
ದಕ್ಷಿಣ ಕನ್ನಡ, ಮೇ.19: ಈ ಹಿಂದೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ(SSLC Exam)ಯಲ್ಲಿ ಮಾಸ್ ಕಾಪಿ ಆಗುತ್ತಿತ್ತು ಎಂದು ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ(SL Bhojegowda) ಆರೋಪ ಮಾಡಿದ್ದಾರೆ. ಇದು ವಿದ್ಯಾರ್ಥಿಗಳ ಭವಿಷ್ಯದ ವಿದ್ಯಾಭ್ಯಾಸಕ್ಕೆ ಮಾರಕವಾಗುತ್ತಿತ್ತು. ಈ ಹಿನ್ನಲೆ ನೈರುತ್ಯ ಕ್ಷೇತ್ರಗಳಿಗೆ ಪರೀಕ್ಷೆ ಸಮಯ ಅನ್ಯಾಯ ಆಗುತ್ತಿರುವ ಬಗ್ಗೆ ವಿಧಾನ ಪರಿಷತ್ನಲ್ಲಿ ಹೇಳಿದ್ದೆ. ಜೊತೆಗೆ ಪರೀಕ್ಷೆ ವೇಳೆ ಸಿಸಿಟಿವಿ ಅಳವಡಿಕೆ ಕುರಿತು ಪರಿಷತ್ನಲ್ಲಿ ಆಗ್ರಹಿಸಿದ್ದೆ ಎಂದರು.
ಮಂಗಳೂರಿನಲ್ಲಿ ಮಾತನಾಡಿದ ಅವರು, ‘ ಆಗ ಆ ಭಾಗದಲ್ಲಿ ಮಾಸ್ ಕಾಪಿ ಆಗ್ತಾ ಇತ್ತು ಎಂದು ಪರೋಕ್ಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಕಾಪಿ ಆಗುತ್ತಿತ್ತು ಎಂದು ಆರೋಪಿಸಿದ್ದಾರೆ. ಅದನ್ನು ತಡೆದು ಮಾಸ್ ಕಾಪಿ ನಿಲ್ಲಿಸಲು ಕ್ಯಾಮಾರ ಹಾಕಲು ಹೇಳಿದ್ದೆ. ಅದರ ಪರಿಣಾಮ ಈ ಬಾರಿ ಪರೀಕ್ಷೆಯಲ್ಲಿ ಸಿಸಿಟಿವಿ ಹಾಕಿದ್ದಾರೆ. ಹೀಗಾಗಿ ಈ ಬಾರಿ ಸರಿಯಾಗಿ ಪರೀಕ್ಷೆ ನಡೆದು ಫಲಿತಾಂಶ ಬಂದಿದೆ ಎಂದರು.
ಇದನ್ನೂ ಓದಿ:ಯಾದಗಿರಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು
ಬಹಳ ಹಿಂದಿನಿಂದಲೂ ಅನ್ಯಾಯ ಆಗ್ತಾ ಇದೆ ಎಂದು ಹೋರಾಟ ಮಾಡಿದ್ದೆ. ನಿಜವಾದ ಶಿಕ್ಷಣ ಸಿಗಬೇಕು ಎಂದು ಪರಿಷತ್ನಲ್ಲಿ ಆಗ್ರಹಿಸಿದ್ದೆ. ಈಗ ನಾವು ಮತ್ತೆ ಅದರ ಬಗ್ಗೆ ಧ್ವನಿ ಎತ್ತಬೇಕಿದೆ. ಈ ಹಿಂದಿನ ಅನಾಹುತದ ತಪ್ಪಿತಸ್ಥರ ಮೇಲೆ ಕ್ರಮ ಆಗಬೇಕು. ಈಗಿನ ರಿಸಲ್ಟ್ ನೋಡಿಯಾದ್ರೂ ಹಿಂದಿನ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಈ ಬಗ್ಗೆ ನಾನು ಮುಂದೆ ಪರಿಷತ್ನಲ್ಲಿ ಆಗ್ರಹ ಮಾಡುತ್ತೇನೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ