AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಗ್ರಾ.ಪಂ ಅಧ್ಯಕ್ಷ ಚುನಾವಣೆಯಲ್ಲಿ SDPI ಜೊತೆ ಒಪ್ಪಂದ; ಇಬ್ಬರು ಸದಸ್ಯರಿಗೆ ಬಿಜೆಪಿ ಗೇಟ್​ ಪಾಸ್

ದಕ್ಷಿಣ ಕನ್ನಡ ಜಿಲ್ಲೆಯ ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆಯಲ್ಲಿ ಎಸ್​ಡಿಪಿಐಗೆ ಅಡ್ಡಮತದಾನ ಮಾಡಿದ್ದ ಇಬ್ಬರು ಸದಸ್ಯರಿಗೆ ಬಿಜೆಪಿ ಗೇಟ್​ಪಾಸ್ ನೀಡಿದೆ.

ಮಂಗಳೂರು: ಗ್ರಾ.ಪಂ ಅಧ್ಯಕ್ಷ ಚುನಾವಣೆಯಲ್ಲಿ SDPI ಜೊತೆ ಒಪ್ಪಂದ; ಇಬ್ಬರು ಸದಸ್ಯರಿಗೆ ಬಿಜೆಪಿ ಗೇಟ್​ ಪಾಸ್
ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎಸ್​ಡಿಪಿಐಗೆ ಅಡ್ಡಮತದಾನ ಮಾಡಿದ ಬಿಜೆಪಿ ಬೆಂಬಲಿತ ಇಬ್ಬರು ಸದಸ್ಯರ ಉಚ್ಛಾಟನೆ
TV9 Web
| Edited By: |

Updated on:Aug 11, 2023 | 11:13 PM

Share

ಮಂಗಳೂರು, ಆಗಸ್ಟ್ 11: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ತಲಪಾಡಿ (Talapady) ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನದಕ್ಕೆ ನಡೆದ ಚುನಾವಣೆಯಲ್ಲಿ ಎಸ್​ಡಿಪಿಐ (SDPI) ಬೆಂಬಲಿತ ಸದಸ್ಯರಿಗೆ ಅಡ್ಡಮತದಾನ ಮಾಡಿದ ಇಬ್ಬರು ಸದಸ್ಯರಿಗೆ ಬಿಜೆಪಿ (BJP) ಗೇಟ್​ ಪಾಸ್ ನೀಡಿದೆ. ಅಡ್ಡಮತದಾನದ ಬಗ್ಗೆ ಮಾಧ್ಯಮ ವರದಿಗಳನ್ನು ಬಿಜೆಪಿ ನಾಯಕರು ಅಳ್ಳಗಳೆದ ಬೆನ್ನಲ್ಲೇ ಈ ಕ್ರಮ ಜರುಗಿಸಿಲಾಗಿದೆ.

ಎಸ್​ಡಿಪಿಐ ಜೊತೆ ಸ್ವಂತ ಪಕ್ಷದ ಸದಸ್ಯರ ಒಳ ಒಪ್ಪಂದದಿಂದ ಬಿಜೆಪಿಗೆ ಸೋಲಾದ ಹಿನ್ನೆಲೆ ಅಡ್ಡಮತದಾನ ಚಲಾಯಿಸಿದ ಬಿಜೆಪಿ ಬೆಂಬಲಿತ ಸದಸ್ಯರಾದ ಮಹಮ್ಮದ್‌ ಫಯಾಝ್‌ ಮತ್ತು ಮಹಮ್ಮದ್‌ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಚಂದ್ರಹಾಸ್‌ ಪಂಡಿತ್‌ ಹೌಸ್ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ ಮಹಮ್ಮದ್‌ ಫಯಾಝ್‌ ಮತ್ತು ಮಹಮ್ಮದ್‌ ಅವರು ಅಧ್ಯಕ್ಷ ಚುನಾವಣೆಯಲ್ಲಿ ಎಸ್​ಡಿಪಿಐ ಬೆಂಬಲಿತ ಅಭ್ಯರ್ಥಿ ಇಸ್ಮಾಯಿಲ್ ಅವರಿಗೆ ಅಡ್ಡಮತದಾನ ಚಲಾಯಿಸಿದ್ದರು. ಆ ಮೂಲಕ ಎಸ್​ಡಿಪಿಐ ಗೆಲುವಿಗೆ ಕಾರಣಕರ್ತರಾಗಿದ್ದರು.

ಇದನ್ನೂ ಓದಿ: ತಲಪಾಡಿ ಗ್ರಾ.ಪಂ. ಚುನಾವಣೆ: ಎಸ್​​​ಡಿಪಿಐ ಬೆಂಬಲಿಸಿಲ್ಲ ಎಂದ ಬಿಜೆಪಿ ನಾಯಕರು, ತೇಜಸ್ವಿ ಸೂರ್ಯ, ಅಮಿತ್ ಮಾಳವೀಯ ಹೇಳಿದ್ದೇನು?

ತಲಪಾಡಿ ಗ್ರಾಮ ಪಂಚಾಯತ್ ಆಡಳಿತದಲ್ಲಿ ಒಟ್ಟು 24 ವಾರ್ಡುಗಳಿವೆ. ಇದರಲ್ಲಿ 13 ಬಿಜೆಪಿ ಬೆಂಬಲಿತ ಸದಸ್ಯರು, 10 ಎಸ್​ಡಿಪಿಐ ಬೆಂಬಲಿತ ಸದಸ್ಯರು ಹಾಗೂ ಓರ್ವ ಕಾಂಗ್ರೆಸ್ ಸದಸ್ಯರಿದ್ದಾರೆ. ಅಧ್ಯಕ್ಷ ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ ಬೆಂಬಲಿತ ವೈಭವ್ ವೈ ಶೆಟ್ಟಿ ಮತ್ತು ಎಸ್​​ಡಿಪಿಐ ಬೆಂಬಲಿತ ಹಬೀಬಾ ಡಿ.ಬಿ ಗೈರಾಗಿದ್ದರು. ಹೀಗಾಗಿ ಬಹುಮತದ ಕಾರಣ ಬಿಜೆಪಿ ಸದಸ್ಯ ಸತ್ಯರಾಜ್‌ ಗೆಲ್ಲುವ ಸಾಧ್ಯತೆ ಇತ್ತು.

ಆದರೆ ಕೊನೆಯ ಕ್ಷಣದಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಾದ ಮಹಮ್ಮದ್‌ ಫಯಾಝ್‌ ಮತ್ತು ಮಹಮ್ಮದ್‌ ಅವರು ಎಸ್​ಡಿಪಿಐ ಬೆಂಬಲಿತ ಅಭ್ಯರ್ಥಿಗೆ ಬೆಂಬಲ ಸೂಚಿಸಿದ ಹಿನ್ನೆಲೆ ಇಸ್ಮಾಯಿಲ್‌ ಮತ್ತು ಬಿಜೆಪಿ ಸತ್ಯರಾಜ್‌ ನಡುವೆ ಸಮಬಲ ಸಾಧಿಸಿತ್ತು. ಕೊನೆಗೆ ಚೀಟಿ ಎತ್ತಲಾಗಿದ್ದು, ಇದರಲ್ಲಿ ಅಧ್ಯಕ್ಷ ಸ್ಥಾನ ಇಸ್ಮಾಯಿಲ್ ಪಲಾಯಿತು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:13 pm, Fri, 11 August 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್