AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru: ಮಂಗಳೂರು ಪಬ್​ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರ ಅಡ್ಡಿ

Bajrang Dal: ಏಕಾಏಕಿ ಪಬ್​ಗೆ ನುಗ್ಗಿದ ಬಜರಂಗದಳದ ಕಾರ್ಯಕರ್ತರು ಒತ್ತಾಯದಿಂದ ಪಾರ್ಟಿ ನಿಲ್ಲಿಸಿದ್ದರಲ್ಲದೆ, ಯುವಕ-ಯುವತಿಯನ್ನು ಅಶ್ಲೀಲವಾಗಿ ನಿಂದಿಸಿದರು ಎಂದು ಹೇಳಲಾಗಿದೆ.

Mangaluru: ಮಂಗಳೂರು ಪಬ್​ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರ ಅಡ್ಡಿ
ಮಂಗಳೂರು ಪಬ್​ಗೆ ಪೊಲೀಸರು ಧಾವಿಸಿದರು.
TV9 Web
| Edited By: |

Updated on:Jul 26, 2022 | 9:14 AM

Share

ಮಂಗಳೂರು: ಪಬ್​ ಒಂದರಲ್ಲಿ ಸೋಮವಾರ ರಾತ್ರಿ ಪಾರ್ಟಿ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿಗಳಿಗೆ ಬಜರಂಗದಳ ಕಾರ್ಯಕರ್ತರು (Bajrang Dal workers) ತಡೆಯೊಡ್ಡಿ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ. ಮಂಗಳೂರಿನ ‘ರಿಸೈಕಲ್-ದಿ ಲಾಂಜ್ ಪಬ್’ನಲ್ಲಿ ನಗರದ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಂದ ಪಾರ್ಟಿ ಮಾಡುತ್ತಿದ್ದರು. ಈ ವೇಳೆ ಯುವಕ-ಯುವತಿಯರು ಕುಡಿದು ಕುಣಿಯುತ್ತಿದ್ದರು ಎಂದು ಹೇಳಲಾಗಿದೆ. ಏಕಾಏಕಿ ಪಬ್​ಗೆ ನುಗ್ಗಿದ ಬಲಪಂಥೀಯ ಯುವಕರು ಒತ್ತಾಯದಿಂದ ಪಾರ್ಟಿ ನಿಲ್ಲಿಸಿದ್ದರಲ್ಲದೆ, ಯುವಕ-ಯುವತಿಯನ್ನು ಅಶ್ಲೀಲವಾಗಿ ನಿಂದಿಸಿದರು ಎಂದು ಹೇಳಲಾಗಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಗುಂಪು ಚದುರಿಸಿ ಪರಿಸ್ಥಿತಿ ನಿಯಂತ್ರಿಸಿದರು. ಬಜರಂಗದಳ ಕಾರ್ಯಕರ್ತರನ್ನು ಅಲ್ಲಿಂದ ಹೊರಗೆ ಕಳಿಸಿದರು.

‘ಕಾರ್ಯಕರ್ತರು ಪಬ್ ಒಳಗೆ ಹೋಗಿರಲಿಲ್ಲ’

ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಮಂಗಳವಾರ (ಜುಲೈ 26) ಮುಂಜಾನೆ ಪಬ್​ಗೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಬಜರಂಗದಳ ಕಾರ್ಯಕರ್ತರು ಪಬ್ ಒಳಗೆ ಹೋಗಿಲ್ಲ ಎಂದು ಪಬ್​ನ ಬೌನ್ಸರ್ ಹೇಳಿದ್ದಾರೆ’ ಎಂದರು.

ಬಲ್ಮಠದ ರಿ-ಸೈಕಲ್ ರೆಸ್ಟೋರೆಂಟ್ ಕಮ್ ಪಬ್ ಬಹಳಷ್ಟು ವರ್ಷಗಳಿಂದ ಇದೆ. ನಿನ್ನೆ ರಾತ್ರಿ 9 ಗಂಟೆಗೆ ಸಂಘಟನೆಯೊಂದಕ್ಕೆ ಸೇರಿದ ಐದಾರು ಹುಡುಗರು ಬಂದು, ಇಲ್ಲಿನ ಬೌನ್ಸರ್ ದಿನೇಶ್​ಗೆ ಮೈನರ್ ಹುಡುಗ-ಹುಡುಗಿ ಇದ್ದಾರೆ ಎಂದು ದೂರಿದರು. ಮ್ಯಾನೇಜರ್ ಪರಿಶೀಲಿಸಿದ ನಂತರ ಸ್ಥಳೀಯ ಕಾಲೇಜಿನ ಕೆಲ ವಿದ್ಯಾರ್ಥಿಗಳು ಇದ್ದುದು ಕಂಡು ಬಂತು. ಮ್ಯಾನೇಜರ್ ಸೂಚನೆ ಮೇರೆಗೆ ಅವರು ಹೊರಗೆ ಹೋಗಿದ್ದಾರೆ. ಬೌನ್ಸರ್ ಹೇಳಿದ ಪ್ರಕಾರ ಸಂಘಟನೆ ಕಾರ್ಯಕರ್ತರು ಪಬ್ ಒಳಗೆ ಹೋಗಿಲ್ಲ. ಹೊರ ಭಾಗದಲ್ಲೇ ಮಾತನಾಡಿ ವಾಪಸ್ ಹೋಗಿದ್ದಾರೆ. ಸದ್ಯ ಸಿಸಿಟಿವಿ ವೆರಿಫೈ ಮಾಡಿ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ವಿವರಿಸಿದರು.

ಪ್ರಕರಣ ಸಂಬಂಧ ಪಬ್​ನ ಮ್ಯಾನೇಜರ್ ಮತ್ತು ಬೌನ್ಸರ್ ಹೇಳಿಕೆ ಪಡೆಯಲಾಗಿದೆ. ಹೊರಗಿನ ವ್ಯಕ್ತಿಗಳು ಬಂದು ಈ ರೀತಿ ಮಾಡಲು ಅವಕಾಶ ಇಲ್ಲ. ಐಡಿ, ಲೈಸೆನ್ಸ್ ಕೇಳಲು ಬೇರೆಯವರಿಗೆ ಅವಕಾಶ ಇಲ್ಲ. ಈ ಬಗ್ಗೆ ಪರಾಮರ್ಶೆ ಮಾಡಿ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಮೊನ್ನೆ ನಡೆದ ಕಾಲೇಜಿನ ವಿದ್ಯಾರ್ಥಿಗಳ ಅಶ್ಲೀಲ ವಿಡಿಯೋ ಪ್ರಕರಣದ ಬೆನ್ನಿಗೇ ಮತ್ತೊಂದು ಪ್ರಕರಣ ವರದಿಯಾಗಿದೆ. ಆದರೆ ಆ ಪ್ರಕರಣದ ವಿದ್ಯಾರ್ಥಿಗಳು ಮತ್ತು ಈ ವಿದ್ಯಾರ್ಥಿಗಳಿಗೆ ಸಂಬಂಧ ಇಲ್ಲ ಎಂದು ಹೇಳಿದರು.

ಈ ಪಬ್​ನ ನಿಯಮಗಳ ಪ್ರಕಾರ 21 ವರ್ಷದ ಮೇಲಿನವರು ಬರಬಹುದು. ಇಲ್ಲಿಗೆ ಅಂತಿಮ ಪದವಿ ವಿದ್ಯಾರ್ಥಿಗಳು ಬಂದಿದ್ದರು. ಈ ಬಗ್ಗೆ ಮಾಹಿತಿ ಕಲೆ ಹಾಕಿ ಕಾನೂನು ಕ್ರಮ ಜರುಗಿಸುವುದಾಗಿ ಹೇಳಿದರು.

ಇಂಗ್ಲಿಷ್​ನಲ್ಲಿ ಸುದ್ದಿ ಓದಲು ಲಿಂಕ್: Bajrang Dal workers raid pub party by students

ನಗರದಲ್ಲಿ ‘ಟ್ರೂತ್ ಅಂಡ್ ಡೇರ್’ ಚಾಲೆಂಜ್​ನಲ್ಲಿ ವಿದ್ಯಾರ್ಥಿಗಳು ಲಿಕ್​ಲಾಕ್ ಮಾಡಿಕೊಂಡಿದ್ದ ವಿಡಿಯೊಗಳು ಬಹಿರಂಗಗೊಂಡು ದೊಡ್ಡ ವಿವಾದವಾಗಿದ್ದ ಬೆನ್ನಿಗೇ ಈ ಪ್ರಕರಣ ಬೆಳಕಿಗೆ ಬಂದಿದೆ. ಜನವರಿ 26, 2009ರಲ್ಲಿಯೂ ಇದೇ ಪಬ್ ಮೇಲೆ ನಡೆದಿದ್ದ ದಾಳಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಶ್ರೀರಾಮಸೇನೆ ಕಾರ್ಯಕರ್ತರು ಪಬ್ ಒಂದರ ಮೇಲೆ ದಾಳಿ ಮಾಡಿ ಕೆಲ ಯುವಕ-ಯುವತಿಯನ್ನು ಥಳಿಸಿದ್ದರು.

Published On - 8:46 am, Tue, 26 July 22

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ