AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಟ್ವಾಳ ಸಜಿಪನಡುವಿನಲ್ಲಿ ಮಸೀದಿ ವಿಚಾರಕ್ಕೆ ತಲವಾರು, ರಾಡ್‌ಗಳಿಂದ ಬಡಿದಾಡಿಕೊಂಡ ಗುಂಪು, ಉದ್ವಿಗ್ನ ಪರಿಸ್ಥಿತಿ!

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮಸೀದಿ ವಿಚಾರಕ್ಕೆ ಸಂಬಂಧಿಸಿ ಎರಡು ಗುಂಪುಗಳ ನಡುವೆ ತಲವಾರು ಮತ್ತು ಕಬ್ಬಿಣದ ರಾಡ್‌ಗಳಿಂದ ಭೀಕರ ಹೊಡೆದಾಟ ನಡೆದಿದೆ. ಸಜಿಪನಡುವಿನ ತಲೆಮೊಗರು ಮಸೀದಿ ಬಳಿ ನಡೆದ ಈ ಸಂಘರ್ಷದಲ್ಲಿ ಹಲವರು ಗಾಯಗೊಂಡಿದ್ದು, ಬಂಟ್ವಾಳ ಪೊಲೀಸರು ಒಟ್ಟು 3 ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದಾರೆ. ಘಟನೆಯ ಸಂಪೂರ್ಣ ವಿವರ ಇಲ್ಲಿದೆ.

ಬಂಟ್ವಾಳ ಸಜಿಪನಡುವಿನಲ್ಲಿ ಮಸೀದಿ ವಿಚಾರಕ್ಕೆ ತಲವಾರು, ರಾಡ್‌ಗಳಿಂದ ಬಡಿದಾಡಿಕೊಂಡ ಗುಂಪು, ಉದ್ವಿಗ್ನ ಪರಿಸ್ಥಿತಿ!
ಬಂಟ್ವಾಳ ಸಜಿಪನಡುವಿನಲ್ಲಿ ಮಸೀದಿ ವಿಚಾರಕ್ಕೆ ಗಲಾಟೆImage Credit source: tv9
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Mar 24, 2026 | 9:41 AM

Share

ಮಂಗಳೂರು, ಮಾರ್ಚ್ 24: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ಸಜಿಪನಡು ಪ್ರದೇಶದಲ್ಲಿ ಮಸೀದಿ ವಿಚಾರವಾಗಿ ಉಭಯ ತಂಡಗಳ ನಡುವೆ ಗಲಾಟೆ ನಡೆದಿದ್ದು ತಲವಾರು, ದೊಣ್ಣೆ ಮತ್ತು ಕಬ್ಬಿಣದ ರಾಡ್‌ಗಳಿಂದ ಹಲ್ಲೆ ಮಾಡಿದ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. ತಲೆಮೊಗರು ಮಸೀದಿ (Talemogaru Mosque) ಸಮೀಪದಲ್ಲಿ ಗಲಾಟೆ ಸಂಭವಿಸಿದ್ದು, ಗಾಯಗೊಂಡವರನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಸೀದಿ ವಿಚಾರದಲ್ಲಿ ತಕರಾರು

ಅಬ್ದುಲ್ ನವಾಝ್ (42) ಅವರು ತಮ್ಮ ಸಂಬಂಧಿ ದಾವೂದ್ ಜೊತೆಗೆ ಮಸೀದಿಗೆ ತೆರಳಿ ವಾಪಾಸಾಗುವ ವೇಳೆ, ಶೌಕತ್, ಇಸಾಕ್, ಸಫಿಕ್, ಯಾಕೂಬ್, ಮಹಮ್ಮದ್ ಮುಸ್ತಫಾ, ನಾಸಿರ್ ಮತ್ತು ನಿಝಾಲ್ ಸೇರಿ ಗುಂಪಾಗಿ ನಿಂತಿದ್ದವರು ತಕರಾರು ತೆಗೆದು ಅವಾಚ್ಯವಾಗಿ ನಿಂದಿಸಿದ್ದಾರೆ. ಬಳಿಕ ಕತ್ತಿ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಆರೋಪ ಕೇಳಿಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ವ್ಯಕ್ತಿ ಅಬ್ದುಲ್ ಗಫೂರ್ (48) ಎಂಬವರು ಪ್ರತಿದೂರು ದಾಖಲಿಸಿದ್ದು, ಯಾಕೂಬ್, ಶಫೀಕ್, ಇಸಾಕ್, ಸಫ್ವಾನ್ ಮತ್ತು ಅಶ್ರಫ್ ಸಾಹೇಬ್ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವೇಳೆ, ಶೌಕತ್ ಅಲಿ (40) ಎಂಬವರು ನೀಡಿದ ಮತ್ತೊಂದು ದೂರಿನ ಪ್ರಕಾರ, ದಾವೂದ್, ಜುಬೈರ್, ಸೈದುದ್ದೀನ್, ನವಾಜ್, ಗಫೂರ್, ಶರೀಪ್ ಮತ್ತು ಆಶಿಕ್ ಮಸೀದಿ ವಿಚಾರದಲ್ಲಿ ಗಲಾಟೆ ನಡೆಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಗಲಾಟೆ ತಡೆಹಿಡಿಯಲು ಬಂದ ಸಫಾನಾ, ನಿಜಾಲ್, ಇಸಾಕ್ ಮತ್ತು ಆಶ್ರಫ್ ಅವರ ಮೇಲೂ ದಾಳಿ ಯತ್ನ ನಡೆದಿದೆ ಎನ್ನಲಾಗಿದೆ.

ಸಜಿಪನಡು ಹೊಡೆದಾಟದ ವಿಡಿಯೋ ಇಲ್ಲಿ ನೋಡಿ

ಒಟ್ಟಾರೆಯಾಗಿ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ಮತ್ತು ಪ್ರತಿದೂರು ಸೇರಿ ಒಟ್ಟು ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಪೊಲೀಸರು ಬಿಎನ್​ಎಸ್ ಹಾಗೂ ಶಸ್ತ್ರಾಸ್ತ್ರಗಳ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಮೂಡಬಿದ್ರೆ ಇನ್ಸ್​ಪೆಕ್ಟರ್​​​ ಕಾಮಕಾಂಡ ಕೇಸ್​ ಸಿಐಡಿಗೆ ಹಸ್ತಾಂತರ: ‘ಪೋಲಿ’ಸಪ್ಪಗೆ ಮತ್ತೆ ಸಂಕಷ್ಟ

ಒಟ್ಟಿನಲ್ಲಿ, ಮಸೀದಿ ವಿಚಾರದಲ್ಲಿ ಆರಂಭವಾದ ಈ ಗಲಾಟೆ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:39 am, Tue, 24 March 26

Follow Us
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ