AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಭಾಷಣ; ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್​ನಲ್ಲಿ ರಿಲೀಫ್

24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ ಸಿದ್ದರಾಮಯ್ಯನವರಿಗೆ ಮತ ಯಾಚಿಸಿದ್ದೀರಿ. ಭಜರಂಗದಳವನ್ನು ನಿಷೇಧಿಸಲು ಮುಂದಾಗಿರುವ ಕಾಂಗ್ರೆಸ್‌ಗೆ ಮತ ಕೇಳಿದ್ದೀರಿ ಎಂದು ಪೂಂಜಾ ಹೇಳಿದ್ದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಭಾಷಣ; ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್​ನಲ್ಲಿ ರಿಲೀಫ್
ಹರೀಶ್ ಪೂಂಜಾ
ಗಣಪತಿ ಶರ್ಮಾ
|

Updated on: Jun 10, 2023 | 3:46 PM

Share

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ದಕ್ಷಿಣ ಕನ್ನಡದ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ಅವರಿಗೆ ಕರ್ನಾಟಕ ಹೈಕೋರ್ಟ್​​ನಲ್ಲಿ ಶುಕ್ರವಾರ ರಿಲೀಫ್ ಸಿಕ್ಕಿದೆ. ಪೂಂಜಾ ಪರ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠವು ಪ್ರಕರಣದ ಪೊಲೀಸ್ ತನಿಖೆಗೆ ತಡೆ ನೀಡಿದೆ. ಶಾಸಕರ ವಿರುದ್ಧ ಪುತ್ತೂರು, ಬೆಳ್ತಂಗಡಿ ಮತ್ತು ಬಂಟ್ವಾಳ ಪೊಲೀಸ್ ಠಾಣೆಗಳಲ್ಲಿ ಮೂರು ದೂರುಗಳು ದಾಖಲಾಗಿದ್ದವು.

ಪೂಂಜಾ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ಐಪಿಸಿ ಸೆಕ್ಷನ್ 153ಎ ಅಡಿಯಲ್ಲಿ ಪ್ರಕರಣ ದಾಖಲಿಸುವುದು ಸೂಕ್ತವಲ್ಲ. ಅದಕ್ಕಾಗಿಯೇ ಪೂಂಜಾ ವಿರುದ್ಧ ಎಫ್‌ಐಆರ್ ದಾಖಲಿಸಲು ವಿಳಂಬವಾಗಿದೆ. ಹೇಳಿಕೆಯ ನಂತರ ಯಾವುದೇ ಹಿಂಸಾಚಾರದ ಘಟನೆಗಳು ವರದಿಯಾಗಿಲ್ಲ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟರು. ವಾದವನ್ನು ಆಲಿಸಿ, ಪರಿಗಣಿಸಿದ ಪೀಠವು ತನಿಖೆಗೆ ತಡೆಯಾಜ್ಞೆ ನೀಡಿದೆ.

ಇತ್ತೀಚೆಗೆ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಹಿಂದೂ ಕಾರ್ಯಕರ್ತ ಸತ್ಯಜಿತ್ ಸುರತ್ಕಲ್ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ನಡೆಸಿದ್ದರು ಎನ್ನಲಾಗಿತ್ತು. ಈ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿದ್ದ ಪೂಂಜಾ, ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರ ಹೇಳಿಕೆಯ ಆಡಿಯೋ ಮತ್ತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ ಸಿದ್ದರಾಮಯ್ಯನವರಿಗೆ ಮತ ಯಾಚಿಸಿದ್ದೀರಿ. ಭಜರಂಗದಳವನ್ನು ನಿಷೇಧಿಸಲು ಮುಂದಾಗಿರುವ ಕಾಂಗ್ರೆಸ್‌ಗೆ ಮತ ಕೇಳಿದ್ದೀರಿ ಎಂದು ಪೂಂಜಾ ಹೇಳಿದ್ದರು.

ಇದನ್ನೂ ಓದಿ: ಅಶ್ವತ್ಥನಾರಾಯಣ, ಹರೀಶ್ ಪೂಂಜಾ ವಿರುದ್ಧ ಕ್ರಮ: ಡಿಜಿ ಐಜಿಪಿ ಅಲೋಕ್ ಮೋಹನ್

2013ರಿಂದ 2018ರ ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ ಕರಾವಳಿ ಕರ್ನಾಟಕ ಭಾಗದಲ್ಲಿ, ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯು ಹಿಂದೂ ಕಾರ್ಯಕರ್ತರ ಸರಣಿ ಹತ್ಯೆಗಳಿಗೆ ಸಾಕ್ಷಿಯಾಗಿದೆ ಎಂದು ಬಿಜೆಪಿ ಹೇಳುತ್ತಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪಿಎಫ್‌ಐ ಮತ್ತು ಎಸ್‌ಡಿಪಿಐ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಹಿಂಪಡೆದು ಆರೋಪಿಗಳನ್ನು ರಕ್ಷಿಸುತ್ತಿದೆ ಎಂದು ಕೇಸರಿ ಪಕ್ಷ ಆರೋಪಿಸಿದೆ.

ಬಿಜೆಪಿ ಇದನ್ನು 2018 ರ ಚುನಾವಣಾ ವಿಷಯವಾಗಿಸಿತ್ತು ಮತ್ತು ಕರಾವಳಿ ಪ್ರದೇಶದಲ್ಲಿ ಚುನಾವಣೆಗಳಲ್ಲಿ ಗೆದ್ದಿತ್ತು. ಆದರೆ, ಈ ಆರೋಪಗಳನ್ನು ತಳ್ಳಿಹಾಕಿರುವ ಸಿದ್ದರಾಮಯ್ಯ, ವೈಯುಕ್ತಿಕ ದ್ವೇಷ ಹಾಗೂ ವೈಷಮ್ಯದಿಂದ ಕೊಲೆ ನಡೆದಿದೆ ಎಂದು ಹೇಳಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!