AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara Daiva: ವಿವಾದಕ್ಕೀಡಾದ ಯುವತಿ, ಕಾಂತಾರ ಸಿನಿಮಾದ ದೈವದ ದೃಶ್ಯ ರೀಲ್ಸ್ ಮಾಡಿ ಅಪಮೌಲ್ಯ: ಭಕ್ತರು ಕಿಡಿಕಿಡಿ

ಆಕ್ರೋಶ ಹೆಚ್ಚಾದಂತೆ ಎಚ್ಚೆತ್ತುಕೊಂಡ ಯುವತಿ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿದ್ದ ವಿಡಿಯೋವನ್ನು ರಿಮೂವ್ ಮಾಡಿದ್ದಾಳೆ. ಆದ್ರೆ ಈ ವಿಡಿಯೋ ಈಗಾಗಲೇ ವೈರಲ್ ಆಗಿದ್ದು ಖಾತೆಯಿಂದ ವಿಡಿಯೋ ಡಿಲೀಟ್ ಆದರೂ ಯುವತಿಯ ವಿರುದ್ದದ ಆಕ್ರೋಶ ಹಾಗೆ ಇದೆ.

Kantara Daiva: ವಿವಾದಕ್ಕೀಡಾದ ಯುವತಿ, ಕಾಂತಾರ ಸಿನಿಮಾದ ದೈವದ ದೃಶ್ಯ ರೀಲ್ಸ್ ಮಾಡಿ ಅಪಮೌಲ್ಯ: ಭಕ್ತರು ಕಿಡಿಕಿಡಿ
ವಿವಾದಕ್ಕೀಡಾದ ಯುವತಿ, ಕಾಂತಾರ ಸಿನಿಮಾದ ದೈವದ ದೃಶ್ಯ ರೀಲ್ಸ್ ಮಾಡಿ ಅಪಮೌಲ್ಯ: ಭಕ್ತರು ಕಿಡಿಕಿಡಿ
TV9 Web
| Edited By: |

Updated on:Oct 27, 2022 | 7:38 PM

Share

ಕೆಜಿಎಫ್​ನಂತಹ ಬ್ಲಾಕ್​ಬಸ್ಟರ್​ ಹಿಟ್​ ಸಿನಿಮಾದ ದಾಖಲೆಯನ್ನೇ ಮುರಿದಿರುವ ಕಾಂತಾರ ಸಿನಿಮಾ ಸಿನಿ ಪರದೆ ಮೇಲೆ ಸಖತ್​ ಸದ್ದು ಮಾಡ್ತಾನೇ ಇದೆ. ಕಾಂತಾರ ಸಿನಿಮಾದಲ್ಲಿ ರಿಷಭ್​ ಶೆಟ್ಟಿ ಕಟ್ಟಿದ್ದ ದೈವದ ವೇಷ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಕಾಂತಾರ ಸಿನಿಮಾ ವೀಕ್ಷಣೆ ಬಳಿಕ ಯುವತಿಯೊಬ್ಬಳು ದೈವ ಪಾತ್ರಿಯಂತೆ ವೇಷ ಧರಿಸಿ ದೈವಾರಾಧನೆಯ ರೀಲ್ಸ್​ ಮಾಡಿ ಹುಚ್ಚಾಟ ಮೆರೆದಿದ್ದು ಕರಾವಳಿಗರ ಕಣ್ಣು ಕೆಂಪಗಾಗಿಸಿದೆ.

ಪಂಜುರ್ಲಿ ದೈವವನ್ನು ಅನುಕರಿಸಲು ಹೋಗಿ ವಿವಾದಕ್ಕೀಡಾದ ಯುವತಿ

ದೈವಾರಾಧನೆ ಎಂಬುದು ತುಳುನಾಡಿನ ಜನತೆಯ ಪಾಲಿಗೆ ಜೀವಾಳವಿದ್ದಂತೆ. ಆದರೆ ಕಾಂತಾರ ಸಿನಿಮಾವನ್ನು ನೋಡಿದ ಈ ಯುವತಿಯೊಬ್ಬಳು ಥೇಟ್​ ಪಂಜುರ್ಲಿಯಂತೆ ವೇಷ ಧರಿಸಿ ಕುಣಿದು ಕುಪ್ಪಳಿಸಿ ರೀಲ್ಸ್​ ಮಾಡಿದ್ದಾಳೆ. ವೃತ್ತಿಯಲ್ಲಿ ಮೇಕಪ್​ ಆರ್ಟಿಸ್ಟ್​ ಆಗಿರುವ ಶ್ವೇತಾ ರೆಡ್ಡಿ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ರೀತಿ ರೀಲ್ಸ್ ಮಾಡಿದ್ದು ಸಾಮಾಜಿಕ ತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. (ವರದಿ: ಅಶೋಕ್, ಟಿವಿ 9, ಮಂಗಳೂರು)

ಕಾಂತಾರ ಸಿನಿಮಾದ ವರಹಾ ರೂಪಂ ಹಾಡಿಗೆ ರೀಲ್ಸ್ ಮಾಡಲು ಯುವತಿ ದೈವಾರಾಧನೆಯನ್ನು ಅಣಕ ಮಾಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಯುವತಿ ವಿರುದ್ದ ಮಂಗಳೂರಿನಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ದೈವಾರಾಧಕರು ಸಿನಿಮಾ ನೋಡಿ ಹುಡುಗಿ ಬಣ್ಣ ಹಚ್ಚಿ ಕಿರೀಟ ಕಟ್ಟಿ ಹುಚ್ಚಾಟ ನಡೆಸಿದ್ದಾಳೆ. ಮೌಲ್ಯಯುತವಾದದನ್ನು ಅಪಮೌಲ್ಯಗೊಳಿಸಿದ್ದಾಳೆ ಎಂದು ಹೇಳಿದ್ದಾರೆ.

ದೈವಾರಾಧನೆ ಆಚರಣೆ ಮಾಡುವುದಕ್ಕೆ ಅದರದ್ದೇ ಆದ ರೀತಿ ರಿವಾಜುಗಳು ಇದೆ. ಆದ್ರೆ ಇದೇ ದೈವಾರಾಧನೆಯನ್ನು ಅಣಕ ಮಾಡಲು ಹೋಗಿರುವುದು ದೈವಾರಾಧಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಯುವತಿಯ ವಿರುದ್ದ ದೂರು ದಾಖಲಿಸುವಂತೆ ಒತ್ತಾಯ ಕೇಳಿಬಂದಿದೆ. ಈ ರೀತಿ ಮಾಡಿದ್ದಕ್ಕೆ ತಕ್ಕ ಶಾಸ್ತ್ರಿಯಾಗುತ್ತೆ ಎಂಬ ಕಮೆಂಟ್‌ಗಳನ್ನು ನೆಟ್ಟಿಗರು ಹಾಕಿದ್ದಾರೆ. ಆಕ್ರೋಶ ಹೆಚ್ಚಾದಂತೆ ಎಚ್ಚೆತ್ತುಕೊಂಡ ಯುವತಿ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿದ್ದ ವಿಡಿಯೋವನ್ನು ರಿಮೂವ್ ಮಾಡಿದ್ದಾಳೆ. ಆದ್ರೆ ಈ ವಿಡಿಯೋ ಈಗಾಗಲೇ ವೈರಲ್ ಆಗಿದ್ದು ಖಾತೆಯಿಂದ ವಿಡಿಯೋ ಡಿಲೀಟ್ ಆದರೂ ಯುವತಿಯ ವಿರುದ್ದದ ಆಕ್ರೋಶ ಹಾಗೆ ಇದೆ.

ಕಾಂತಾರ ಸಿನಿಮಾದ ಬಳಿಕ ಸಿನಿಮಾದ ಕೆಲ ವಿಚಾರಗಳನ್ನು ಅಣಕು ಮಾಡುವುದಕ್ಕೆ ಕೆಲ ಮಂದಿ ಮುಂದಾಗಿದ್ದರು. ಹೀಗಾಗಿ ಸ್ವತ ನಟ ರಿಷಬ್ ಶೆಟ್ಟಿ ಈ ರೀತಿ ಯಾರು ಅಣಕು ಮಾಡದಂತೆ ಕೇಳಿಕೊಂಡಿದ್ದರು. ಸದ್ಯ ಇದೀಗ ಯುವತಿ ಈ ರೀತಿ ವೇಷ ಹಾಕಿ ಅಣಕು ಮಾಡಿರುವುದು ಸಾಕಷ್ಟು ವಿರೋಧಕ್ಕೆ ಕಾರಣವಾಗಿದೆ.

Published On - 7:33 pm, Thu, 27 October 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್