AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾರ್ಟ್ಮೆಂಟ್​ನಲ್ಲಿ ಕತ್ತುಕೊಯ್ದ ಸ್ಥಿತಿಯಲ್ಲಿ ಬ್ಯಾಂಕ್ ಮ್ಯಾನೇಜರ್​ ಪತ್ತೆ; ಆತ್ಮಹತ್ಯೆ ಶಂಕೆ

ಅಪಾರ್ಟ್ಮೆಂಟ್​ನಲ್ಲಿ ಕತ್ತುಕೊಯ್ದ ಸ್ಥಿತಿಯಲ್ಲಿ ಕರ್ನಾಟಕ ಬ್ಯಾಂಕ್​ನ ಜನರಲ್ ಮ್ಯಾನೇಜರ್(Bank Manager) ಪತ್ತೆಯಾಗಿದ್ದು, ಗಂಭೀರ ಗಾಯಗೊಂಡಿದ್ದ ವಾದಿರಾಜ ಅವರು ಇದೀಗ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ವಾದಿರಾಜ ಕೆ.ಎ(51) ಮೃತ ವ್ಯಕ್ತಿ.

ಅಪಾರ್ಟ್ಮೆಂಟ್​ನಲ್ಲಿ ಕತ್ತುಕೊಯ್ದ ಸ್ಥಿತಿಯಲ್ಲಿ ಬ್ಯಾಂಕ್ ಮ್ಯಾನೇಜರ್​ ಪತ್ತೆ; ಆತ್ಮಹತ್ಯೆ ಶಂಕೆ
ಮೃತ ಬ್ಯಾಂಕ್​ ಮ್ಯಾನೇಜರ್​
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Nov 09, 2023 | 6:19 PM

Share

ದಕ್ಷಿಣ ಕನ್ನಡ, ನ.09: ಮಂಗಳೂರು ನಗರ ಹೊರವಲಯದ ಬೊಂದೇಲ್​ನಲ್ಲಿರುವ ಅಪಾರ್ಟ್ಮೆಂಟ್​ನಲ್ಲಿ ಕತ್ತುಕೊಯ್ದ ಸ್ಥಿತಿಯಲ್ಲಿ ಕರ್ನಾಟಕ ಬ್ಯಾಂಕ್​ನ ಜನರಲ್ ಮ್ಯಾನೇಜರ್(Bank Manager) ಪತ್ತೆಯಾಗಿದ್ದು, ಗಂಭೀರ ಗಾಯಗೊಂಡಿದ್ದ ವಾದಿರಾಜ ಅವರು ಇದೀಗ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ವಾದಿರಾಜ ಕೆ.ಎ(51) ಮೃತ ವ್ಯಕ್ತಿ. ಪತ್ನಿ ಮಕ್ಕಳು ಹೊರಗಡೆ ಹೋಗಿದ್ದಾಗ ಈ ಘಟನೆ ನಡೆದಿದ್ದು, ಆತ್ಮಹತ್ಯೆ ಎಂಬ ಶಂಕೆ ಮೂಡಿದೆ. ಇನ್ನು ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಘಟನೆ ಕುರಿತು ಪ್ರತಿಕ್ರಿಯಿಸಿದ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ‘ ವಾದಿರಾಜ ಆಚಾರ್ಯ ಒಂದು ವರ್ಷದಿಂದ ಇಲ್ಲಿ ಬಾಡಿಗೆ ಮನೆಯಲ್ಲಿದ್ದರು. ಕರ್ನಾಟಕ ಬ್ಯಾಂಕ್​ನಲ್ಲಿ ಚೀಫ್ ಕಂಪ್ಲೇಂಟ್ ಆಫೀಸರ್ ಆಗಿ, ನಾಲ್ಕು ವರ್ಷದಿಂದ ಅಲ್ಲಿ ಕೆಲಸ ಮಾಡುತ್ತಿದ್ದರು. ಇಂದು ವಾದಿರಾಜ ಅವರ ಹೆಂಡತಿ ಮಕ್ಕಳ ಜೊತೆ ಶಾಲೆಯಲ್ಲಿ ಪೋಷಕರ ಸಭೆಗೆ ತೆರಳಿದ್ದರು. ಈ ವೇಳೆ ವಾದಿರಾಜ ಒಬ್ಬರೇ ಮನೆಯಲ್ಲಿದ್ದರು, ಕಾರು ಚಾಲಕ ಮನೆಗೆ ಬಂದು ನೋಡಿದಾಗ ವಾದಿರಾಜ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣ ಅಪಾರ್ಟ್ಮೆಂಟ್​ನಲ್ಲಿದ್ದವರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ:ಹುಬ್ಬಳ್ಳಿ: ನಿಖಿಲ್​ ಸಾವಿಗೆ ಕೇಶ್ವಾಪುರ ಠಾಣೆ ಪೊಲೀಸರು ಕಾರಣ; ಕ್ರಮಕೈಗೊಳ್ಳದಿದ್ದರೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕುಟುಂಬಸ್ಥರ ಎಚ್ಚರಿಕೆ

ಬಳಿಕ ಹೆಚ್ಚಿನ ಗಾಯವಾಗಿದ್ದರಿಂದ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ವಾದಿರಾಜ ಮನೆಯವರು ನೀಡುವ ದೂರಿನ ಮೇಲೆ ಎಫ್.ಐ.ಆರ್ ದಾಖಲು ಮಾಡುತ್ತೇವೆ. ಮರಣೋತ್ತರ ಪರೀಕ್ಷೆ ನಡೆಯುವುದು ಇನ್ನೂ ಬಾಕಿಯಿದೆ. ಆ ಬಳಿಕ ಯಾವ ಕಾರಣಕ್ಕೆ ಈ ಸಾವಾಗಿದೆ ಎಂದು ಹೇಳಬಹುದು. ಚಾಕುವಿನಿಂದ ಹೊಟ್ಟೆ ಮತ್ತು ಕುತ್ತಿಗೆ ಮೇಲೆ ಕೊಯ್ದಿರುವ ಗಾಯವಿದೆ. ದೂರಿನ ಆಧಾರದಲ್ಲಿ ತನಿಖೆ ಮಾಡುತ್ತೇವೆ. ಈಗಾಗಲೇ ಸಿಸಿಟಿವಿ ಫೂಟೇಜ್ ಎಲ್ಲಾ ಚೆಕ್ ಮಾಡಿದ್ದೇವೆ. ಆ ಸಂದರ್ಭ ಫೋನ್​ನಲ್ಲಿ ಯಾರೆಲ್ಲಾ ಮಾತನಾಡಿದ್ದಾರೆ ಎಂದು ತನಿಖೆ ಮಾಡುತ್ತಿದ್ದೇವೆ ಎಂದು ಹೇಳಿದರು.

ವಿದ್ಯುತ್ ತಂತಿ ತಗುಲಿ ಲೈನ್​ಮ್ಯಾನ್ ಸಾವು

ಕೊಡಗು: ವಿರಾಜಪೇಟೆ ತಾಲೂಕಿನ ಹೆಗ್ಗಳ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಲೈನ್​ಮ್ಯಾನ್ ಸಾವನ್ನಪ್ಪಿದ ಘಟನೆ ನಡೆದಿದೆ.​ ಅನಿಲ್, ಮೃತ ವ್ಯಕ್ತಿ. ಇತ ವಿದ್ಯುತ್ ಕಂಬ ದುರಸ್ತಿ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:21 pm, Thu, 9 November 23

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ