AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಗುಲಕ್ಕೆಂದು ಹೋದ ಬಾಲಕ ಕೆರೆಯಲ್ಲಿ ಹೆಣವಾಗಿ ಪತ್ತೆ: ಪ್ರಾಣಿ ದಾಳಿಯೋ? ಕೊಲೆಯೋ?

ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ದೇಗುಲಕ್ಕೆ ಹೊರಟಿದ್ದ 15 ವರ್ಷದ ಬಾಲಕ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಆರಂಭದಲ್ಲಿ ಪ್ರಾಣಿ ದಾಳಿ ಎಂದು ಶಂಕಿಸಿದ್ದರೂ ತಲೆಯ ಮೇಲಿನ ಗಾಯಗಳು ಕೊಲೆ ಆಗಿರುವ ಅನುಮಾನಗಳನ್ನು ಮೂಡಿಸಿವೆ. ಸ್ಥಳಕ್ಕೆ ಎಸ್ಪಿ ಭೇಟಿ ನೀಡಿ ಪರಿಶೀಲಿಸಿದ್ದು, ಪೊಲೀಸರು ಎಲ್ಲಾ ಆಯಾಮಗಳಲ್ಲಿಯೂ ತೀವ್ರ ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಘಟನೆಗೆ ಕಾರಣ ಗೊತ್ತಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ದೇಗುಲಕ್ಕೆಂದು ಹೋದ ಬಾಲಕ ಕೆರೆಯಲ್ಲಿ ಹೆಣವಾಗಿ ಪತ್ತೆ: ಪ್ರಾಣಿ ದಾಳಿಯೋ? ಕೊಲೆಯೋ?
ಮರತ ಬಾಲಕ ಸುಮಂತ್​
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jan 14, 2026 | 4:28 PM

Share

ಮಂಗಳೂರು, ಜನವರಿ 14: ಧನುರ್ಮಾಸ ಹಿನ್ನೆಲೆ ದೇಗುಲಕ್ಕೆಂದು ಮುಜಾನೆಯೇ ಮನೆಯಿಂದ ಹೊರಟಿದ್ದ 9ನೇ ತರಗತಿಯ ಬಾಲಕನೊಬ್ಬ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಸುಮಂತ್​​ (15) ಮೃತ ದುರ್ದೈವಿಯಾಗಿದ್ದು, ಬಾಲಕನ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿವೆ. ಹೀಗಾಗಿ ಎಲ್ಲಾ ಆಯಾಮಗಳಲ್ಲಿಯೂ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ.

ಕುವೆಟ್ಟು ಸಮೀಪದ ಸಂಬೋಳ್ಯ ಬರಮೇಲು ನಿವಾಸಿಯಾದ ಸುಬ್ರಹ್ಮಣ್ಯ ನಾಯಕ್ ಅವರ ಮಗ ಸುಮಂತ್​​ ಧನುರ್ಮಾಸದ ಹಿನ್ನಲೆಯಲ್ಲಿ ಬೆಳಗ್ಗೆ 4 ಗಂಟೆಗೆ ಎದ್ದು ನಾಳದಲ್ಲಿರೋ ದೇವಸ್ಥಾನಕ್ಕೆ ಹೋಗಿಬರುತ್ತಿದ್ದ. ಹಾಗೆ ಇಂದು ಕೂಡ ದೇವಸ್ಥಾನಕ್ಕೆ ಅಂತಾ ಹೋಗಿದ್ದಾನೆ. ಆದರೆ ಈತನ ಸಹೋದರ ಸುದರ್ಶನ್​​ಗೆ ಬೆಳಗ್ಗೆ 6.30ರ ಸುಮಾರಿಗೆ ದೇವಸ್ಥಾನದಿಂದ ಸ್ನೇಹಿತರು ಕರೆ ಮಾಡಿ ಸುಮಂತ್ ದೇವಸ್ಥಾನಕ್ಕೆ ಯಾಕೆ ಬರಲಿಲ್ಲ ಅಂತಾ ಕೇಳಿದ್ದಾರೆ. ಆಗ ಸುಮಂತ್​​ ಮಿಸ್ಸಿಂಗ್​​ ಆಗಿರುವ ವಿಚಾರ ಮನೆಯವರಿಗೆ ಗೊತ್ತಾಗಿದೆ. ಮನೆಯಿಂದ ಕಾಲು ದಾರಿಯಲ್ಲಿ ನಡೆದುಕೊಂಡು ಹೋಗಿ ರಸ್ತೆ ಸಮೀಪ ನಿಲ್ಲಿಸಿದ್ದ ಬೈಸಿಕಲ್​​ ತೆಗೆದುಕೊಂಡು ಸುಮಂತ್​​ ದೇಗುಲಕ್ಕೆ ಹೋಗುತ್ತಿದ್ದ. ಅಲ್ಲಿಗೆ ಹೋಗಿ ನೋಡಿದ್ರೆ ಸೈಕಲ್ ನಿಲ್ಲಿಸಿದ್ದಲಿಯೇ ಇತ್ತು. ಇದ್ರಿಂದ ಅನುಮಾನಗೊಂಡು ಆತನನ್ನು ಎಲ್ಲರೂ ಹುಡುಕಿದ್ದಾರೆ. ಈ ವೇಳೆ ರಕ್ತದ ಹನಿಗಳು ಪತ್ತೆಯಾಗಿದ್ದು, ಅವನ್ನು ಹಿಂಬಾಲಿಸಿ ಹೋದಾಗ ಸಮೀಪದ ಕೆರೆ ಪಕ್ಕದಲ್ಲೇ ಇದ್ದ ಕಲ್ಲೊಂದಕ್ಕೆ ರಕ್ತ ಅಂಟಿಕೊಂಡಿರೋದು ಕಾಣಿಸಿದೆ. ಬಳಿಕ ಅಗ್ನಿಶಾಮಕದಳ ಸಿಬ್ಬಂದಿ ಬಂದು ಕೆರೆಯಲ್ಲಿ ಹುಡುಕಾಡಿದಾಗ ಅಲ್ಲಿ ಸುಮಂತ್ ಮೃತದೇಹ ಪತ್ತೆಯಾಗಿದೆ.

ಇದನ್ನೂ ಓದಿ: ತಾಯಿಗೆ ಹೊಡೆದ ಎಂದು ಮಲತಂದೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಮಗ

ನಾಯಿ ಅಟ್ಟಿಸಿಕೊಂಡು ಬಂದು ಕಚ್ಚಿದ ಕಾರಣ ಬಾಲಕ ಓಡಿ ಹೋಗಿ ಕೆರೆಗೆ ಬಿದ್ದಿದ್ದಾನೆ ಅಂತಾ ಆರಂಭದಲ್ಲಿ ಅನುಮಾನಿಸಲಾಗಿತ್ತು. ಚಿರತೆ ದಾಳಿಯಿಂದ ಸಾವನ್ನಪ್ಪಿರಬಹುದು ಅಂತಲೂ ಅಂದಾಜಿಸಲಾಗಿತ್ತು. ಆದ್ರೆ ಬಾಕಲನ ತಲೆಯ ಮೇಲ್ಭಾಗದಲ್ಲಿ ಮಚ್ಚಿನಲ್ಲಿ ಹೊಡೆದಿರುವ ರೀತಿ ಎರಡು ಕಡೆ ಗಾಯವಾಗಿರೋದು ಕಂಡುಬಂದಿದೆ. ಹಾಗಿ ಇದು ಕೊಲೆಯಾಗಿರಬಹುದೆಂಬ ಅನುಮಾನ ಮೂಡಿದ್ದು, ಎಸ್ಪಿ ಡಾ.ಅರುಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಾಗ್ ಸ್ಕ್ವಾಡ್​ನಿಂದಲೂ ತಪಾಸಣೆ ನಡೆದಿದೆ. ಮರಣೋತ್ತರ ಪರೀಕ್ಷೆ ಬಳಿಕ ಘಟನೆ ಹೇಗಾಯ್ತು ಅಂತಾ ಗೊತ್ತಾಗಲಿದ್ದು, ಎಲ್ಲ ಆಯಾಮದಲ್ಲಿಯೂ ತನಿಖೆ ಮಾಡುತ್ತೇವೆ ಅಂತಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!