AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಬಪ್ಪನಾಡು ದುರ್ಗಾ ಪರಮೇಶ್ವರಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ..!

ಕರಾವಳಿಯ ಭಾಗದಲ್ಲಿ 800 ವರ್ಷಗಳ ಇತಿಹಾಸವಿರುವ ಪ್ರಸಿದ್ಧ ಮುಲ್ಕಿಯ ಬಪ್ಪನಾಡು ದುರ್ಗಾ ಪರಮೇಶ್ವರಿ ದೇಗುಲ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹಾಕುವಂತೆ ಮುಜರಾಯಿ ಇಲಾಖೆಗೆ ದೇವಸ್ಥಾನದ ಆಡಳಿತ ಮಂಡಳಿ ಮನವಿ ಮಾಡಿದೆ.

ಮಂಗಳೂರು: ಬಪ್ಪನಾಡು ದುರ್ಗಾ ಪರಮೇಶ್ವರಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ..!
ದುರ್ಗಾಪರಮೇಶ್ವರಿ ದೇವಸ್ಥಾನ ಬಪ್ಪನಾಡು
ವಿವೇಕ ಬಿರಾದಾರ
|

Updated on: Apr 09, 2023 | 2:22 PM

Share

ಮಂಗಳೂರು: ರಾಜ್ಯದಲ್ಲಿ ಕಳೆದ ವರ್ಷ ಸಾಕಷ್ಟು ಸದ್ದು ಮಾಡಿದ್ದ, ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಈಗ ಮತ್ತೆ ಶುರುವಾಗಿದೆ. ಯುಗಾದಿ (Yugadi) ಹಬ್ಬದಂದು ಹಲಾಲ್​ ಕಟ್ (Halal Cut) ​-ಜಟ್ಕಾ ಕಟ್​ ಶುರುವಾಗಿತ್ತು. ಈಗ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ (Ban on Muslim Traders) ಪ್ರಾರಂಭವಾಗಿದೆ. ಕರಾವಳಿಯ ಭಾಗದಲ್ಲಿ 800 ವರ್ಷಗಳ ಇತಿಹಾಸವಿರುವ ಪ್ರಸಿದ್ಧ ಮುಲ್ಕಿಯ ಬಪ್ಪನಾಡು ದುರ್ಗಾ ಪರಮೇಶ್ವರಿ ದೇಗುಲ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹಾಕುವಂತೆ ಮುಜರಾಯಿ ಇಲಾಖೆಗೆ ದೇವಸ್ಥಾನದ ಆಡಳಿತ ಮಂಡಳಿ ಮನವಿ ಮಾಡಿದೆ.

ಬೆಂಗಳೂರಿನಲ್ಲಿ 18 ಜಟ್ಕಾ ಕಟ್ ಶಾಪ್ ಓಪನ್

ಈ ಬಾರಿಯ ಯುಗಾದಿ ಹಬ್ಬದಂದು 18 ಜಟ್ಕಾ ಕಟ್ ಅಂಗಡಿಗಳು ಓಪನ್ ಆಗಿದ್ದವು. ಹಲಾಲ್ ಬಾಯ್ಕಾಟ್ ಅಭಿಯಾನದ ಹಿನ್ನೆಲೆ ರಾಜಸ್ಥಾನದ ಅಜ್ಮೇರ್ ನಿಂದ 200, ಬಾಸವನಬಾಗೇವಾಡಿ, ಮಧುಗಿರಿಯಿಂದ 400. ಒಟ್ಟು 600 ಕುರಿ ಮತ್ತು ಮೇಕೆಗಳು ರಾಜಧಾನಿಗೆ ಬಂದಿದ್ದವು. ಕಳೆದ ಬಾರಿ ನಾಲ್ಕು ಜಟ್ಕಾ ಕಟ್ ಶಾಪ್​ಗಳನ್ನು ತೆರೆಯಲಾಗಿತ್ತು. ಈ ಬಾರಿ ಹದಿನೆಂಟು ಅಂಗಡಿಗಳನ್ನು ತೆರೆಯಲಾಗಿದೆ. ಕಮ್ಮನಹಳ್ಳಿ, ಇಟ್ಟಮಡು, ದಾಸರಹಳ್ಳಿ, ಸಂಜಯ್ ನಗರ, ಗೆದ್ದಲಹಳ್ಳಿ, ಯಲಹಂಕ, ಇಂದಿರಾನಗರ, ಟ್ಯಾನರಿ ರಸ್ತೆ, ಹೊರಮಾವು, ಅನ್ನಪೂರ್ಣೇಶ್ವರಿನಗರ ಸೇರಿದಂತೆ 18 ಅಂಗಡಿಗಳನ್ನು ತೆರೆಯಲಾಗಿತ್ತು.

ಇದನ್ನೂ ಓದಿ: ಬಸವೇಶ್ವರರ ನಾಡಿಗೂ ಕಾಲಿಟ್ಟ ಧರ್ಮ ದಂಗಲ್​: ಸಿದ್ದೇಶ್ವರ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ಯತ್ನಾಳ್​ಗೆ ಮನವಿ

ಕಳೆದ ಬಾರಿಯಂತೆ ಈ ಬಾರಿಯು ಮುಸ್ಲಿಂ ವ್ಯಾಪಾರಿಗಳಿಗೆ ಠಕ್ಕರ್ ಕೊಡಲು 12 ಸಾವಿರ ಕೆಜಿ ಜಟ್ಕಾ ಕಟ್ ಮಾಂಸ ಕಟ್ ಮಾಡಲಾಗಿತ್ತು. ಕಳೆದ ಬಾರಿಯಂತೆ ಈ ಬಾರಿಯು ಆನ್ಲೈನ್ ಮತ್ತು ಡೋರ್ ಡೆಲಿವರಿ ವ್ಯವಸ್ಥೆ ಮಾಡಲಾಗಿತ್ತು. ಹಿಂದೂಪರ ಸಂಘಟನೆಗಳು ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಆರಂಭಿಸಿದ್ದವು. 2 ಕೆಜಿ ಮಟನ್, 2 ಕೆಜಿ ಚಿಕನ್, 6 ಮೊಟ್ಟೆ 1999 ರೂ ಕಾಂಬೋ ನೀಡಲಾಗುತ್ತು. ಹಿಂದವೀ ಮೀಟ್ ಮಾರ್ಟ್ 1200 ಸಾವಿರ ಕೆಜಿ ಜಟ್ಕಾ ಕಟ್ ರೆಡಿ ಮಾಡಿತ್ತು. ಗುಡ್ಡೆ ಮಾಂಸ ಕೆಜಿ- 650, ಕೆಜಿ ಮಟನ್- 700, ಚಿಕನ್- 130 ರಿಂದ 140 ರುಪಾಯಿಗೆ ಮಾರಾಟ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ