AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ, ಕಾಂಗ್ರೆಸ್​ ಸರ್ಕಾರ ಈವರೆಗೆ 1 ಪೈಸೆ ಪರಿಹಾರ ನೀಡಿಲ್ಲ, ಇದರಲ್ಲೂ ತಾರತಮ್ಯ ಏಕೆ: ಶರತ್​ ಮಡಿವಾಳ ತಂದೆ ಆರೋಪ

ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ ಆದ ಬೆನ್ನೆಲೆ, ತಮಗೂ ಪರಿಹಾರ ನೀಡುವಂತೆ 2017ರ ಜು.7ರಂದು ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದ ಶರತ್ ಮಡಿವಾಳ ತಂದೆ ತನಿಯಪ್ಪ ಮನವಿ ಮಾಡಿದ್ದಾರೆ.

ಬಿಜೆಪಿ, ಕಾಂಗ್ರೆಸ್​ ಸರ್ಕಾರ ಈವರೆಗೆ 1 ಪೈಸೆ ಪರಿಹಾರ ನೀಡಿಲ್ಲ, ಇದರಲ್ಲೂ ತಾರತಮ್ಯ ಏಕೆ: ಶರತ್​ ಮಡಿವಾಳ ತಂದೆ ಆರೋಪ
ತಂದೆ ತನಿಯಪ್ಪ, ಶರತ್ ಮಡಿವಾಳ
ಗಂಗಾಧರ​ ಬ. ಸಾಬೋಜಿ
|

Updated on:Jun 17, 2023 | 5:22 PM

Share

ಮಂಗಳೂರು: ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರಿಗೆ ರಾಜ್ಯ ಸರ್ಕಾರ ಶುಕ್ರವಾರ ತಲಾ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಆದರೆ 2017ರ ಜು.7ರಂದು ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದ ಶರತ್ ಮಡಿವಾಳ (sharath madiwala) ರಿಗೆ ಯಾವುದೇ ಪರಿಹಾರ ನೀಡಿಲ್ಲ. ಇದರಲ್ಲಿಯೂ ತಾರತಮ್ಯ ಧೋರಣೆ ಅನುಸರಿಲಾಗುತ್ತಿದೆ ಎಂದು ಶರತ್ ಮಡಿವಾಳ ಅವರ ತಂದೆ ತನಿಯಪ್ಪ ಆರೋಪ ಮಾಡಿದ್ದಾರೆ.

ಮಗನ ಸಾವಿಗೆ ಈವರೆಗೂ ನ್ಯಾಯ ಸಿಕ್ಕಿಲ್ಲವೆಂದು ಕೊರಗುತ್ತಿರುವ ತಂದೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ.ರೋಡ್​ನಲ್ಲಿ ಲಾಂಡ್ರಿಯಲ್ಲಿ ಕೆಲಸ ಮುಗಿಸಿ ಅಂಗಡಿ ಬಾಗಿಲು ಹಾಕುವ ಸಂದರ್ಭದಲ್ಲಿ ದುಷ್ಕರ್ಮಿಗಳಿಂದ ದಾಳಿ ಮಾಡಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ RSS ಕಾರ್ಯಕರ್ತ ಶರತ್ ಮಡಿವಾಳ, ಚಿಕಿತ್ಸೆ ಫಲಕಾರಿಯಾಗದೆ ಜುಲೈ 7 ರಂದು ಕೊನೆಯುಸಿರೆಳೆದಿದ್ದ. ಇಂದಿಗೂ ತನಿಯಪ್ಪ ಮಡಿವಾಳ (74) ಲಾಂಡ್ರಿಯಲ್ಲಿ ದುಡಿಯುತ್ತಿದ್ದ, ಮಗನ ಸಾವಿಗೆ ಈವರೆಗೂ ನ್ಯಾಯ ಸಿಕ್ಕಿಲ್ಲವೆಂದು ಕೊರಗುತ್ತಿದ್ದಾರೆ.

ಇದನ್ನೂ ಓದಿ: ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ 4 ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

1 ಪೈಸೆ ಪರಿಹಾರ ನೀಡಿಲ್ಲ

ಶರತ್ ಮಡಿವಾಳ ಹತ್ಯೆಯಾಗಿ ಇಷ್ಟು ವರ್ಷಗಳಾದರೂ ಬಿಜೆಪಿ ಅಥವಾ ಕಾಂಗ್ರೆಸ್​ ಸರ್ಕಾರ ಈವರೆಗೆ 1 ಪೈಸೆ ಪರಿಹಾರ ನೀಡಿಲ್ಲ. ನಮ್ಮ ಸಮಸ್ಯೆ, ಕಷ್ಟಗಳಿಗೆ ಯಾವುದೇ ಸರ್ಕಾರ ಸ್ಪಂದಿಸಿಲ್ಲವೆಂದು ತಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನನ್ನ ಮಗನನ್ನು ಕೊಲೆ ಮಾಡಿಸಿದ್ದು ರಮಾನಾಥ ರೈ – ಬಂಟ್ವಾಳದ ಆರ್​ಎಸ್​ಎಸ್ ​​ಕಾರ್ಯಕರ್ತ ಶರತ್ ಮಡಿವಾಳ ತಂದೆ ಆರೋಪ

ನನ್ನ ಮಗನ ಹತ್ಯೆ ಪ್ರಕರಣದಲ್ಲಿ ಸರಿಯಾಗಿ ತನಿಖೆಯಾಗಿಲ್ಲ. ಪ್ರಕರಣದ ತನಿಖೆಯನ್ನು ಎನ್​ಐಎ ಅಥವಾ ಸಿಬಿಐಗೆ ವಹಿಸಬೇಕು. ರಾಜ್ಯ ಸರ್ಕಾರ ನಮ್ಮ ಕುಟುಂಬಕ್ಕೆ ಕೂಡಲೇ ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ಶರತ್ ಮಡಿವಾಳ ತಂದೆ ತನಿಯಪ್ಪ ಮಡಿವಾಳ ಒತ್ತಾಯಿಸಿದ್ದಾರೆ.

ಕರಾವಳಿಯಲ್ಲಿ ಕೋಮುದ್ವೇಷಕ್ಕೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮಸೂದ್, ಫಾಜಿಲ್, ಜಲೀಲ್ ಹಾಗೂ ದೀಪಕ್ ರಾವ್ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಣೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:21 pm, Sat, 17 June 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ