AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು ಬಡವರಿಗೆ ಸೂರಿನ ಆಸರೆ ಕಲ್ಪಿಸುತ್ತಿದ್ದಾರೆ, ಬಿರುವೆರ್ ಕುಡ್ಲ ಸಂಘಟನೆ ಸುಸಜ್ಜಿತ 7ನೇ ಮನೆ ನಿರ್ಮಿಸಿಕೊಟ್ಟಿತು!

Biruver Kudla organization: ಬಿರುವೆರ್ ಕುಡ್ಲ ಸಂಘಟನೆ - 8 ವರ್ಷದಲ್ಲಿ 8 ಕೋಟಿಗೂ ಹೆಚ್ಚು ಹಣವನ್ನು ಅಶಕ್ತ ಕುಟುಂಬಗಳ ಸಹಾಯಕ್ಕಾಗಿ ನೀಡಿದೆ.

ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು ಬಡವರಿಗೆ ಸೂರಿನ ಆಸರೆ ಕಲ್ಪಿಸುತ್ತಿದ್ದಾರೆ, ಬಿರುವೆರ್ ಕುಡ್ಲ ಸಂಘಟನೆ ಸುಸಜ್ಜಿತ 7ನೇ ಮನೆ ನಿರ್ಮಿಸಿಕೊಟ್ಟಿತು!
ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು ಬಡವರಿಗೆ ಸೂರಿನ ಆಸರೆ ಕಲ್ಪಿಸುತ್ತಿದ್ದಾರೆ!
ಅಶೋಕ್​ ಪೂಜಾರಿ, ಮಂಗಳೂರು
| Edited By: ಸಾಧು ಶ್ರೀನಾಥ್​|

Updated on: Jun 27, 2023 | 12:49 PM

Share

ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ ಕಟ್ಟಿಕೊಟ್ಟು ಆಸರೆಯಾಗುತ್ತಿದೆ. ಇದೀಗ ಮಹಾಸೇವಾ ಯೋಜನೆಯ ಅಡಿ ಏಳನೇ ನೂತನ ಮನೆಯನ್ನು ಬಡ ಕುಟಂಬಕ್ಕೆ ಹಸ್ತಾಂತರಿಸಿ ಸಾರ್ಥಕತೆ ಮೆರೆದಿದೆ. ಹೌದು..ನಮ್ಮನ್ನಾಳುವ ಸರ್ಕಾರಗಳು ಎಷ್ಟೇ ಯೋಜನೆಗಳನ್ನು ಜಾರಿಗೊಳಿಸಿದ್ರು ಇಂದಿಗೂ ಸಹ ಸರಿಯಾದ ಸೂರು ಇಲ್ಲದ ಅದೆಷ್ಟೋ ಕುಟಂಬಗಳು ನಮ್ಮ ಜಿಲ್ಲೆ, ರಾಜ್ಯ, ದೇಶದಲ್ಲಿವೆ. ಆದ್ರೆ ಸರ್ಕಾರದ ಯೋಜನೆಗಳಿಗೆ ಕಾಯದೆ ಸಮಾಜದಲ್ಲಿರುವ ಅಶಕ್ತರ ಬಾಳಲ್ಲಿ ಬೆಳಕು ಮೂಡಿಸುವ ಕೆಲಸವನ್ನು ಮಂಗಳೂರಿನ ಯುವಕರ ತಂಡವೊಂದು ಮಾಡುತ್ತಿದೆ. ಬಿರುವೆರ್ ಕುಡ್ಲ ಎಂಬ ಹೆಸರಿನ ಸಂಘಟನೆಯ (Biruver Kudla organization) ಯುವಕರು ಇಂದೋ ನಾಳೆಯೋ ಕುಸಿದು ಬೀಳುವ ಸ್ಥಿತಿಯಲ್ಲಿರುವ ಮನೆಯ ಕುಟುಂಬಗಳಿಗೆ ಮನೆ ಕಟ್ಟಿಕೊಟ್ಟು ಆಸರೆಯಾಗುತ್ತಿದೆ.

ಇದೀಗ ಮಂಗಳೂರು ಹೊರವಲಯದ (Mangalore outskirts) ಬಜಪೆ ಸಮೀಪದ ಮುಂಡಬೆಟ್ಟು (Mundabettu) ಎಂಬಲ್ಲಿ ಬಡಕುಟುಂಬವೊಂದಕ್ಕೆ ಸುಮಾರು 12 ಲಕ್ಷ ರೂ ವೆಚ್ಚದಲ್ಲಿ ಸುಸಜ್ಜಿತ ಮನೆಯನ್ನು ನಿರ್ಮಿಸಿಕೊಟ್ಟಿದೆ. ದಯಾನಂದ ಬಂಗೇರ ಕುಟಂಬವು ಕಡು ಬಡತನದಲ್ಲಿ ಜೀವನ ಸಾಗಿಸುತ್ತಿತ್ತು. ವಾಸಿಸಲು ಯೋಗ್ಯವಾದ ಮನೆಯಿಲ್ಲದೆ ಗುಡಿಸಲಿನಲ್ಲಿ ವಾಸಿಸುತ್ತಿದ್ದರು. ಇದೀಗ ಅವರ ಕಷ್ಟಕ್ಕೆ ನೆರವಾಗಿರುವ ಬಿರುವೆರ್ ಕುಡ್ಲ ಬಜಪೆ ಘಟಕ ನೂತನ ಮನೆಯನ್ನು ನಿರ್ಮಿಸಿ ಗಣ್ಯರ ಸಮ್ಮುಖದಲ್ಲಿ ಹಸ್ತಾಂತರಿಸಿದೆ.

ಈ ಬಿರುವೆರ್ ಕುಡ್ಲ ಸಂಘಟನೆಯಲ್ಲಿ ನಿತ್ಯದ, ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರಿಂದ ಹಿಡಿದು ಸಣ್ಣಪುಟ್ಟ ಉದ್ಯಮ ನಡೆಸುವ ಯುವಕರು ಇದ್ದಾರೆ. ಎಂಟು ವರ್ಷದ ಹಿಂದೆ ಆರಂಭಿಸಲಾದ ಈ ಸಂಘಟನೆ ಅದೆಷ್ಟೋ ಕುಟುಂಬಗಳ ಕಣ್ಣೀರು ಒರೆಸಿದೆ. ಈಗಾಗಲೇ ನಗರ ಹೊರವಲಯದ ಮುಡಿಪು ಸಮೀಪ ಬೀಳುವ ಸ್ಥಿತಿಯಲ್ಲಿದ್ದ ಮನೆಯನ್ನು ಕೆಡವಿ ನೂತನ ಮನೆಯ ನಿರ್ಮಾಣ ಕಾರ್ಯ ಮಾಡುತ್ತಿದೆ.

ಒಟ್ಟು ಎಂಟು ವರ್ಷದಲ್ಲಿ ಎಂಟು ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಅಶಕ್ತ ಕುಟುಂಬಗಳ ಸಹಾಯಕ್ಕಾಗಿ ನೀಡಿದೆ. ಕೇವಲ ಮನೆ ನಿರ್ಮಾಣ ಮಾತ್ರವಲ್ಲದೆ ಪ್ರತಿ ತಿಂಗಳು ಒಬ್ಬೊಬ್ಬ ಅನಾರೋಗ್ಯ ಪೀಡಿತರ ಚಿಕಿತ್ಸೆಗಾಗಿ 50 ಸಾವಿರ ಧನ ಸಹಾಯ ನೀಡುತ್ತಾ ಬಂದಿದೆ. ಇದರ ಜೊತೆ ಉಚಿತ ಆ್ಯಂಬುಲೆನ್ಸ್ ಸೇವೆಯನ್ನು ಒದಗಿಸುತ್ತಿದೆ. ಈ ಸಂಘಟನೆಯಲ್ಲಿ ಮೂರು ಜಿಲ್ಲೆಯಲ್ಲಿ ಒಟ್ಟು 24 ಘಟಕಗಳಿದ್ದು ಇದರ ಸದಸ್ಯರೆಲ್ಲಾ ಒಟ್ಟು ಸೇರಿ ಸೇವಾ ಯೋಜನೆಯನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ.

ಯಾವುದೇ ಜಾತಿ, ಧರ್ಮದ ಭೇದವಿಲ್ಲದೆ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಸಂದೇಶದಡಿ ಈ ಯುವಕರ ತಂಡ ಸೇವೆ ಮಾಡುತ್ತಿದೆ. ತಮ್ಮ ಮನೆಯಲ್ಲಿ ಸರಿಯಾದ ಸೌಕರ್ಯವಿಲ್ಲದಿದ್ದರೂ ಸಹ ಎಲ್ಲರೂ ಒಟ್ಟು ಸೇರಿ ತಮಗಿಂತಲೂ ಕೆಳ ಹಂತದಲ್ಲಿರುವ ಬಡವರ ಕಣ್ಣೀರ ಒರೆಸುವ ಕೆಲಸ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಈ ಸಂಘಟನೆ ಮಾಡುತ್ತಿರುವ ಈ ಸೇವಾ ಕಾರ್ಯ ಇತರರಿಗೂ ಮಾದರಿಯಾಗಿ ಇನ್ನಷ್ಟು ಮಂದಿ ಅಶಕ್ತರ ಬಾಳಿಗೆ ಬೆಳಕಾಗಲಿ ಎಂಬುದೇ ನಮ್ಮ ಆಶಯ.

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು