AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಟ್ವಾಳ: ಮಗಳ ಜೊತೆಗೇ ತಾಯಿ ಕೂಡ ಪಿಯುಸಿ ಪಾಸ್​​! ಪತ್ನಿಯ ಕನಸಿಗೆ ಸೇತುವೆಯಾದ ಪತಿ

ಬಂಟ್ವಾಳದ ಕೈಕಂಬದಿಂದ ವಿಶಿಷ್ಟ ಸಾಧನೆ. ತಾಯಿ ನೇತ್ರಾವತಿ ಹಾಗೂ ಮಗಳು ಹೇಮಶ್ರೀ ಏಕಕಾಲದಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾಗಿದ್ದಾರೆ. ಹೇಮಶ್ರೀ ಕಾಲೇಜಿಗೆ ಟಾಪರ್ ಆಗಿ 562 ಅಂಕ ಗಳಿಸಿದ್ದು, ಅಮ್ಮ ನೇತ್ರಾವತಿ ಖಾಸಗಿಯಾಗಿ ಪರೀಕ್ಷೆ ಬರೆದು 257 ಅಂಕಗಳೊಂದಿಗೆ ತಮ್ಮ ಶಿಕ್ಷಣದ ಕನಸು ನನಸಾಗಿಸಿದ್ದಾರೆ. ಈ ಅಪರೂಪದ ಸಾಧನೆ ಜಿಲ್ಲೆಯ ಗಮನ ಸೆಳೆದಿದೆ.

ಬಂಟ್ವಾಳ: ಮಗಳ ಜೊತೆಗೇ ತಾಯಿ ಕೂಡ ಪಿಯುಸಿ ಪಾಸ್​​! ಪತ್ನಿಯ ಕನಸಿಗೆ ಸೇತುವೆಯಾದ ಪತಿ
ತಾಯಿ ಮತ್ತು ಮಗಳು
ಅಕ್ಷಯ್​ ಪಲ್ಲಮಜಲು​​
|

Updated on: Apr 10, 2026 | 3:22 PM

Share

ಬಂಟ್ವಾಳ, ಏ.10: ನೆನ್ನೆ (ಏ.9) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿ ಪ್ರಥಮ ಸ್ಥಾನ ಹಾಗೂ ದಕ್ಷಿಣ ಕನ್ನಡ ದ್ವಿತೀಯ ಬಂದಿದೆ. ದಕ್ಷಿಣ ಕನ್ನಡ ಈ ಹಿಂದೆ ಮೊದಲ ಸ್ಥಾನವನ್ನು ಪಡೆದುಕೊಂಡಿತ್ತು. ಇದೀಗ ಇದರ ನಡುವೆ ಒಂದು ಅಪರೂಪದ ಸಾಧನೆಯೊಂದು ವೈರಲ್​ ಆಗಿದೆ. ಅಮ್ಮ ಮತ್ತು ಮಗಳು ಇಬ್ಬರು ಪರೀಕ್ಷೆ ಬರೆದು ಪಾಸ್​​ ಆಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೈಕಂಬದ ತಾಯಿ ಮತ್ತು ಮಗಳು ಏಕಕಾಲದಲ್ಲಿ ಉತ್ತೀರ್ಣರಾಗುವ ಮೂಲಕ ಜಿಲ್ಲೆಯ ಗಮನ ಸೆಳೆದಿದ್ದಾರೆ.

ಬಿ.ಮೂಡ ಸರಕಾರಿ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿಯಾದ ಹೇಮಶ್ರೀ, 562 ಅಂಕಗಳನ್ನು (ವಿಶಿಷ್ಟ ಶ್ರೇಣಿ) ಗಳಿಸುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನ (Topper) ಪಡೆದಿದ್ದಾರೆ. ಇವರ ತಾಯಿ ನೇತ್ರಾವತಿ ವಿ.ಆರ್ ಅವರು ಮೊಂಟೆಪದವು ಸರಕಾರಿ ಪದವಿಪೂರ್ವ ಕಾಲೇಜಿನ ಮೂಲಕ ಕಲಾ ವಿಭಾಗದಲ್ಲಿ ಖಾಸಗಿಯಾಗಿ ಪರೀಕ್ಷೆ ಬರೆದು 257 ಅಂಕಗಳನ್ನು ಪಡೆಯುವ ಮೂಲಕ ಪ್ರಥಮ ಪ್ರಯತ್ನದಲ್ಲೇ ಉತ್ತೀರ್ಣರಾಗಿದ್ದಾರೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಮಹಾ ಎಡವಟ್ಟು! 600ಕ್ಕೆ 683 ಅಂಕ ನೀಡಿದ ಬೋರ್ಡ್​!

ನಂದಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ರವಿಕುಮಾರ್ ಅವರ ಪತ್ನಿಯಾದ ನೇತ್ರಾವತಿ ಅವರಿಗೆ ವಿದ್ಯಾಭ್ಯಾಸ ಮುಂದುವರಿಸುವ ಆಸೆ ಇತ್ತು. ಮಗಳು ಕಾಲೇಜಿಗೆ ಸೇರಿದಾಗ ಪತಿಯ ಪ್ರೋತ್ಸಾಹದಿಂದ ತಾವೂ ಪರೀಕ್ಷೆ ಬರೆಯಲು ನಿರ್ಧರಿಸಿದರು. ಮಗಳ ಅದ್ಭುತ ಸಾಧನೆಯ ಜೊತೆಗೆ ತಾವೂ ಪಾಸಾಗಿರುವುದು ಇಡೀ ಕುಟುಂಬದಲ್ಲಿ ಸಂತಸ ಮೂಡಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್