Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ವಿದ್ಯಾರ್ಥಿ ದಿಗಂತ್​ ನಾಪತ್ತೆ, ವಿಹೆಚ್​ಪಿ​​ ಪ್ರತಿಭಟನೆ, ಗಾಂಜಾ ವ್ಯಸನಿಗಳ ಕೈವಾಡ ಶಂಕೆ

ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿದ್ದು, ಐದು ದಿನಗಳಾದರೂ ಪತ್ತೆಯಾಗಿಲ್ಲ. ಪೊಲೀಸರ ನಿಷ್ಕ್ರಿಯತೆಗೆ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದೆ. ರೈಲ್ವೇ ಹಳಿಯಲ್ಲಿ ಚಪ್ಪಲಿ ಮತ್ತು ಮೊಬೈಲ್ ಪತ್ತೆಯಾಗಿದೆ. ಪೊಲೀಸರು ಮೂರು ತನಿಖಾ ತಂಡಗಳನ್ನು ರಚಿಸಿದ್ದಾರೆ. ಗಾಂಜಾ ವ್ಯಸನಿಗಳ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಮಂಗಳೂರು: ವಿದ್ಯಾರ್ಥಿ ದಿಗಂತ್​ ನಾಪತ್ತೆ, ವಿಹೆಚ್​ಪಿ​​ ಪ್ರತಿಭಟನೆ, ಗಾಂಜಾ ವ್ಯಸನಿಗಳ ಕೈವಾಡ ಶಂಕೆ
ನಾಪತ್ತೆಯಾಗಿರುವ ವಿದ್ಯಾರ್ಥಿ ದಿಗಂತ್​
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ವಿವೇಕ ಬಿರಾದಾರ

Updated on:Mar 01, 2025 | 12:26 PM

ಮಂಗಳೂರು, ಮಾರ್ಚ್​ 01: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ (Bantwala) ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌, ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿ ಐದು‌ ದಿನ ಕಳೆದರೂ ಇನ್ನೂವರೆಗೂ ಆತನ ಸುಳಿವು ಸಿಕ್ಕಿಲ್ಲ. ನಾಪತ್ತೆಯಾದ ವಿದ್ಯಾರ್ಥಿ ದಿಗಂತ್​ನನ್ನು ಪತ್ತೆ ಮಾಡುವಲ್ಲಿ ಪೊಲೀಸ್ ಇಲಾಖೆ ವೈಫಲ್ಯವಾಗಿದೆ ಎಂದು ಆರೋಪ ಕೇಳಿಬಂದಿದೆ.

ದಿಗಂತ್ ಮಂಗಳೂರು ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಾರೆ. ಮಂಗಳವಾರ (ಫೆ.25) ರಂದು ರಾತ್ರಿ  7 ಗಂಟೆ ಸುಮಾರಿಗೆ ಫರಂಗಿಪೇಟೆ ಅಂಜನೇಯ ವ್ಯಾಯಮ ಶಾಲೆಗೆ ಹೋಗಿ ಬರುವುದಾಗಿ ದಿಗಂತ್​ ಮನೆಯಲ್ಲಿ ಹೇಳಿ ಹೋಗಿದ್ದರು. ಆದರೆ, ಎಷ್ಟೊತ್ತಾದರೂ ದಿಗಂತ್​ ಮನೆಗೆ ಬಾರದಿದ್ದಾಗ ಗಾಭರಿಗೊಂಡ ಪೋಷಕರು ಹುಡುಕಾಟ ನಡೆಸಿದ್ದಾರೆ. ಆಗ, ರೈಲ್ವೆ ಹಳಿಯಲ್ಲಿ ದಿಗಂತ್​ರ ಚಪ್ಪಲಿ ಹಾಗೂ ಮೊಬೈಲ್ ದೊರಕಿತ್ತು. ಒಂದು ಚಪ್ಪಲಿಯಲ್ಲಿ ರಕ್ತದ ಕಲೆ ಕಂಡು ಬಂದಿತ್ತು. ಅಲ್ಲದೇ, ದಿಗಂತ್​ ನಾಪತ್ತೆಯಾದ ದಿನ ಸಂಜೆ ಅಂಜನೇಯ ವ್ಯಾಯಾಮ ಶಾಲೆ ಬಳಿ ಅನುಮಾನಾಸ್ಪದವಾಗಿ ಕ್ವಾಲೀಸ್ ಕಾರೊಂದು ಓಡಾಡಿತ್ತು.

ತನಿಖೆಗೆ ಮೂರು ವಿಶೇಷ ತಂಡ ರಚನೆ

ವಿದ್ಯಾರ್ಥಿ ದಿಗಂತ್​ ಪತ್ತೆಗೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಯತೀಶ್ ಮೂರು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್, ಪುತ್ತೂರು ಟ್ರಾಫಿಕ್ ಎಸ್.ಐ.ಉದಯರವಿ ಹಾಗೂ ಬಂಟ್ವಾಳ ನಗರ ಠಾಣಾ ಎಸ್​ಐ ದುರ್ಗಪ್ಪ ನೇತೃತ್ವದಲ್ಲಿ ತಂಡಗಳು ತನಿಖೆ ನಡೆಸುತ್ತಿವೆ.

ಇದನ್ನೂ ಓದಿ
Image
ಕೋಟೆಕಾರು ದರೋಡೆ: ಪ್ರಮುಖ ಸೂತ್ರಧಾರ ಭಾಸ್ಕರ್ ಬೆಳ್ಚಪಾಡನ ಹಿನ್ನೆಲೆಯೇ ರೋಚಕ
Image
ಸೈಬರ್ ವಂಚಕರ ಜತೆಗೆ ಅವರ ದುಡ್ಡಲ್ಲೇ ಪ್ರವಾಸ ಮಾಡಿದ ಮಂಗಳೂರು ಪೊಲೀಸರು!
Image
‘ಇಡಿ' ಹೆಸರಿನಲ್ಲಿ ನಕಲಿ‌ ದಾಳಿ: ಕೇರಳ ಪೊಲೀಸ್ ಅಧಿಕಾರಿಯೇ ಮಾಸ್ಟರ್ ಮೈಂಡ್!
Image
ಮಂಗಳೂರು ಉದ್ಯಮಿಗೆ ಭೂಗತ ಪಾತಕಿಯಿಂದ ಬೆದರಿಕೆ ಕರೆ: 3 ಕೋಟಿ ರೂ ಡಿಮ್ಯಾಂಡ್

ಇನ್ನು, ದಿಗಂತ್​ ನಾಪತ್ತೆಯಾದ ಸುದ್ದಿ ತಿಳಿದು ಆಕ್ರೋಶಗೊಂಡಿದ್ದ ವಿಶ್ವಹಿಂದೂ ಪರಿಷತ್ ಸ್ಥಳೀಯ ಮುಖಂಡರು ಶನಿವಾರದೊಳಗೆ ಆತನನ್ನು ಪತ್ತೆ ಮಾಡಬೇಕು ಎಂದು ಪೊಲೀಸರಿಗೆ ಗಡುವು ನೀಡಿದ್ದರು. ಆದರೆ, ಪೊಲೀಸರು ಇನ್ನೂವರೆಗೂ ಪತ್ತೆ ಮಾಡದ ಹಿನ್ನೆಲೆಯಲ್ಲಿ ಇಂದು (ಮಾ.01) ಹಿಂದೂಪರ ಸಂಘಟನೆಗಳು ಫರಂಗಿಪೇಟೆ ಬಂದ್​ಗೆ ಕರೆ ನೀಡಿವೆ. ಬಂದ್​ಗೆ ಕರೆ ಹಿನ್ನೆಲೆಯಲ್ಲಿ ಫರಂಗಿಪೇಟೆಯಲ್ಲಿ ಬಹುತೇಕ ಅಂಗಡಿ-ಮುಂಗಟ್ಟುಗಳು ಬಂದ್ ಆಗಿವೆ.

ಬಂಟ್ವಾಳ ತಾಲೂಕಿನ ಫರಂಗಿಪೇಟೆ ಜಂಕ್ಷನ್​ನಲ್ಲಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಪ್ರತಿಭಟನೆಯಲ್ಲಿ ಎಂಎಲ್​ಸಿ ಕಿಶೋರ್ ಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದರು. ಬಂದ್ ಮತ್ತು ಪ್ರತಿಭಟನೆ ಹಿನ್ನೆಲೆಯಲ್ಲಿ 500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ದಿಗಂತ್​ ನಾಪತ್ತೆ ಹಿಂದೆ ಗಾಂಜಾ ವಾಸನೆ?

ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಯತೀಶ್.ಎನ್ ಮಾತನಾಡಿ, ಈ ಪ್ರಕರಣದ ತನಿಖೆಯನ್ನು ಚುರುಕಾಗಿ ಮಾಡುತ್ತಿದ್ದೇವೆ. ಪೊಲೀಸ್ ತಂಡ ರಚನೆ ಮಾಡಿ ತನಿಖೆಯ ಜವಬ್ದಾರಿ ನೀಡಲಾಗಿದೆ. ಹುಡಗನನ್ನು ಆದಷ್ಟು ಬೇಗ ಪತ್ತೆ ಮಾಡುವ ಭರವಸೆ ಇದೆ. ಹುಡುಗನ ಕಾಲೇಜು, ಸ್ನೇಹಿತರು ಎಲ್ಲ ಆಯಾಮದಲ್ಲೂ ತನಿಖೆ ಮಾಡುತ್ತಿದ್ದೇವೆ. ಸದ್ಯಕ್ಕೆ ಸುಳಿವುಗಳು ಸಿಕ್ಕಿಲ್ಲ. ಆತನ ದೈನಂದಿಕ ಚಟುವಟಿಕೆ ಏನಾಯಿತು ಎಂಬ ಬಗ್ಗೆ ತನಿಖೆ ಮಾಡುತ್ತಿದ್ದೇವೆ ಎಂದು ಹೇಳಿದರು.

25 ನೇ ತಾರೀಖು ಕಾಲೇಜಿಗೆ ಹೋಗಿ ಹಾಲ್ ಟಿಕೆಟ್ ತಂದಿದ್ದಾನೆ. ಆ ದಿನ ಸಂಜೆ ದೇವಸ್ಥಾನಕ್ಕೆ ಹೋಗಿ ಬರುತ್ತೇನೆ ಎಂದು ಹೋದವನು ಮನೆಗೆ ಬಂದಿಲ್ಲ ಎಂದು ದೂರು ನೀಡಿದ್ದಾರೆ. ತನಿಖೆ ಮಾಡಿದಾಗ ಆತ ಆ ದಿನ ದೇವಸ್ಥಾನಕ್ಕೂ ಹೋಗಿಲ್ಲ ಎಂದು ತಿಳಿದುಬಂದಿದೆ. ತನಿಖೆ ಶುರು ಮಾಡಿದ್ದೇವೆ ಆದಷ್ಟು ಬೇಗ ಪತ್ತೆ ಮಾಡುತ್ತೇವೆ. ಗಾಂಜಾ ವ್ಯಸನಿಗಳ ಕೃತ್ಯದ ಆಯಾಮದಲ್ಲೂ ತನಿಖೆ ಮಾಡುತ್ತಿದ್ದೇವೆ.ಕುಟುಂಬ ಸದಸ್ಯರು, ಸಾರ್ವಜನಿಕರು ನೀಡುವ ಎಲ್ಲಾ ಮಾಹಿತಿಯನ್ನು ಗಂಭೀರವಾಗಿ ತಗೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆಗೆ ಮುಹೂರ್ತ ಫಿಕ್ಸ್ ಮಾಡಿದ್ದ ಮಾಸ್ಟರ್ ಮೈಂಡ್​​ಗಳಿಬ್ಬರ ಬಂಧನ

ರೈಲ್ವೆ ಹಳಿಯಲ್ಲಿ ಸಿಕ್ಕಿರುವ ಚಪ್ಪಲ್​ ಅನ್ನು ಎಫ್.ಎಸ್.ಎಲ್​ಗೆ ಕಳುಹಿಸಿದ್ದೇವೆ‌. ಚಪ್ಪಲ್​ನಲ್ಲಿರುವ ರಕ್ತದ ಕಲೆಯ ಬಗ್ಗೆ ಪರೀಕ್ಷಾ ವರದಿ ಬರಲಿದೆ ಎಂದು ಮಾಹಿತಿ ನೀಡಿದರು. ವಿದ್ಯಾರ್ಥಿ ದಿಗಂತ್ ನಾಪತ್ತೆ ಹಿಂದೆ ಗಾಂಜಾ ವ್ಯಸನಿಗಳ ತಂಡದ ಕೈವಾಡ ಇರಬಹುದು ಎಂದು ವಿಹೆಚ್​ಪಿ ಅನುಮಾನ ವ್ಯಕ್ತಪಡಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:19 pm, Sat, 1 March 25

ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ
ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ
ಏಕನಾಥ್​ ಶಿಂಧೆಯನ್ನು ಅಪಹಾಸ್ಯ ಮಾಡಿದ ಕುನಾಲ್ ಕಮ್ರಾ
ಏಕನಾಥ್​ ಶಿಂಧೆಯನ್ನು ಅಪಹಾಸ್ಯ ಮಾಡಿದ ಕುನಾಲ್ ಕಮ್ರಾ