AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕ ಭಾಗದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು;ಭೋಜೇಗೌಡ ಗಂಭೀರ ಆರೋಪ

ಇತ್ತೀಚೆಗಷ್ಟೇ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಬಂದಿದೆ. ಈ ಮಧ್ಯೆ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ(SL Bhojegowda) ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ಹೌದು, ಉತ್ತರ ಕರ್ನಾಟಕ ಭಾಗದಲ್ಲಿ ಮಾಸ್​ ಕಾಪಿ ಆಗುತ್ತಿತ್ತು ಎಂದು ಆರೋಪಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು;ಭೋಜೇಗೌಡ ಗಂಭೀರ ಆರೋಪ
ಭೋಜೇಗೌಡ
ಅಶೋಕ್​ ಪೂಜಾರಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: May 19, 2024 | 3:55 PM

Share

ದಕ್ಷಿಣ ಕನ್ನಡ, ಮೇ.19: ಈ ಹಿಂದೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ(SSLC Exam)ಯಲ್ಲಿ ಮಾಸ್ ಕಾಪಿ‌ ಆಗುತ್ತಿತ್ತು ಎಂದು ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ(SL Bhojegowda) ಆರೋಪ ಮಾಡಿದ್ದಾರೆ. ಇದು ವಿದ್ಯಾರ್ಥಿಗಳ ಭವಿಷ್ಯದ ವಿದ್ಯಾಭ್ಯಾಸಕ್ಕೆ ಮಾರಕವಾಗುತ್ತಿತ್ತು. ಈ ಹಿನ್ನಲೆ ನೈರುತ್ಯ ಕ್ಷೇತ್ರಗಳಿಗೆ ಪರೀಕ್ಷೆ ಸಮಯ ಅನ್ಯಾಯ ಆಗುತ್ತಿರುವ ಬಗ್ಗೆ ವಿಧಾನ ಪರಿಷತ್‌ನಲ್ಲಿ ಹೇಳಿದ್ದೆ. ಜೊತೆಗೆ ಪರೀಕ್ಷೆ ವೇಳೆ ಸಿಸಿಟಿವಿ ಅಳವಡಿಕೆ ಕುರಿತು ಪರಿಷತ್​​ನಲ್ಲಿ ಆಗ್ರಹಿಸಿದ್ದೆ ಎಂದರು.

ಮಂಗಳೂರಿನಲ್ಲಿ ಮಾತನಾಡಿದ ಅವರು, ‘ ಆಗ ಆ ಭಾಗದಲ್ಲಿ ಮಾಸ್ ಕಾಪಿ‌ ಆಗ್ತಾ ಇತ್ತು ಎಂದು ಪರೋಕ್ಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಕಾಪಿ ಆಗುತ್ತಿತ್ತು ಎಂದು ಆರೋಪಿಸಿದ್ದಾರೆ. ಅದನ್ನು ತಡೆದು ಮಾಸ್ ಕಾಪಿ ನಿಲ್ಲಿಸಲು‌ ಕ್ಯಾಮಾರ ಹಾಕಲು ಹೇಳಿದ್ದೆ. ಅದರ ಪರಿಣಾಮ ಈ ಬಾರಿ‌ ಪರೀಕ್ಷೆಯಲ್ಲಿ ಸಿಸಿಟಿವಿ ಹಾಕಿದ್ದಾರೆ. ಹೀಗಾಗಿ ಈ ಬಾರಿ ಸರಿಯಾಗಿ ಪರೀಕ್ಷೆ ನಡೆದು ಫಲಿತಾಂಶ ಬಂದಿದೆ ಎಂದರು.

ಇದನ್ನೂ ಓದಿ:ಯಾದಗಿರಿ: ಎಸ್‌ಎಸ್‌ಎಲ್‌ಸಿ‌ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು

ಬಹಳ ಹಿಂದಿನಿಂದಲೂ ಅನ್ಯಾಯ ಆಗ್ತಾ ಇದೆ ಎಂದು ಹೋರಾಟ ಮಾಡಿದ್ದೆ. ನಿಜವಾದ ಶಿಕ್ಷಣ ಸಿಗಬೇಕು ಎಂದು  ಪರಿಷತ್​ನಲ್ಲಿ‌ ಆಗ್ರಹಿಸಿದ್ದೆ. ಈಗ ನಾವು ಮತ್ತೆ ಅದರ ಬಗ್ಗೆ ಧ್ವನಿ ಎತ್ತಬೇಕಿದೆ. ಈ ಹಿಂದಿನ ಅನಾಹುತದ ತಪ್ಪಿತಸ್ಥರ ಮೇಲೆ ಕ್ರಮ ಆಗಬೇಕು. ಈಗಿನ ರಿಸಲ್ಟ್ ನೋಡಿಯಾದ್ರೂ ಹಿಂದಿನ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಈ ಬಗ್ಗೆ ನಾನು ಮುಂದೆ ಪರಿಷತ್​ನಲ್ಲಿ ಆಗ್ರಹ‌ ಮಾಡುತ್ತೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!