AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲಪಾಡಿ ಗ್ರಾ.ಪಂ. ಚುನಾವಣೆ: ಎಸ್​​​ಡಿಪಿಐ ಬೆಂಬಲಿಸಿಲ್ಲ ಎಂದ ಬಿಜೆಪಿ ನಾಯಕರು, ತೇಜಸ್ವಿ ಸೂರ್ಯ, ಅಮಿತ್ ಮಾಳವೀಯ ಹೇಳಿದ್ದೇನು?

Talapady Grama Panchayat Elections; ಪಂಚಾಯತ್ ಚುನಾವಣೆಗಳು ಪಕ್ಷದ ಆಧಾರದ ಮೇಲೆ ನಡೆಯುವುದಿಲ್ಲ. ಈ ಚುನಾವಣೆಯಲ್ಲಿ ಬಿಜೆಪಿ ಎಸ್‌ಡಿಪಿಐ ಅಥವಾ ಇನ್ನಾವುದೇ ಪಕ್ಷವನ್ನು ಬೆಂಬಲಿಸಿಲ್ಲ. ಅಂತಹ ಸುದ್ದಿಗಳನ್ನು ಪ್ರಕಟಿಸುವ ಮೊದಲು ಮಾಧ್ಯಮಗಳು ಸತ್ಯ ಏನೆಂಬುದನ್ನು ಪರಿಶೀಲಿಸಲಿ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

ತಲಪಾಡಿ ಗ್ರಾ.ಪಂ. ಚುನಾವಣೆ: ಎಸ್​​​ಡಿಪಿಐ ಬೆಂಬಲಿಸಿಲ್ಲ ಎಂದ ಬಿಜೆಪಿ ನಾಯಕರು, ತೇಜಸ್ವಿ ಸೂರ್ಯ, ಅಮಿತ್ ಮಾಳವೀಯ ಹೇಳಿದ್ದೇನು?
ಪುಷ್ಪಾವತಿ ಶೆಟ್ಟಿ & ಟಿ ಇಸ್ಮಾಯಿಲ್‌
TV9 Web
| Edited By: |

Updated on: Aug 11, 2023 | 4:42 PM

Share

ಬೆಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಳ್ಳಾಲ ತಾಲೂಕಿನ ತಲಪಾಡಿ (Talapady) ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ (BJP) ಬೆಂಬಲಿತ ಸದಸ್ಯರ ಅಡ್ಡಮತದಾನದಿಂದ ಎಸ್​ಡಿಪಿಐ (SDPI) ಬೆಂಬಲಿತ ಅಭ್ಯರ್ಥಿಗೆ ಅಧ್ಯಕ್ಷ ಸ್ಥಾನ ದೊರೆತಿದೆ ಎಂಬ ಮಾಧ್ಯಮ ವರದಿಗಳನ್ನು ಬಿಜೆಪಿ ನಾಯಕರು ಶುಕ್ರವಾರ ಅಲ್ಲಗಳೆದಿದ್ದಾರೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಈ ಕುರಿತ ವರದಿಯನ್ನು ಸುಳ್ಳು ಸುದ್ದಿ ಎಂದು ಕರೆದಿದ್ದಾರೆ. ಅದೇ ರೀತಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಕೂಡ ಅದನ್ನು ಸುಳ್ಳು ಸುದ್ದಿ ಎಂದು ಟ್ವೀಟ್ ಮಾಡಿದ್ದಾರೆ.

ಪಂಚಾಯತ್ ಚುನಾವಣೆಗಳು ಪಕ್ಷದ ಆಧಾರದ ಮೇಲೆ ನಡೆಯುವುದಿಲ್ಲ. ಈ ಚುನಾವಣೆಯಲ್ಲಿ ಬಿಜೆಪಿ ಎಸ್‌ಡಿಪಿಐ ಅಥವಾ ಇನ್ನಾವುದೇ ಪಕ್ಷವನ್ನು ಬೆಂಬಲಿಸಿಲ್ಲ. ಅಂತಹ ಸುದ್ದಿಗಳನ್ನು ಪ್ರಕಟಿಸುವ ಮೊದಲು ಮಾಧ್ಯಮಗಳು ಸತ್ಯ ಏನೆಂಬುದನ್ನು ಪರಿಶೀಲಿಸಲಿ ಎಂದು ತೇಜಸ್ವಿ ಸೂರ್ಯ ಸಾಮಾಜಿಕ ಮಾಧ್ಯಮ ವೇದಿಕೆ ಟ್ವಿಟರ್​​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಿಜೆಪಿಯ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಕೂಡ ಇದೇ ರೀತಿಯ ಪ್ರತಿಕ್ರಿಯೆ ನೀಡಿದ್ದಾರೆ. ‘ಇದು ನಕಲಿ ಸುದ್ದಿ. ಮೊದಲಿಗೆ, ಕರ್ನಾಟಕದಲ್ಲಿ ಪಂಚಾಯತ್ ಚುನಾವಣೆಯಲ್ಲಿ ಯಾವುದೇ ಪಕ್ಷದ ಚಿಹ್ನೆಗಳನ್ನು ಬಳಸುವುದಿಲ್ಲ. ಹಾಗಾದರೆ ಮೈತ್ರಿ ಹೇಗೆ ಸಾಧ್ಯ? ಜತೆಗೆ ಎಸ್‌ಡಿಪಿಐಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ ಎಂದು ಅವರು ಟ್ವೀಟ್​​ನಲ್ಲಿ ಉಲ್ಲೇಖಿಸಿದ್ದಾರೆ.

ಗುರುವಾರ ತಲಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಸ್‌ಡಿಪಿಐ ಸದಸ್ಯ ಟಿ ಇಸ್ಮಾಯಿಲ್‌ ಆಯ್ಕೆಯಾಗಿದ್ದರು. ಎಸ್‌ಡಿಪಿಐ ಅನ್ನು ನಿಷೇಧಿತ ಇಸ್ಲಾಮಿಸ್ಟ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ರಾಜಕೀಯ ವಿಭಾಗವೆಂದು ಪರಿಗಣಿಸಲಾಗಿದೆ. ಉಪಾಧ್ಯಕ್ಷರಾಗಿ ಬಿಜೆಪಿಯ ಪುಷ್ಪಾವತಿ ಶೆಟ್ಟಿ ಆಯ್ಕೆಯಾಗಿದ್ದರು.

ಇದನ್ನೂ ಓದಿ: ತಲಪಾಡಿ ಗ್ರಾ.ಪಂ. ಚುನಾವಣೆ: ಬಿಜೆಪಿ ಬೆಂಬಲಿತ ಸದಸ್ಯರಿಂದ ಎಸ್​ಡಿಪಿಐಗೆ ದಕ್ಕಿದ ಅಧ್ಯಕ್ಷ ಸ್ಥಾನ 

ಅಧ್ಯಕ್ಷ ಸ್ಥಾನದ ಚುನಾವಣೆಯ ಮತ ಎಣಿಕೆ ವೇಳೆ ಬಿಜೆಪಿ ಬೆಂಬಲಿತ ಇಬ್ಬರು ಸದಸ್ಯರು ಎಸ್​ಡಿಪಿಐ ಬೆಂಬಲಿತ ಅಭ್ಯರ್ಥಿಗೆ ಅಡ್ಡ ಮತದಾನ ಮಾಡಿರುವುದು ತಿಳಿದು ಬಂದಿದೆ ಎನ್ನಲಾಗಿತ್ತು.

ಈ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಕೂಡ ಟ್ವೀಟ್ ಮಾಡಿ, ಬಿಜೆಪಿ ಹಾಗೂ ಎಸ್​ಡಿಪಿಐ ಸಂಬಂಧ – ಮೇಲೆ ಲಡಾಯಿ, ಒಳಗೊಳಗೆ ಭಾಯಿ ಭಾಯಿ ಎಂದು ಉಲ್ಲೇಖಿಸಿತ್ತು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ