AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara Daiva: ವಿವಾದಕ್ಕೀಡಾದ ಯುವತಿ, ಕಾಂತಾರ ಸಿನಿಮಾದ ದೈವದ ದೃಶ್ಯ ರೀಲ್ಸ್ ಮಾಡಿ ಅಪಮೌಲ್ಯ: ಭಕ್ತರು ಕಿಡಿಕಿಡಿ

ಆಕ್ರೋಶ ಹೆಚ್ಚಾದಂತೆ ಎಚ್ಚೆತ್ತುಕೊಂಡ ಯುವತಿ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿದ್ದ ವಿಡಿಯೋವನ್ನು ರಿಮೂವ್ ಮಾಡಿದ್ದಾಳೆ. ಆದ್ರೆ ಈ ವಿಡಿಯೋ ಈಗಾಗಲೇ ವೈರಲ್ ಆಗಿದ್ದು ಖಾತೆಯಿಂದ ವಿಡಿಯೋ ಡಿಲೀಟ್ ಆದರೂ ಯುವತಿಯ ವಿರುದ್ದದ ಆಕ್ರೋಶ ಹಾಗೆ ಇದೆ.

Kantara Daiva: ವಿವಾದಕ್ಕೀಡಾದ ಯುವತಿ, ಕಾಂತಾರ ಸಿನಿಮಾದ ದೈವದ ದೃಶ್ಯ ರೀಲ್ಸ್ ಮಾಡಿ ಅಪಮೌಲ್ಯ: ಭಕ್ತರು ಕಿಡಿಕಿಡಿ
ವಿವಾದಕ್ಕೀಡಾದ ಯುವತಿ, ಕಾಂತಾರ ಸಿನಿಮಾದ ದೈವದ ದೃಶ್ಯ ರೀಲ್ಸ್ ಮಾಡಿ ಅಪಮೌಲ್ಯ: ಭಕ್ತರು ಕಿಡಿಕಿಡಿ
TV9 Web
| Edited By: |

Updated on:Oct 27, 2022 | 7:38 PM

Share

ಕೆಜಿಎಫ್​ನಂತಹ ಬ್ಲಾಕ್​ಬಸ್ಟರ್​ ಹಿಟ್​ ಸಿನಿಮಾದ ದಾಖಲೆಯನ್ನೇ ಮುರಿದಿರುವ ಕಾಂತಾರ ಸಿನಿಮಾ ಸಿನಿ ಪರದೆ ಮೇಲೆ ಸಖತ್​ ಸದ್ದು ಮಾಡ್ತಾನೇ ಇದೆ. ಕಾಂತಾರ ಸಿನಿಮಾದಲ್ಲಿ ರಿಷಭ್​ ಶೆಟ್ಟಿ ಕಟ್ಟಿದ್ದ ದೈವದ ವೇಷ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಕಾಂತಾರ ಸಿನಿಮಾ ವೀಕ್ಷಣೆ ಬಳಿಕ ಯುವತಿಯೊಬ್ಬಳು ದೈವ ಪಾತ್ರಿಯಂತೆ ವೇಷ ಧರಿಸಿ ದೈವಾರಾಧನೆಯ ರೀಲ್ಸ್​ ಮಾಡಿ ಹುಚ್ಚಾಟ ಮೆರೆದಿದ್ದು ಕರಾವಳಿಗರ ಕಣ್ಣು ಕೆಂಪಗಾಗಿಸಿದೆ.

ಪಂಜುರ್ಲಿ ದೈವವನ್ನು ಅನುಕರಿಸಲು ಹೋಗಿ ವಿವಾದಕ್ಕೀಡಾದ ಯುವತಿ

ದೈವಾರಾಧನೆ ಎಂಬುದು ತುಳುನಾಡಿನ ಜನತೆಯ ಪಾಲಿಗೆ ಜೀವಾಳವಿದ್ದಂತೆ. ಆದರೆ ಕಾಂತಾರ ಸಿನಿಮಾವನ್ನು ನೋಡಿದ ಈ ಯುವತಿಯೊಬ್ಬಳು ಥೇಟ್​ ಪಂಜುರ್ಲಿಯಂತೆ ವೇಷ ಧರಿಸಿ ಕುಣಿದು ಕುಪ್ಪಳಿಸಿ ರೀಲ್ಸ್​ ಮಾಡಿದ್ದಾಳೆ. ವೃತ್ತಿಯಲ್ಲಿ ಮೇಕಪ್​ ಆರ್ಟಿಸ್ಟ್​ ಆಗಿರುವ ಶ್ವೇತಾ ರೆಡ್ಡಿ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ರೀತಿ ರೀಲ್ಸ್ ಮಾಡಿದ್ದು ಸಾಮಾಜಿಕ ತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. (ವರದಿ: ಅಶೋಕ್, ಟಿವಿ 9, ಮಂಗಳೂರು)

ಕಾಂತಾರ ಸಿನಿಮಾದ ವರಹಾ ರೂಪಂ ಹಾಡಿಗೆ ರೀಲ್ಸ್ ಮಾಡಲು ಯುವತಿ ದೈವಾರಾಧನೆಯನ್ನು ಅಣಕ ಮಾಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಯುವತಿ ವಿರುದ್ದ ಮಂಗಳೂರಿನಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ದೈವಾರಾಧಕರು ಸಿನಿಮಾ ನೋಡಿ ಹುಡುಗಿ ಬಣ್ಣ ಹಚ್ಚಿ ಕಿರೀಟ ಕಟ್ಟಿ ಹುಚ್ಚಾಟ ನಡೆಸಿದ್ದಾಳೆ. ಮೌಲ್ಯಯುತವಾದದನ್ನು ಅಪಮೌಲ್ಯಗೊಳಿಸಿದ್ದಾಳೆ ಎಂದು ಹೇಳಿದ್ದಾರೆ.

ದೈವಾರಾಧನೆ ಆಚರಣೆ ಮಾಡುವುದಕ್ಕೆ ಅದರದ್ದೇ ಆದ ರೀತಿ ರಿವಾಜುಗಳು ಇದೆ. ಆದ್ರೆ ಇದೇ ದೈವಾರಾಧನೆಯನ್ನು ಅಣಕ ಮಾಡಲು ಹೋಗಿರುವುದು ದೈವಾರಾಧಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಯುವತಿಯ ವಿರುದ್ದ ದೂರು ದಾಖಲಿಸುವಂತೆ ಒತ್ತಾಯ ಕೇಳಿಬಂದಿದೆ. ಈ ರೀತಿ ಮಾಡಿದ್ದಕ್ಕೆ ತಕ್ಕ ಶಾಸ್ತ್ರಿಯಾಗುತ್ತೆ ಎಂಬ ಕಮೆಂಟ್‌ಗಳನ್ನು ನೆಟ್ಟಿಗರು ಹಾಕಿದ್ದಾರೆ. ಆಕ್ರೋಶ ಹೆಚ್ಚಾದಂತೆ ಎಚ್ಚೆತ್ತುಕೊಂಡ ಯುವತಿ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿದ್ದ ವಿಡಿಯೋವನ್ನು ರಿಮೂವ್ ಮಾಡಿದ್ದಾಳೆ. ಆದ್ರೆ ಈ ವಿಡಿಯೋ ಈಗಾಗಲೇ ವೈರಲ್ ಆಗಿದ್ದು ಖಾತೆಯಿಂದ ವಿಡಿಯೋ ಡಿಲೀಟ್ ಆದರೂ ಯುವತಿಯ ವಿರುದ್ದದ ಆಕ್ರೋಶ ಹಾಗೆ ಇದೆ.

ಕಾಂತಾರ ಸಿನಿಮಾದ ಬಳಿಕ ಸಿನಿಮಾದ ಕೆಲ ವಿಚಾರಗಳನ್ನು ಅಣಕು ಮಾಡುವುದಕ್ಕೆ ಕೆಲ ಮಂದಿ ಮುಂದಾಗಿದ್ದರು. ಹೀಗಾಗಿ ಸ್ವತ ನಟ ರಿಷಬ್ ಶೆಟ್ಟಿ ಈ ರೀತಿ ಯಾರು ಅಣಕು ಮಾಡದಂತೆ ಕೇಳಿಕೊಂಡಿದ್ದರು. ಸದ್ಯ ಇದೀಗ ಯುವತಿ ಈ ರೀತಿ ವೇಷ ಹಾಕಿ ಅಣಕು ಮಾಡಿರುವುದು ಸಾಕಷ್ಟು ವಿರೋಧಕ್ಕೆ ಕಾರಣವಾಗಿದೆ.

Published On - 7:33 pm, Thu, 27 October 22

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!