AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕ ಭಾಗದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು;ಭೋಜೇಗೌಡ ಗಂಭೀರ ಆರೋಪ

ಇತ್ತೀಚೆಗಷ್ಟೇ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಬಂದಿದೆ. ಈ ಮಧ್ಯೆ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ(SL Bhojegowda) ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ಹೌದು, ಉತ್ತರ ಕರ್ನಾಟಕ ಭಾಗದಲ್ಲಿ ಮಾಸ್​ ಕಾಪಿ ಆಗುತ್ತಿತ್ತು ಎಂದು ಆರೋಪಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು;ಭೋಜೇಗೌಡ ಗಂಭೀರ ಆರೋಪ
ಭೋಜೇಗೌಡ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: May 19, 2024 | 3:55 PM

Share

ದಕ್ಷಿಣ ಕನ್ನಡ, ಮೇ.19: ಈ ಹಿಂದೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ(SSLC Exam)ಯಲ್ಲಿ ಮಾಸ್ ಕಾಪಿ‌ ಆಗುತ್ತಿತ್ತು ಎಂದು ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ(SL Bhojegowda) ಆರೋಪ ಮಾಡಿದ್ದಾರೆ. ಇದು ವಿದ್ಯಾರ್ಥಿಗಳ ಭವಿಷ್ಯದ ವಿದ್ಯಾಭ್ಯಾಸಕ್ಕೆ ಮಾರಕವಾಗುತ್ತಿತ್ತು. ಈ ಹಿನ್ನಲೆ ನೈರುತ್ಯ ಕ್ಷೇತ್ರಗಳಿಗೆ ಪರೀಕ್ಷೆ ಸಮಯ ಅನ್ಯಾಯ ಆಗುತ್ತಿರುವ ಬಗ್ಗೆ ವಿಧಾನ ಪರಿಷತ್‌ನಲ್ಲಿ ಹೇಳಿದ್ದೆ. ಜೊತೆಗೆ ಪರೀಕ್ಷೆ ವೇಳೆ ಸಿಸಿಟಿವಿ ಅಳವಡಿಕೆ ಕುರಿತು ಪರಿಷತ್​​ನಲ್ಲಿ ಆಗ್ರಹಿಸಿದ್ದೆ ಎಂದರು.

ಮಂಗಳೂರಿನಲ್ಲಿ ಮಾತನಾಡಿದ ಅವರು, ‘ ಆಗ ಆ ಭಾಗದಲ್ಲಿ ಮಾಸ್ ಕಾಪಿ‌ ಆಗ್ತಾ ಇತ್ತು ಎಂದು ಪರೋಕ್ಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಕಾಪಿ ಆಗುತ್ತಿತ್ತು ಎಂದು ಆರೋಪಿಸಿದ್ದಾರೆ. ಅದನ್ನು ತಡೆದು ಮಾಸ್ ಕಾಪಿ ನಿಲ್ಲಿಸಲು‌ ಕ್ಯಾಮಾರ ಹಾಕಲು ಹೇಳಿದ್ದೆ. ಅದರ ಪರಿಣಾಮ ಈ ಬಾರಿ‌ ಪರೀಕ್ಷೆಯಲ್ಲಿ ಸಿಸಿಟಿವಿ ಹಾಕಿದ್ದಾರೆ. ಹೀಗಾಗಿ ಈ ಬಾರಿ ಸರಿಯಾಗಿ ಪರೀಕ್ಷೆ ನಡೆದು ಫಲಿತಾಂಶ ಬಂದಿದೆ ಎಂದರು.

ಇದನ್ನೂ ಓದಿ:ಯಾದಗಿರಿ: ಎಸ್‌ಎಸ್‌ಎಲ್‌ಸಿ‌ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು

ಬಹಳ ಹಿಂದಿನಿಂದಲೂ ಅನ್ಯಾಯ ಆಗ್ತಾ ಇದೆ ಎಂದು ಹೋರಾಟ ಮಾಡಿದ್ದೆ. ನಿಜವಾದ ಶಿಕ್ಷಣ ಸಿಗಬೇಕು ಎಂದು  ಪರಿಷತ್​ನಲ್ಲಿ‌ ಆಗ್ರಹಿಸಿದ್ದೆ. ಈಗ ನಾವು ಮತ್ತೆ ಅದರ ಬಗ್ಗೆ ಧ್ವನಿ ಎತ್ತಬೇಕಿದೆ. ಈ ಹಿಂದಿನ ಅನಾಹುತದ ತಪ್ಪಿತಸ್ಥರ ಮೇಲೆ ಕ್ರಮ ಆಗಬೇಕು. ಈಗಿನ ರಿಸಲ್ಟ್ ನೋಡಿಯಾದ್ರೂ ಹಿಂದಿನ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಈ ಬಗ್ಗೆ ನಾನು ಮುಂದೆ ಪರಿಷತ್​ನಲ್ಲಿ ಆಗ್ರಹ‌ ಮಾಡುತ್ತೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More