಿದ್ದಾರೆ.

ಸ್ವಿಫ್ಟ್ ಕಾರಿನಲ್ಲಿ ನಾಲ್ಕು ಗೋವುಗಳ ಸಾಗಾಟ ತಡೆದ ಬಜರಂಗದಳ; ಕಾರು ಚರಂಡಿಗೆ ಪಲ್ಟಿ, ಖದೀಮರು ಪರಾರಿ
ಚರಂಡಿಗೆ ಬಿದ್ದ ಕಾರಿನಲ್ಲಿರುವ ಹಸುಗಳು
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ಆಯೇಷಾ ಬಾನು

Updated on: Mar 25, 2024 | 9:39 AM

ಮಂಗಳೂರು, ಮಾರ್ಚ್​.25: ನಾಲ್ಕು ಗೋವುಗಳನ್ನು ಹಿಂಸಾತ್ಮಕವಾಗಿ ಸ್ವಿಫ್ಟ್ ಕಾರಿನಲ್ಲಿ (Swift Car) ತುಂಬಿ ಕೊಂಡು ಅಕ್ರಮವಾಗಿ ಸಾಗಾಟ ಮಾಡುವಾಗ ಬಜರಂಗದಳ ಕಾರ್ಯಕರ್ತರು (Bajrang Dal Workers) ತಡೆದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ದಕ್ಷಿಣಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಕಬಕದ ಪದ್ಮಡ್ಕ ಎಂಬಲ್ಲಿ ಕೆಲ ದಂಧೆಕೋರರು ತಡರಾತ್ರಿ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸುತ್ತಿದ್ದರು. ವಿಚಾರ ತಿಳಿಯುತ್ತಿದ್ದಂತೆ ಬಜರಂಗದಳ ಕಾರ್ಯಕರ್ತರು ದಂಧೆಕೋರರನ್ನು ತಡೆದಿದ್ದಾರೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ ಬಿದ್ದು ಜಖಂಗೊಂಡಿದೆ. ಖದೀಮರು ಕಾರು ಬಿಟ್ಟು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಪುತ್ತೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋವುಗಳ ಸಹಿತ ಕಾರನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರಕ್ಷಣೆ ಮಾಡಿದ ಗೋವುಗಳಿಗೆ ಬಜರಂಗದಳ ಕಾರ್ಯಕರ್ತರು ನೀರು ಮೇವಿನ ವ್ಯವಸ್ಥೆ ಮಾಡಿದ್ದಾರೆ.

ಬೈಕ್​ಗಳ ಮುಖಾಮುಖಿ ಡಿಕ್ಕಿ, ಇಬ್ಬರು ದುರ್ಮರಣ

ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ರೇವಡಿಕೊಪ್ಪ ಗ್ರಾಮದ ಬಳಿ ಅಪಘಾತ ನಡೆದಿದೆ. ಕೊಳಚಿ ಗ್ರಾಮದ ವೆಂಕನಗೌಡ ಪಾಟೀಲ್ ಮತ್ತು ಲಕ್ಕನಾಯಕನಕೊಪ್ಪ ಗ್ರಾಮದ ಪ್ರಮೋದ್ ಕುಂಬಾರ್ ಉಸಿರು ಚೆಲ್ಲಿದ್ದಾರೆ. ಮತ್ತಿಬ್ಬರು ಸವಾರರು ಗಂಭೀರ ಗಾಯಗೊಂಡಿದ್ದು, ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಇಳಿಕೆ! ಕಾರಣ ಇಲ್ಲಿದೆ

ಕೆಐಎಡಿಬಿ ವಿರುದ್ಧ ರೈತರ ಆಕ್ರೋಶ

ಕೃಷಿ ಭೂಮಿ ಸ್ವಾಧೀನಕ್ಕೆ ಮುಂದಾದ ಕೆಐಎಡಿಬಿ ವಿರುದ್ಧ ರೈತರು ಪ್ರತಿಭಟನೆ ನಡೆದಿದ್ರು. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹಂದೇನಹಳ್ಳಿ ಸುತ್ತಮುತ್ತಲ ರೈತ ಆಕ್ರೋಶ ವ್ಯಕ್ತಪಡಿಸಿದ್ರು. ಲೋಕಸಭಾ ಚುನಾವಣೆ ಘೋಷಣೆ ದಿನವೇ 6 ಹಳ್ಳಿಗಳ 600 ಎಕರೆ ಭೂಸ್ವಾಧೀನಕ್ಕೆ ಪ್ರಾಥಮಿಕ ಹಂತದ ನೋಟಿಫಿಕೇಶನ್ ನೀಡಲಾಗಿತ್ತು. ನೋಟಿಸ್​ನಲ್ಲಿ ಫಲವತ್ತಾದ ಭೂಮಿಯನ್ನ ಬರಡು ಭೂಮಿ ಎಂದು ಉಲ್ಲೇಖ ಮಾಡಲಾಗಿತ್ತು.

ಅಪಾರ್ಟ್​ಮೆಂಟ್​ಗೆ ನುಗ್ಗಿ ವಿದ್ಯಾರ್ಥಿ ಮೇಲೆ ಹಲ್ಲೆ

ಅಪಾರ್ಟ್​ಮೆಂಟ್​ಗೆ ನುಗ್ಗಿದ ದುಷ್ಕರ್ಮಿಗಳು ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿರುವ ಘಟನೆ, ಉಡುಪಿ ತಾಲೂಕಿನ ಮಣಿಪಾಲದ ಸರಳಬೆಟ್ಟುವಿನಲ್ಲಿ ನಡೆದಿದೆ. ಮಣಿಪಾಲದ ಎಂಐಟಿಯ ಬಿ.ಟೆಕ್ ವಿದ್ಯಾರ್ಥಿ ಅಭಿಷೇಕ್ ಮೇಲೆ ಹಲ್ಲೆ ಮಾಡಲಾಗಿದೆ. ಕಾರು, ಬೈಕ್​ನಿಂದ ಬಂದಿದ್ದ 5-6 ಜನ ದುಷ್ಕರ್ಮಿಗಳ ತಂಡ ಹಲ್ಲೆ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ