AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champa Shashti: ಕುಕ್ಕೆ ಸುಬ್ರಹ್ಮಣ್ಯದ ಚಂಪಾಷಷ್ಠಿ ಉತ್ಸವದಲ್ಲಿ ಅಂಗಡಿ ಹಾಕಲು ಹಿಂದೂಗಳಿಗೆ ಮಾತ್ರ ಅವಕಾಶ; ಕಾಣಿಸಿಕೊಂಡಿದೆ ಬ್ಯಾನರ್

‘ಹಿಂದೂ ಜಾಗರಣ ವೇದಿಕೆ, ಸುಬ್ರಹ್ಮಣ್ಯ ಘಟಕ’ ಹೆಸರಿನಲ್ಲಿ ಕಾಣಿಸಿಕೊಂಡಿರುವ ಈ ಬ್ಯಾನರ್​ನ ಒಕ್ಕಣೆಯು ‘ಧರ್ಮೋ ರಕ್ಷತಿ ರಕ್ಷಿತಃ’ ಎಂದು ಅಂತ್ಯಗೊಂಡಿದೆ.

Champa Shashti: ಕುಕ್ಕೆ ಸುಬ್ರಹ್ಮಣ್ಯದ ಚಂಪಾಷಷ್ಠಿ ಉತ್ಸವದಲ್ಲಿ ಅಂಗಡಿ ಹಾಕಲು ಹಿಂದೂಗಳಿಗೆ ಮಾತ್ರ ಅವಕಾಶ; ಕಾಣಿಸಿಕೊಂಡಿದೆ ಬ್ಯಾನರ್
ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಕಾಣಿಸಿಕೊಂಡಿರುವ ಬ್ಯಾನರ್
TV9 Web
| Edited By: |

Updated on:Nov 24, 2022 | 11:40 AM

Share

ಮಂಗಳೂರು: ಪ್ರಸಿದ್ಧ ಯಾತ್ರಾಸ್ಥಳವಾದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಸಂಭ್ರಮ ಮೈದುಂಬುತ್ತಿದೆ. ಕಳೆದ ಎರಡು ವರ್ಷಗಳಿಂದ ಕೊವಿಡ್ ಕಾರಣದಿಂದಾಗಿ ಚಂಪಾಷಷ್ಠಿ ಉತ್ಸವ ಕಳೆಗಟ್ಟಿರಲಿಲ್ಲ. ಆದರೆ ಈ ಬಾರಿ ಹೆಚ್ಚಿನ ಜನಸಂದಣಿ ಸೇರುವ ಸಾಧ್ಯತೆಯಿದ್ದು, ದೇಗುಲ ಸಮಿತಿ ಮತ್ತು ಸ್ಥಳೀಯ ಆಡಳಿತಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿವೆ. ಈ ನಡುವೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕಾಣಿಸಿಕೊಂಡಿರುವ ಬ್ಯಾನರ್ ಸುದ್ದಿಯಾಗಿದೆ. ‘ಹಿಂದೂ ಜಾಗರಣ ವೇದಿಕೆ, ಸುಬ್ರಹ್ಮಣ್ಯ ಘಟಕ’ ಹೆಸರಿನಲ್ಲಿ ಕಾಣಿಸಿಕೊಂಡಿರುವ ಈ ಬ್ಯಾನರ್​ನ ಒಕ್ಕಣೆಯು ‘ಧರ್ಮೋ ರಕ್ಷತಿ ರಕ್ಷಿತಃ’ ಎಂದು ಅಂತ್ಯಗೊಂಡಿದೆ.

ಮುಜರಾಯಿ ಇಲಾಖೆ ಸುಪರ್ದಿಯಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇದೇ 29ರಂದು ಚಂಪಾ ಷಷ್ಠಿ ಹಾಗೂ ಬ್ರಹ್ಮರಥೋತ್ಸವ ನಡೆಯಲಿದೆ. ದೇವಸ್ಥಾನದ ಜಾತ್ರೆಗಳಲ್ಲಿ ಮೊದಲಿನಿಂದಲೂ ಜಾತಿ ಮತ್ತು ಧರ್ಮ ಭೇದವಿಲ್ಲದೆ ವರ್ತಕರು ಅಂಗಡಿಗಳನ್ನು ಹಾಕಿ, ವ್ಯಾಪಾರ ಮಾಡುತ್ತಿದ್ದರು. ಆದರೆ, ಇದೀಗ ಕಾಣಿಸಿಕೊಂಡಿರುವ ಬ್ಯಾನರ್​ನಲ್ಲಿ ‘ಕುಕ್ಕೆ ಸುಬ್ರಮಣ್ಯ ಚಂಪಾಷಷ್ಠಿಯ ಸಂದರ್ಭದಲ್ಲಿ ಈ ಪರಿಸರದಲ್ಲಿ ಅನ್ಯ ಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ’ ಎಂದು ಬ್ಯಾನರ್​ನಲ್ಲಿ ಹೇಳಲಾಗಿದೆ. ‘ಕುಕ್ಕೆ ಸುಬ್ರಹ್ಮಣ್ಯ ಜಾತ್ರಾ ಸಂದರ್ಭದಲ್ಲಿ ಹಿಂದೂಗಳಲ್ಲದವರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು’ ಎಂದು ಪೊಲೀಸ್ ಠಾಣೆಗೂ ಹಿಂದೂ ಜಾಗರಣ ವೇದಿಕೆಯ ಸುಬ್ರಹ್ಮಣ್ಯ ಘಟಕದ ವತಿಯಿಂದ ದೂರು ನೀಡಲಾಗಿದೆ.

ರಂಗಪೂಜೆ, ಅಂಕುರಾರ್ಪಣೆ

ಚಂಪಾಷಷ್ಠಿ ರಥೋತ್ಸವದ ಹಿನ್ನೆಲೆಯಲ್ಲಿ ಆದಿ ಸುಬ್ರಹ್ಮಣ್ಯದಲ್ಲಿ ದೀಪಾಲಂಕೃತ ರಂಗಪೂಜೆ, ಪ್ರಧಾನ ದೇವಾಲಯದಲ್ಲಿ 16 ಮಡಿಕೆಗಳಲ್ಲಿ ಮಣ್ಣು ಮತ್ತು ಮರಳನ್ನು ಮಿಶ್ರಣ ಮಾಡಿ ನವಧಾನ್ಯಗಳನ್ನು ಬಿತ್ತುವ ಅಂಕುರಾರ್ಪಣೆ ವಿಧಿಗಳು ಬುಧವಾರ (ನ23) ನೆರವೇರಿದವು. ಹೊರಾಂಗಣ ಉತ್ಸವದಲ್ಲಿ ಕಾಚುಕುಜುಂಬ ದೈವವು ಶ್ರೀದೇವರನ್ನು ಭೇಟಿಯಾಗಿ ನುಡಿಗಟ್ಟು ನಡೆಯಿತು. ಬಳಿಕ ಶೇಷವಾಹನಯುಕ್ತ ಬಂಡಿ ಉತ್ಸವ ಮತ್ತು ಪಲ್ಲಕ್ಕಿ ಉತ್ಸವ ನೆರವೇರಿತು. ರಥಬೀದಿಯಲ್ಲಿ ಪಂಚ ಶಿಖರಗಳನ್ನಳಗೊಂಡ ಚಂದ್ರಮಂಡಲ ರಥದಲ್ಲಿ ಆರೂಢರಾದ ಶ್ರೀ ದೇವರಿಗೆ ಪೂಜೆ ಸಲ್ಲಿಸಲಾಯಿತು. ನಂತರ ಕಾಶಿಕಟ್ಟೆ ತನಕ ಉತ್ಸವ ನೆರವೇರಿತು. ಶ್ರೀದೇವರು ಚಂದ್ರಮಂಡಲ ರಥದಲ್ಲಿ ಆಗಮಿಸುವುದು ಲಕ್ಷ ದೀಪೋತ್ಸವದ ದಿನ ಮಾತ್ರ.

ಲಕ್ಷದೀಪೋತ್ಸವ

ಕಾರ್ತಿಕ ಮಾಸದ ಅಮಾವಾಸ್ಯೆ ನಿಮಿತ್ತ ಕುಕ್ಕೆ ಸುಬ್ರಹ್ಮಣ್ಯ ದೇವರ ಲಕ್ಷದೀಪೋತ್ಸವವು ಬುಧವಾರ ಸಡಗರ ಸಂಭ್ರಮದಿಂದ ನೆರವೇರಿತು. ರಥಬೀದಿಯಿಂದ ಕಾಶಿಕಟ್ಟೆ ತನಕ ಲಕ್ಷ ಹಣತೆಗಳು ಬೆಳಗಿದವು. ದೇವಸ್ಥಾನದ ಗೋಪುರದಿಂದ ಕಾಶಿಕಟ್ಟೆಯವರೆಗೆ, ಹನುಮಂತಗುಡಿ, ಸವಾರಿ ಮಂಟಪ, ಆದಿಸುಬ್ರಹ್ಮಣ್ಯ, ಬೈಪಾಸ್, ಕುಮಾರಧಾರ ಸೇರಿದಂತೆ ಕ್ಷೇತ್ರದ ವಿವಿಧೆಡೆ ಹಣತೆಗಳು ಬೆಳಗಿದವು.

Published On - 11:39 am, Thu, 24 November 22

Follow Us
Web contact
Web contact

TV9 Kannada

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ