AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Success Story: ವಿಷ ದುಬಾರಿ! ಜೇನು ವಿಷಕ್ಕೂ ಇದೆ ಭಾರಿ ಡಿಮ್ಯಾಂಡ್, ಜೇನು ವಿಷ ಸಂಗ್ರಹಿಸುವ ಸಾಹಸದಲ್ಲಿ ಈ ಕೃಷಿಕ ಯಶಸ್ವಿ!

Bee venom: ಈ ಜೇನು ವಿಷ ಪದಾರ್ಥವು ಔಷಧದ ತಯಾರಿಕೆಯಲ್ಲಿ ಬಳಕೆಯಾಗುತ್ತದೆ. ಹಾಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇದಕ್ಕೆ ಉತ್ತಮ ಬೇಡಿಕೆ ಇದೆ.

Success Story: ವಿಷ ದುಬಾರಿ! ಜೇನು ವಿಷಕ್ಕೂ ಇದೆ ಭಾರಿ ಡಿಮ್ಯಾಂಡ್, ಜೇನು ವಿಷ ಸಂಗ್ರಹಿಸುವ ಸಾಹಸದಲ್ಲಿ ಈ ಕೃಷಿಕ ಯಶಸ್ವಿ!
ಜೇನು ವಿಷ ಸಂಗ್ರಹಿಸುವ ಸಾಹಸದಲ್ಲಿ ಈ ಕೃಷಿಕ ಯಶಸ್ವಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jan 02, 2023 | 11:08 AM

ವಿಷ ನಿಜಕ್ಕೂ ದುಬಾರಿಯೇ! ಅದನ್ನು ಸಂಗ್ರಹಿಸುವಲ್ಲಿಯೂ ಅಷ್ಟೇ! ಅದನ್ನು ರಕ್ಷಿಸಿಡುವಲ್ಲಿಯೂ ಅಷ್ಟೇ! ಕೊನೆಗೆ ಅದನ್ನು ಬಳಸಿದ ಮೇಲೂ ಅಷ್ಟೇ ದುಬಾರಿಯಾದೀತು. ಆದರೆ ಅದನ್ನು ಹಿತಮಿತವಾಗಿ, ವೈದ್ಯಕೀಯ ಪ್ರಮಾಣದಲ್ಲಿ ಬಳಸಿದರೆ ಸುರಕ್ಷಿತ! ಆರೋಗ್ಯವರ್ಧಕವೂ ಹೌದು.  ಹೂವಿನ ಮಕರಂದ ಹೀರಿ ಜೇನು ಸಂಗ್ರಹಿಸುವ ಜೇನುನೊಣ ಪರೋಪಕಾರಿ ಜೀವಿ. ಕರಾವಳಿ ಭಾಗದಲ್ಲಿ ಈ ಜೇನು ಕೃಷಿ ಮಾಡುವ ಅನೇಕ ಕೃಷಿಕರಿದ್ದಾರೆ. ಆದ್ರೆ ಇಲ್ಲೊಬ್ಬರು ಜೇನು ನೊಣಗಳಿಂದ ಜೇಣು ವಿಷ ಸಂಗ್ರಹಿಸುವ (Bee Venom) ಸಾಹಸಕ್ಕೆ ಕೈ ಹಾಕಿ ಯಶಸ್ವಿಯಾಗಿದ್ದಾರೆ. ಹೌದು..ಕರಾವಳಿ ಭಾಗದಲ್ಲಿ ಜೇನುತುಪ್ಪ ಸಂಗ್ರಹಿಸುವ ಸಾಕಷ್ಟು ಕೃಷಿಕರಿದ್ದರು. ಉಪಉತ್ಪನ್ನವಾದ ಜೇನು ವಿಷ ಸಂಗ್ರಹಿಸುವರಿಲ್ಲ. ಆದ್ರೆ ಮಂಗಳೂರು (Mangalore) ಹೊರವಲಯದ ಕಿನ್ನಿಗೋಳಿಯ ಪ್ರಜ್ವಲ್ ಶೆಟ್ಟಿಗಾರ್ ಜೇನು ವಿಷ ಅಂದ್ರೆ ಬೀ ವೆನಮ್ ಪಡೆಯುವ ಯಂತ್ರವನ್ನು ಸ್ವತ: ತಯಾರಿಸಿ ವಿಷ ಸಂಗ್ರಹಿಸುವಲ್ಲಿ ಯಶಸ್ವಿಯಾಗಿದ್ದಾರೆ (Success Story). ಪ್ರಜ್ವಲ್ ಅವರು ವಿವಿಧ ಪ್ರದೇಶಗಳಲ್ಲಿ ವಿಷ ಸಂಗ್ರಹ, ನೊಣಗಳ ಚಟುವಟಿಕೆ, ಸಂಗ್ರಹಿಸಿದ ವಿಷವನ್ನು ಫ್ರೀಝರ್‌ನಲ್ಲಿ ಕಾಪಾಡುವ ಅಧ್ಯಯನ ಮಾಡಿ ಪರಿಪೂರ್ಣವಾಗಿ ಯಶಸ್ಸು ಕಂಡಿದ್ದಾರೆ. ಸದ್ಯ ಐದು ರೀತಿಯ ಬೀ ವೆನಮ್ ಎಕ್ಸ್‌ಟ್ರಾಕ್ಟರ್ ರೆಡಿ ಮಾಡಿದ್ದಾರೆ.

ಜೇನು ಪೆಟ್ಟಿಗೆಯ ಮುಂಭಾಗ ನೋಣಗಳ ಓಡಾಟ ದ್ವಾರದಲ್ಲಿ ವಿಷ ಸಂಗ್ರಹಿಸುವ ಪ್ಲೇಟ್ ಇಟ್ಟು ಬ್ಯಾಟರಿ ಮೂಲಕ ಸಣ್ಣ ವೋಲ್ವೇಜ್‌ನಲ್ಲಿ ವಿದ್ಯುತ್ ಪ್ರವಹಿಸಲಾಗುತ್ತದೆ. ನೊಣಗಳು ಪ್ಲೇಟ್ ಮೇಲೆ ಕೂತಾಗ ವೈಬ್ರೇಶನ್‌ಗೊಳಗಾಗಿ ವಿಷ ಕೊಂಡಿಯಿಂದ ಗಾಜಿನ ಪ್ಲೇಟ್ ಮೇಲೆ ಕುಟುಕುತ್ತವೆ. ಆ ವೇಳೆ ವಿಷ ಗಾಜಿನ ಮೇಲೆ ಸಂಗ್ರಹವಾಗುತ್ತದೆ. ತಕ್ಷಣವೇ ಅದನ್ನು ಷೆವಿಂಗ್ ರೇಜರ್​ ನಿಂದ ಸಂಗ್ರಹಿಸಲಾಗುತ್ತದೆ.

Bee venom extractor in Mangalore a success story

ಈ ಜೇನು ವಿಷ ಪದಾರ್ಥವು ಔಷಧದ ತಯಾರಿಕೆಯಲ್ಲಿ ಬಳಕೆಯಾಗುತ್ತದೆ. ಹಾಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇದಕ್ಕೆ ಉತ್ತಮ ಬೇಡಿಕೆ ಇದೆ. ಬೃಹತ್ ಔಷಧ ಕಂಪನಿಗಳು ದೊಡ್ಡ ಮೊತ್ತ ನೀಡಿ ಖರೀದಿಸುತ್ತವೆ. ಪುಣೆ, ದೆಹಲಿ, ಮಹಾರಾಷ್ಟ್ರದಲ್ಲಿ ವಿಷ ಸಂಗ್ರಹ ನಡೆಯುತ್ತಿದೆ. ಆದ್ರೆ ಕರ್ನಾಟಕದಲ್ಲಿ ರೈತರಿಗೆ ಅಷ್ಟೊಂದು ಮಾಹಿತಿ ಇಲ್ಲ ಅನ್ನುತ್ತಾರೆ ಪ್ರಜ್ವಲ್ ಶೆಟ್ಟಿಗಾರ್.

ವಿಷ ಸಂಗ್ರಹದ ಪ್ಲೇಟ್‌ಗೆ ಮಾರುಕಟ್ಟೆಯಲ್ಲಿ 20 ಸಾವಿರಕ್ಕೂ ಹೆಚ್ಚು ಬೆಲೆ ಇದೆ. ಇದು ಮೆಲ್ಲಿಫೆರಾ ತಳಿಗೆ ಮಾತ್ರ ಆಗುವಂತದ್ದು. ಆದ್ರೆ ಕರಾವಳಿ ಮಲೆನಾಡು ಭಾಗದಲ್ಲಿ ಅಧಿಕ ಪ್ರಮಾಣದಲ್ಲಿ ಇರುವುದು ಸೆರೆನಾ ತಳಿ. ಹೀಗಾಗಿ ವಿವಿಧ ಮೂಲಗಳಿಂದ ಮಾಹಿತಿ ಪಡೆದು ಸ್ವಂತ ಪ್ರಯೋಗದಲ್ಲಿ ತೊಡಗಿ ಪ್ರಜ್ವಲ್ ಯಶಸ್ವಿಯಾಗಿದ್ದಾರೆ.

ವರದಿ: ಅಶೋಕ್, ಟಿವಿ 9, ಮಂಗಳೂರು

ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ