AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangalore News: ಮಂಗಳೂರು ದೇವಸ್ಥಾನದ ಎದುರು ಕಾಣಿಸಿಕೊಂಡ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಬ್ಯಾನರ್; ಕುಕ್ಕರ್ ಬಾಂಬ್ ಉಲ್ಲೇಖ

ಈ ಬಾರಿ ಮಂಗಳೂರಿನ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ವ್ಯಾಪಾರ ನಿಷೇಧದ ಬ್ಯಾನರ್ ಕಾಣಿಸಿಕೊಂಡಿದೆ.

Mangalore News: ಮಂಗಳೂರು ದೇವಸ್ಥಾನದ ಎದುರು ಕಾಣಿಸಿಕೊಂಡ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಬ್ಯಾನರ್; ಕುಕ್ಕರ್ ಬಾಂಬ್ ಉಲ್ಲೇಖ
ಮಂಗಳೂರು ಕದ್ರಿ ಮಂಜುನಾಥ ದೇಗುಲದ ಎದುರು ಹಾಕಿರುವ ಬ್ಯಾನರ್
TV9 Web
| Edited By: |

Updated on: Jan 19, 2023 | 12:13 PM

Share

ಮಂಗಳೂರು: ಹಿಂದೂ ದೇವಸ್ಥಾನಗಳ ವಿಶೇಷ ಕಾರ್ಯಕ್ರಮಗಳು, ಜಾತ್ರೆಗಳಲ್ಲಿ ಅನ್ಯಧರ್ಮೀಯರಿಗೆ ನಿಷೇಧ ಹೇರುವ ಬ್ಯಾನರ್​ಗಳು ಅಲ್ಲಲ್ಲಿ ಕಾಣಿಸಿಕೊಳ್ಳುತ್ತಲೇ ಇವೆ. ಈ ಬಾರಿ ಮಂಗಳೂರಿನ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ವ್ಯಾಪಾರ ನಿಷೇಧದ ಬ್ಯಾನರ್ ಕಾಣಿಸಿಕೊಂಡಿದೆ. ವಿಶ್ವ ಹಿಂದೂ ಪರಿಷತ್, ಬಜರಂಗದಳ ಶಿವಶಕ್ತಿ ಶಾಖೆ ಕದ್ರಿಯಿಂದ ಬ್ಯಾನರ್ ಅಳವಡಿಸಲಾಗಿದೆ. ಇದೇ ಬ್ಯಾನರ್​ನಲ್ಲಿ ಮಂಗಳೂರು ಕುಕ್ಕರ್ ಬಾಂಬ್ ಆರೋಪಿಯ ಉಲ್ಲೇಖವೂ ಇರುವುದು ಹಲವರ ಗಮನ ಸೆಳೆದಿದೆ. ‘ಕದ್ರಿ ಮಂಜುನಾಥನ ಜಾತ್ರೆಯಲ್ಲಿ ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ’ ಎಂದು ಬ್ಯಾನರ್​ನಲ್ಲಿ ಹೇಳಲಾಗಿದೆ. ‘ಕುಕ್ಕರ್ ಬಾಂಬ್ ಆರೋಪಿಯು ಮೊದಲು ಕದ್ರಿ ದೇವಸ್ಥಾನವನ್ನೇ ಟಾರ್ಗೆಟ್ ಮಾಡಿದ್ದ. ಅಂಥ ಮನಸ್ಥಿತಿ ಇರುವವರಿಗೆ ಮತ್ತು ವಿಗ್ರಹಾರಾಧನೆಯನ್ನು ಹರಮ್ ಎಂದು ನಂಬಿರುವ ಯಾರಿಗೂ ಇಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ’ ಎಂದು ಬ್ಯಾನರ್​ನಲ್ಲಿ ಬರೆಯಲಾಗಿದೆ.

ಕದ್ರಿ ಜಾತ್ರಾ ಮಹೋತ್ಸವವು ಜನವರಿ 14 ರಿಂದ ಜನವರಿ 23ರವರೆಗೆ ನಡೆಯಲಿದೆ. ಒಂಬತ್ತು ದಿನಗಳ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಮಂದಿ ಭಾಗವಹಿಸಲಿದ್ದಾರೆ.

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ